AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki Car Price: ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಜ. 15ರಿಂದ ಏರಿಕೆ

ಮಾರುತಿ ಸುಜುಕಿ ಇಂಡಿಯಾದಿಂದ ಜನವರಿ 15ರಿಂದ ಅನ್ವಯ ಆಗುವಂತೆ ಕಾರುಗಳ ಬೆಲೆ ಏರಿಕೆ ಮಾಡಲಾಗಿದೆ. ಸರಾಸರಿ ಶೇಕಡಾವಾರು ಎಷ್ಟು ಹೆಚ್ಚಳ ಮಾಡಲಾಗಿದೆ ಎಂಬ ವಿವರ ಇಲ್ಲಿದೆ.

Maruti Suzuki Car Price: ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಜ. 15ರಿಂದ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 15, 2022 | 1:04 PM

Share

ದೇಶದ ಅತಿ ದೊಡ್ಡ ಕಾರು ತಯಾರಿಕೆ ಕಂಪೆನಿಯಾದ ಮಾರುತಿ ಸುಜುಕಿ ಇಂಡಿಯಾ (Maruti Suzuki India) ಶನಿವಾರದಂದು ತಿಳಿಸಿರುವಂತೆ, ಅದರ ಮಾಡೆಲ್​ಗಳ ಬೆಲೆಯನ್ನು ಶೇ 4.3ರ ತನಕ ಏರಿಕೆ ಮಾಡಿದೆ. ಇನ್​ಪುಟ್​ ವೆಚ್ಚಗಳ ಹೆಚ್ಚಳದ ಹಿನ್ನೆಲೆಯಲ್ಲಿ ಅದನ್ನು ಭಾಗಶಃ ಸರಿತೂಗಿಸಬೇಕು ಎಂಬ ಕಾರಣಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ತೀರ್ಮಾನಕ್ಕೆ ಬರಲಾಗಿದೆ. ಕಂಪೆನಿಯ ವಿವಿಧ ಮಾಡೆಲ್​ಗಳ ಕಾರುಗಳ ಬೆಲೆಯಲ್ಲಿ ಶೇ 0.1ರಿಂದ ಶೇ 4.3ರ ತನಕ ದರ ಹೆಚ್ಚಳ ಆಗಲಿದೆ. ವಿವಿಧ ಇನ್​ಪುಟ್​ ವೆಚ್ಚಗಳ ಏರಿಕೆ ಕಾರಣಕ್ಕೆ ಈ ಬೆಳವಣಿಗೆ ಆಗಲಿದೆ. “ವೇಯ್ಟೆಡ್ ಸರಾಸರಿ ಬೆಲೆಗಳ ಏರಿಕೆಯು ಎಕ್ಸ್​- ಶೋರೂಮ್​ ದರಗಳು (ದೆಹಲಿ) ಎಲ್ಲ ಮಾಡೆಲ್​ಗಳಲ್ಲಿ ಶೇ 1.7. ಹೊಸ ಬೆಲೆಗಳು ಇಂದಿನಿಂದ (ಜನವರಿ 15) ಜಾರಿಗೆ ಬರಲಿದೆ,” ಎಂದು ಮಾರುತಿ ಸುಜುಕಿ ಇಂಡಿಯಾ ನಿಯಂತ್ರಕ ಫೈಲಿಂಗ್​ನಲ್ಲಿ ಹೇಳಿದೆ.

ಮಾರುತಿ ಸುಜುಕಿಯಿಂದ ಆಲ್ಟೋದಿಂದ ಎಸ್​-ಕ್ರಾಸ್ ತನಕ ಕಾರುಗಳ ಮಾರಾಟ ಮಾಡಲಾಗುತ್ತದೆ. ಅವುಗಳ ದರವು ಕ್ರಮವಾಗಿ ರೂ. 3.15 ಲಕ್ಷದಿಂದ ರೂ. 12.56 ಲಕ್ಷದ ತನಕ ಇದೆ. ಕಳೆದ ವರ್ಷ ಮಾರುತಿ ಸುಜುಕಿ ಮೂರು ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜನವರಿಯಲ್ಲಿ ಶೇ 1.4ರಷ್ಟು, ಏಪ್ರಿಲ್​ನಲ್ಲಿ ಶೇ 1.6ರಷ್ಟು, ಸೆಪ್ಟೆಂಬರ್​ನಲ್ಲಿ ಶೇ 1.9ರಷ್ಟು ಹೀಗೆ ಒಟ್ಟಾರೆಯಾಗಿ ಶೇ 4.9ರಷ್ಟು ದರ ಇಳಿಕೆ ಮಾಡಲಾಗಿತ್ತು.

ಕಳೆದ ತಿಂಗಳು ಕಂಪೆನಿಯಿಂದ ಹೇಳಿದ ಪ್ರಕಾರ, ಅಗತ್ಯ ವಸ್ತುಗಳಾದ ಉಕ್ಕು, ಅಲ್ಯೂಮಿನಿಯಂ, ತಾಮ್ರ, ಪ್ಲಾಸ್ಟಿಕ್ ಮತ್ತು ಬೆಲೆಬಾಳುವ ಇತರ ಲೋಹಗಳ ಬೆಲೆಗಳು ಕಳೆದ ಒಂದು ವರ್ಷದಲ್ಲಿ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಆಗಿದೆ ಎಂದು ತಿಳಿಸಲಾಗಿತ್ತು.

ಇದನ್ನೂ ಓದಿ: Maruti Suzuki: ಚಿಪ್ ಕೊರತೆಯಿಂದ ಸತತ ಎರಡನೇ ತಿಂಗಳು ಮಾರುತಿ ಸುಜುಕಿ ಕಾರುಗಳ ಉತ್ಪಾದನೆ ಕುಂಠಿತ ಸಾಧ್ಯತೆ

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ