AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಕೆಂಗಣ್ಣು: ವೊಡಾಫೋನ್-ಏರ್​ಟೆಲ್ ನಂಬರ್ ಪೋರ್ಟೆಬಿಲಿಟಿ ವಿರುದ್ಧ TRAI ಕದ ತಟ್ಟಿದ ರಿಲಯನ್ಸ್ ಜಿಯೋ

ದೇಶದ ಉತ್ತರ ಭಾಗಗಳಲ್ಲಿ ನಡೆಸುತ್ತಿರುವ ರೈತ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ಲಾಭ ಮಾಡಿಕೊಳ್ಳಲು ಏರ್​ಟೆಲ್, ಐಡಿಯಾ ಮತ್ತು ವೊಡಾಫೋನ್ ಮೊಬೈಲ್ ನಂಬರ್ ಪೋರ್ಟೆಬಿಲಿಟಿ(MNP) ಅಭಿಯಾನವನ್ನು ಸಾರಿತ್ತಿದೆ ಎಂದು ರಿಲಯನ್ಸ್ ಜಿಯೋ ಇನ್ಫೋಕಾಮ್ ಆರೋಪಿಸಿದೆ

ರೈತರ ಕೆಂಗಣ್ಣು: ವೊಡಾಫೋನ್-ಏರ್​ಟೆಲ್ ನಂಬರ್ ಪೋರ್ಟೆಬಿಲಿಟಿ ವಿರುದ್ಧ TRAI ಕದ ತಟ್ಟಿದ ರಿಲಯನ್ಸ್ ಜಿಯೋ
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on:Dec 15, 2020 | 12:48 PM

Share

ಬೆಂಗಳೂರು: ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿನ ರೈತರ ಪ್ರತಿಭಟನೆಯ ಮಧ್ಯೆ ಲಾಭಗಳಿಸಿಕೊಳ್ಳಲು ವೊಡಾಫೋನ್ ಐಡಿಯಾ ಮತ್ತು ಭಾರ್ತಿ ಏರ್​ಟೆಲ್ ಸಂಚು ಹೂಡಿವೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಿಲಯನ್ಸ್ ಜಿಯೋ ಇನ್ಫೋಕಾಮ್ ಸೋಮವಾರ ನಿಯಂತ್ರಣ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (TRAI)ಗೆ ಪತ್ರ ಬರೆದಿದೆ.

ದೇಶದ ಉತ್ತರ ಭಾಗಗಳಲ್ಲಿ ನಡೆಸುತ್ತಿರುವ ರೈತ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ಲಾಭ ಮಾಡಿಕೊಳ್ಳಲು ಏರ್​ಟೆಲ್ ಮತ್ತು ವೊಡಾಫೋನ್ ಐಡಿಯಾ ಮೊಬೈಲ್ ನಂಬರ್ ಪೋರ್ಟೆಬಿಲಿಟಿ (MNP) ಅಭಿಯಾನವನ್ನು ಸಾರುತ್ತಿದೆ ಎಂದು ಪತ್ರದಲ್ಲಿ ಹೇಳಿದೆ.

ರಿಲಯನ್ಸ್ ಜಿಯೋ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಏರ್​ಟೈಲ್, ‘ಏರ್​ಟೆಲ್ ಟೆಲಿಕಾಂ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ನಾವು ಮಾರುಕಟ್ಟೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ನಮ್ಮ ಗ್ರಾಹಕರಿಗೆ ಅತ್ಯುತ್ತಮವಾಗಿ ಸೇವೆ ಸಲ್ಲಿಸಲು ಶ್ರಮಿಸುತ್ತಿದ್ದೇವೆ. ನಮ್ಮ ಸ್ಪರ್ಧಿಗಳು ಮತ್ತು ಪಾಲುದಾರರನ್ನು ಗೌರವದಿಂದ ನಡೆಸಿಕೊಳ್ಳುವಲ್ಲಿ ನಾವು ಹೆಮ್ಮೆ ಪಡುತ್ತೇವೆ’ ಎಂದು ಹೇಳಿದೆ.

ನಾವು ನಮ್ಮ ವ್ಯವಹಾರಗಳನ್ನು ಪ್ರಾಮಾಣಿಕತೆಯಿಂದ ನಡೆಸಿದ್ದೇವೆ. ಕೆಲವು ಸ್ಪರ್ಧಿಗಳಿಂದ ಪ್ರಚೋದಿಸಲ್ಪಟ್ಟಿದ್ದರೂ, ಅಧಾರ ರಹಿತ ಆರೋಪಗಳನ್ನು ಮಾಡುವುದು, ಬೆದರಿಸುವ ತಂತ್ರಗಳನ್ನು ಹೂಡಿದರೆ ಎದಿರಿಸುತ್ತೇವೆ ಎಂದೂ ಭಾರತೀಯ ಏರ್​ಟೆಲ್ ಹೇಳಿದೆ.

ವೊಡಾಫೋನ್ ಐಡಿಯಾ ಕೂಡಾ ಆರೋಪಗಳನ್ನು ನಿರಾಕರಿಸಿ, ‘ಇವುಗಳೆಲ್ಲ ಆಧಾರ ರಹಿತ ಆರೋಪಗಳಾಗಿವೆ. ನಮ್ಮ ಪ್ರತಿಷ್ಠೆಯನ್ನು ಕೆಡಿಸಲು ಹೂಡಿರುವ ತಂತ್ರಗಳು ಎಂದು ಪ್ರತಿಕ್ರಿಯೆ ನೀಡಿದೆ.

ಟೆಲಿಕಾಂ ಕಂಪನಿಗಳಿಗೆ ಹೊಡೆತ, ಕೇಂದ್ರ ಸರ್ಕಾರಕ್ಕೆ ಬಂಪರ್ ಗಿಫ್ಟ್

Published On - 12:47 pm, Tue, 15 December 20

Follow Us
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ