AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಕೆಂಗಣ್ಣು: ವೊಡಾಫೋನ್-ಏರ್​ಟೆಲ್ ನಂಬರ್ ಪೋರ್ಟೆಬಿಲಿಟಿ ವಿರುದ್ಧ TRAI ಕದ ತಟ್ಟಿದ ರಿಲಯನ್ಸ್ ಜಿಯೋ

ದೇಶದ ಉತ್ತರ ಭಾಗಗಳಲ್ಲಿ ನಡೆಸುತ್ತಿರುವ ರೈತ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ಲಾಭ ಮಾಡಿಕೊಳ್ಳಲು ಏರ್​ಟೆಲ್, ಐಡಿಯಾ ಮತ್ತು ವೊಡಾಫೋನ್ ಮೊಬೈಲ್ ನಂಬರ್ ಪೋರ್ಟೆಬಿಲಿಟಿ(MNP) ಅಭಿಯಾನವನ್ನು ಸಾರಿತ್ತಿದೆ ಎಂದು ರಿಲಯನ್ಸ್ ಜಿಯೋ ಇನ್ಫೋಕಾಮ್ ಆರೋಪಿಸಿದೆ

ರೈತರ ಕೆಂಗಣ್ಣು: ವೊಡಾಫೋನ್-ಏರ್​ಟೆಲ್ ನಂಬರ್ ಪೋರ್ಟೆಬಿಲಿಟಿ ವಿರುದ್ಧ TRAI ಕದ ತಟ್ಟಿದ ರಿಲಯನ್ಸ್ ಜಿಯೋ
ಪ್ರಾತಿನಿಧಿಕ ಚಿತ್ರ
shruti hegde
| Updated By: ಸಾಧು ಶ್ರೀನಾಥ್​|

Updated on:Dec 15, 2020 | 12:48 PM

Share

ಬೆಂಗಳೂರು: ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿನ ರೈತರ ಪ್ರತಿಭಟನೆಯ ಮಧ್ಯೆ ಲಾಭಗಳಿಸಿಕೊಳ್ಳಲು ವೊಡಾಫೋನ್ ಐಡಿಯಾ ಮತ್ತು ಭಾರ್ತಿ ಏರ್​ಟೆಲ್ ಸಂಚು ಹೂಡಿವೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಿಲಯನ್ಸ್ ಜಿಯೋ ಇನ್ಫೋಕಾಮ್ ಸೋಮವಾರ ನಿಯಂತ್ರಣ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI)ಗೆ ಪತ್ರ ಬರೆದಿದೆ.

ದೇಶದ ಉತ್ತರ ಭಾಗಗಳಲ್ಲಿ ನಡೆಸುತ್ತಿರುವ ರೈತ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ಲಾಭ ಮಾಡಿಕೊಳ್ಳಲು ಏರ್​ಟೆಲ್ ಮತ್ತು ವೊಡಾಫೋನ್ ಐಡಿಯಾ ಮೊಬೈಲ್ ನಂಬರ್ ಪೋರ್ಟೆಬಿಲಿಟಿ (MNP) ಅಭಿಯಾನವನ್ನು ಸಾರುತ್ತಿದೆ ಎಂದು ಪತ್ರದಲ್ಲಿ ಹೇಳಿದೆ.

ರಿಲಯನ್ಸ್ ಜಿಯೋ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಏರ್​ಟೈಲ್, ‘ಏರ್​ಟೆಲ್ ಟೆಲಿಕಾಂ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ನಾವು ಮಾರುಕಟ್ಟೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ನಮ್ಮ ಗ್ರಾಹಕರಿಗೆ ಅತ್ಯುತ್ತಮವಾಗಿ ಸೇವೆ ಸಲ್ಲಿಸಲು ಶ್ರಮಿಸುತ್ತಿದ್ದೇವೆ. ನಮ್ಮ ಸ್ಪರ್ಧಿಗಳು ಮತ್ತು ಪಾಲುದಾರರನ್ನು ಗೌರವದಿಂದ ನಡೆಸಿಕೊಳ್ಳುವಲ್ಲಿ ನಾವು ಹೆಮ್ಮೆ ಪಡುತ್ತೇವೆ’ ಎಂದು ಹೇಳಿದೆ.

ನಾವು ನಮ್ಮ ವ್ಯವಹಾರಗಳನ್ನು ಪ್ರಾಮಾಣಿಕತೆಯಿಂದ ನಡೆಸಿದ್ದೇವೆ. ಕೆಲವು ಸ್ಪರ್ಧಿಗಳಿಂದ ಪ್ರಚೋದಿಸಲ್ಪಟ್ಟಿದ್ದರೂ, ಅಧಾರ ರಹಿತ ಆರೋಪಗಳನ್ನು ಮಾಡುವುದು, ಬೆದರಿಸುವ ತಂತ್ರಗಳನ್ನು ಹೂಡಿದರೆ ಎದಿರಿಸುತ್ತೇವೆ ಎಂದೂ ಭಾರತೀಯ ಏರ್​ಟೆಲ್ ಹೇಳಿದೆ.

ವೊಡಾಫೋನ್ ಐಡಿಯಾ ಕೂಡಾ ಆರೋಪಗಳನ್ನು ನಿರಾಕರಿಸಿ, ‘ಇವುಗಳೆಲ್ಲ ಆಧಾರ ರಹಿತ ಆರೋಪಗಳಾಗಿವೆ. ನಮ್ಮ ಪ್ರತಿಷ್ಠೆಯನ್ನು ಕೆಡಿಸಲು ಹೂಡಿರುವ ತಂತ್ರಗಳು ಎಂದು ಪ್ರತಿಕ್ರಿಯೆ ನೀಡಿದೆ.

ಟೆಲಿಕಾಂ ಕಂಪನಿಗಳಿಗೆ ಹೊಡೆತ, ಕೇಂದ್ರ ಸರ್ಕಾರಕ್ಕೆ ಬಂಪರ್ ಗಿಫ್ಟ್

Published On - 12:47 pm, Tue, 15 December 20

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ