AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಆಗುತ್ತಿರುವ ಖುಷಿ ನನಗೆ ಯಾವತ್ತೂ ಆಗಿಲ್ಲ, ಅಂಬರೀಶ್ ಕನಸು ಇದಾಗಿತ್ತು- ಸಂಸದೆ ಸುಮಲತಾ ಅಂಬರೀಶ್ ಸಂತಸ

Mandya Mysugar Factory: ನಾನು ಸಂಸದೆಯಾಗಿ 3 ವರ್ಷ ಕಳೆದಿವೆ. ಇಂದು ಆಗುತ್ತಿರುವ ಸಂತೋಷ ಯಾವತ್ತೂ ಆಗಿಲ್ಲ. ಮೈಶುಗರ್ ಚಾಲನೆ ಮಾಡಿಸುತ್ತೇನೆಂದು ಮಾತು ಕೊಟ್ಟಿದ್ದೆ.  ಮಂಡ್ಯ ರೈತರಿಗೆ ಇಂದು ಐತಿಹಾಸಿಕ ಹಾಗೂ ಸಂಭ್ರಮದ ದಿನ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಇಂದು ಆಗುತ್ತಿರುವ ಖುಷಿ ನನಗೆ ಯಾವತ್ತೂ ಆಗಿಲ್ಲ, ಅಂಬರೀಶ್ ಕನಸು ಇದಾಗಿತ್ತು- ಸಂಸದೆ ಸುಮಲತಾ ಅಂಬರೀಶ್ ಸಂತಸ
ಇಂದು ಆಗುತ್ತಿರುವ ಖುಷಿ ನನಗೆ ಯಾವತ್ತೂ ಆಗಿಲ್ಲ -ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್
TV9 Web
| Edited By: |

Updated on:Aug 11, 2022 | 9:15 PM

Share

ಮಂಡ್ಯ: ಇಂದು ಆಗುತ್ತಿರುವ ಖುಷಿ ನನಗೆ ಯಾವತ್ತೂ ಆಗಿಲ್ಲ ಎಂದು ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ (Mandya MP Sumalatha Ambareesh) ಸಂತಸ ವ್ಯಕ್ತಪಡಿಸಿದ್ದಾರೆ. ಸಂದರ್ಭ – ಇನ್ನೊಂದು ವಾರದಲ್ಲಿ ಮಂಡ್ಯ ಮೈಶುಗರ್ ಕಾರ್ಖಾನೆ (Mandya Mysugar Factory) ಆರಂಭವಾಗುತ್ತದೆ ಎಂದು ರಾಜ್ಯ ಬಿಜೆಪಿ ಸರ್ಕಾರ ಇಂದು Good News ಕೊಟ್ಟಿರುವ ಸಂದರ್ಭ. ನಾನು ಸಂಸದೆಯಾಗಿ ಮೂರು ವರ್ಷಗಳು ಕಳೆದಿವೆ. ಇಂದು ಆಗುತ್ತಿರುವ ಸಂತೋಷ ಯಾವತ್ತೂ ಆಗಿಲ್ಲ. ಮೈಶುಗರ್ ಚಾಲನೆ ಮಾಡಿಸುತ್ತೇನೆಂದು ಮಾತು ಕೊಟ್ಟಿದ್ದೆ. ಸಾಕಷ್ಟು ಜನರ ಸಹಕಾರದಿಂದ ಕಾರ್ಖಾನೆ ಶುರುವಾಗುತ್ತಿದೆ. ಮಂಡ್ಯ ರೈತರಿಗೆ ಇಂದು ಐತಿಹಾಸಿಕ ಹಾಗೂ ಸಂಭ್ರಮದ ದಿನ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಅಂಬರೀಶ್ ಅವರ ಕನಸು ಇದಾಗಿತ್ತು

ಅಂಬರೀಶ್ ಅವರ ಕನಸು ಇದಾಗಿತ್ತು. ಎಷ್ಟೋ ವರ್ಷಗಳ ಹೋರಾಟದ ಫಲವಿದು‌. ಮಂಡ್ಯ ಜಿಲ್ಲೆಯ ರೈತರಿಗೆ ಐತಿಹಾಸಿಕ ಹಾಗೂ ಸಂಭ್ರಮದ ದಿನ ಇದು. ಕೊರೋನಾ, ಪ್ರವಾಹದ ನಂತರ ಸಂಭ್ರಮಿಸಲು ಇದು ಅವಕಾಶ. ಮೈಶುಗರ್ ಆರಂಭಕ್ಕೆ ಸಹಕಾರ ಕೊಟ್ಟಿರುವ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಸುಮಲತಾ ಹೇಳಿದ್ದಾರೆ.

ಸರ್ಕಾರಿ ಸ್ವಾಮ್ಯದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಮೈಶುಗರ್ (Mysugar factory) ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆ.17 ಅಥವಾ 18ಕ್ಕೆ ಅಧಿಕೃತವಾಗಿ ಕಾರ್ಖಾನೆ ಪುನರಾರಂಭ ಸಾಧ್ಯತೆ ಎನ್ನಲಾಗುತ್ತಿದ್ದು, ಸಿಎಂ ಅವರಿಂದಲೇ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆಗೆ ಚಿಂತನೆ ನಡೆಸಲಾಗುತ್ತಿದೆ. 4 ವರ್ಷಗಳ ಬಳಿಕ ಕಾರ್ಖಾನೆಯಲ್ಲಿ ಯಂತ್ರಗಳ ಸದ್ದು ಮಾಡಲು ಸಿದ್ಧವಾಗಿವೆ. ಕಬ್ಬು ನುರಿಸುವ ಕಾರ್ಯಕ್ಕೆ ಮೈಶುಗರ್ ಕಾರ್ಖಾನೆ ಸಜ್ಜಾಗಿದ್ದು, ಇಂದು ಕಾರ್ಖಾನೆಯಲ್ಲಿ ಪೂಜೆ, ಹೋಮ-ಹವನ ನಡೆಯಲಿದೆ. ಜೊತೆಗೆ ಇಂದೇ ಬಾಯ್ಲರ್​ಗೆ ಅಗ್ನಿ ಸ್ಪರ್ಶ ನಡೆಯಲಿದೆ. ಯಂತ್ರೋಪಕರಣಗಳು ಕೆಟ್ಟು ಹೋಗಿದ್ದ ಹಿನ್ನೆಲೆ 4 ವರ್ಷಗಳಿಂದ ಮೈಶುಗರ್ ಕಾರ್ಖಾನೆ ಮುಚ್ಚಿತ್ತು. ಮೈಶುಗರ್ ಕಾರ್ಖಾನೆ ಪುನರಾರಂಭಕ್ಕೆ ಸಾಕಷ್ಟು ಹೋರಾಟಗಳು ನಡೆದಿದ್ದು, ಹೋರಾಟಕ್ಕೆ ಮಣಿದು ಕಾರ್ಖಾನೆ ಪುನರಾರಂಭಕ್ಕೆ ಸರ್ಕಾರ ಭರವಸೆ ನೀಡಿತ್ತು. ಸರ್ಕಾರದ ಭರವಸೆಯಂತೆ ಪುನರಾರಂಭಕ್ಕೆ ಮೈಶುಗರ್ ಸಜ್ಜಾಗಿದ್ದು, ಮಂಡ್ಯ ಜನರಲ್ಲಿ ಸಂತಸ ಮನೆ ಮಾಡಿದೆ.

Also Read:

ಇನ್ನೊಂದು ವಾರದಲ್ಲಿ ಮಂಡ್ಯ ಮೈಶುಗರ್ ಕಾರ್ಖಾನೆ ಆರಂಭ: ರೈತರಿಗೆ ಹರ್ಷ

Published On - 9:11 pm, Thu, 11 August 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್