AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki Car Price: ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಜ. 15ರಿಂದ ಏರಿಕೆ

ಮಾರುತಿ ಸುಜುಕಿ ಇಂಡಿಯಾದಿಂದ ಜನವರಿ 15ರಿಂದ ಅನ್ವಯ ಆಗುವಂತೆ ಕಾರುಗಳ ಬೆಲೆ ಏರಿಕೆ ಮಾಡಲಾಗಿದೆ. ಸರಾಸರಿ ಶೇಕಡಾವಾರು ಎಷ್ಟು ಹೆಚ್ಚಳ ಮಾಡಲಾಗಿದೆ ಎಂಬ ವಿವರ ಇಲ್ಲಿದೆ.

Maruti Suzuki Car Price: ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಜ. 15ರಿಂದ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 15, 2022 | 1:04 PM

Share

ದೇಶದ ಅತಿ ದೊಡ್ಡ ಕಾರು ತಯಾರಿಕೆ ಕಂಪೆನಿಯಾದ ಮಾರುತಿ ಸುಜುಕಿ ಇಂಡಿಯಾ (Maruti Suzuki India) ಶನಿವಾರದಂದು ತಿಳಿಸಿರುವಂತೆ, ಅದರ ಮಾಡೆಲ್​ಗಳ ಬೆಲೆಯನ್ನು ಶೇ 4.3ರ ತನಕ ಏರಿಕೆ ಮಾಡಿದೆ. ಇನ್​ಪುಟ್​ ವೆಚ್ಚಗಳ ಹೆಚ್ಚಳದ ಹಿನ್ನೆಲೆಯಲ್ಲಿ ಅದನ್ನು ಭಾಗಶಃ ಸರಿತೂಗಿಸಬೇಕು ಎಂಬ ಕಾರಣಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ತೀರ್ಮಾನಕ್ಕೆ ಬರಲಾಗಿದೆ. ಕಂಪೆನಿಯ ವಿವಿಧ ಮಾಡೆಲ್​ಗಳ ಕಾರುಗಳ ಬೆಲೆಯಲ್ಲಿ ಶೇ 0.1ರಿಂದ ಶೇ 4.3ರ ತನಕ ದರ ಹೆಚ್ಚಳ ಆಗಲಿದೆ. ವಿವಿಧ ಇನ್​ಪುಟ್​ ವೆಚ್ಚಗಳ ಏರಿಕೆ ಕಾರಣಕ್ಕೆ ಈ ಬೆಳವಣಿಗೆ ಆಗಲಿದೆ. “ವೇಯ್ಟೆಡ್ ಸರಾಸರಿ ಬೆಲೆಗಳ ಏರಿಕೆಯು ಎಕ್ಸ್​- ಶೋರೂಮ್​ ದರಗಳು (ದೆಹಲಿ) ಎಲ್ಲ ಮಾಡೆಲ್​ಗಳಲ್ಲಿ ಶೇ 1.7. ಹೊಸ ಬೆಲೆಗಳು ಇಂದಿನಿಂದ (ಜನವರಿ 15) ಜಾರಿಗೆ ಬರಲಿದೆ,” ಎಂದು ಮಾರುತಿ ಸುಜುಕಿ ಇಂಡಿಯಾ ನಿಯಂತ್ರಕ ಫೈಲಿಂಗ್​ನಲ್ಲಿ ಹೇಳಿದೆ.

ಮಾರುತಿ ಸುಜುಕಿಯಿಂದ ಆಲ್ಟೋದಿಂದ ಎಸ್​-ಕ್ರಾಸ್ ತನಕ ಕಾರುಗಳ ಮಾರಾಟ ಮಾಡಲಾಗುತ್ತದೆ. ಅವುಗಳ ದರವು ಕ್ರಮವಾಗಿ ರೂ. 3.15 ಲಕ್ಷದಿಂದ ರೂ. 12.56 ಲಕ್ಷದ ತನಕ ಇದೆ. ಕಳೆದ ವರ್ಷ ಮಾರುತಿ ಸುಜುಕಿ ಮೂರು ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜನವರಿಯಲ್ಲಿ ಶೇ 1.4ರಷ್ಟು, ಏಪ್ರಿಲ್​ನಲ್ಲಿ ಶೇ 1.6ರಷ್ಟು, ಸೆಪ್ಟೆಂಬರ್​ನಲ್ಲಿ ಶೇ 1.9ರಷ್ಟು ಹೀಗೆ ಒಟ್ಟಾರೆಯಾಗಿ ಶೇ 4.9ರಷ್ಟು ದರ ಇಳಿಕೆ ಮಾಡಲಾಗಿತ್ತು.

ಕಳೆದ ತಿಂಗಳು ಕಂಪೆನಿಯಿಂದ ಹೇಳಿದ ಪ್ರಕಾರ, ಅಗತ್ಯ ವಸ್ತುಗಳಾದ ಉಕ್ಕು, ಅಲ್ಯೂಮಿನಿಯಂ, ತಾಮ್ರ, ಪ್ಲಾಸ್ಟಿಕ್ ಮತ್ತು ಬೆಲೆಬಾಳುವ ಇತರ ಲೋಹಗಳ ಬೆಲೆಗಳು ಕಳೆದ ಒಂದು ವರ್ಷದಲ್ಲಿ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಆಗಿದೆ ಎಂದು ತಿಳಿಸಲಾಗಿತ್ತು.

ಇದನ್ನೂ ಓದಿ: Maruti Suzuki: ಚಿಪ್ ಕೊರತೆಯಿಂದ ಸತತ ಎರಡನೇ ತಿಂಗಳು ಮಾರುತಿ ಸುಜುಕಿ ಕಾರುಗಳ ಉತ್ಪಾದನೆ ಕುಂಠಿತ ಸಾಧ್ಯತೆ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್