AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki Car Price: ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಜ. 15ರಿಂದ ಏರಿಕೆ

ಮಾರುತಿ ಸುಜುಕಿ ಇಂಡಿಯಾದಿಂದ ಜನವರಿ 15ರಿಂದ ಅನ್ವಯ ಆಗುವಂತೆ ಕಾರುಗಳ ಬೆಲೆ ಏರಿಕೆ ಮಾಡಲಾಗಿದೆ. ಸರಾಸರಿ ಶೇಕಡಾವಾರು ಎಷ್ಟು ಹೆಚ್ಚಳ ಮಾಡಲಾಗಿದೆ ಎಂಬ ವಿವರ ಇಲ್ಲಿದೆ.

Maruti Suzuki Car Price: ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಜ. 15ರಿಂದ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 15, 2022 | 1:04 PM

Share

ದೇಶದ ಅತಿ ದೊಡ್ಡ ಕಾರು ತಯಾರಿಕೆ ಕಂಪೆನಿಯಾದ ಮಾರುತಿ ಸುಜುಕಿ ಇಂಡಿಯಾ (Maruti Suzuki India) ಶನಿವಾರದಂದು ತಿಳಿಸಿರುವಂತೆ, ಅದರ ಮಾಡೆಲ್​ಗಳ ಬೆಲೆಯನ್ನು ಶೇ 4.3ರ ತನಕ ಏರಿಕೆ ಮಾಡಿದೆ. ಇನ್​ಪುಟ್​ ವೆಚ್ಚಗಳ ಹೆಚ್ಚಳದ ಹಿನ್ನೆಲೆಯಲ್ಲಿ ಅದನ್ನು ಭಾಗಶಃ ಸರಿತೂಗಿಸಬೇಕು ಎಂಬ ಕಾರಣಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ತೀರ್ಮಾನಕ್ಕೆ ಬರಲಾಗಿದೆ. ಕಂಪೆನಿಯ ವಿವಿಧ ಮಾಡೆಲ್​ಗಳ ಕಾರುಗಳ ಬೆಲೆಯಲ್ಲಿ ಶೇ 0.1ರಿಂದ ಶೇ 4.3ರ ತನಕ ದರ ಹೆಚ್ಚಳ ಆಗಲಿದೆ. ವಿವಿಧ ಇನ್​ಪುಟ್​ ವೆಚ್ಚಗಳ ಏರಿಕೆ ಕಾರಣಕ್ಕೆ ಈ ಬೆಳವಣಿಗೆ ಆಗಲಿದೆ. “ವೇಯ್ಟೆಡ್ ಸರಾಸರಿ ಬೆಲೆಗಳ ಏರಿಕೆಯು ಎಕ್ಸ್​- ಶೋರೂಮ್​ ದರಗಳು (ದೆಹಲಿ) ಎಲ್ಲ ಮಾಡೆಲ್​ಗಳಲ್ಲಿ ಶೇ 1.7. ಹೊಸ ಬೆಲೆಗಳು ಇಂದಿನಿಂದ (ಜನವರಿ 15) ಜಾರಿಗೆ ಬರಲಿದೆ,” ಎಂದು ಮಾರುತಿ ಸುಜುಕಿ ಇಂಡಿಯಾ ನಿಯಂತ್ರಕ ಫೈಲಿಂಗ್​ನಲ್ಲಿ ಹೇಳಿದೆ.

ಮಾರುತಿ ಸುಜುಕಿಯಿಂದ ಆಲ್ಟೋದಿಂದ ಎಸ್​-ಕ್ರಾಸ್ ತನಕ ಕಾರುಗಳ ಮಾರಾಟ ಮಾಡಲಾಗುತ್ತದೆ. ಅವುಗಳ ದರವು ಕ್ರಮವಾಗಿ ರೂ. 3.15 ಲಕ್ಷದಿಂದ ರೂ. 12.56 ಲಕ್ಷದ ತನಕ ಇದೆ. ಕಳೆದ ವರ್ಷ ಮಾರುತಿ ಸುಜುಕಿ ಮೂರು ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜನವರಿಯಲ್ಲಿ ಶೇ 1.4ರಷ್ಟು, ಏಪ್ರಿಲ್​ನಲ್ಲಿ ಶೇ 1.6ರಷ್ಟು, ಸೆಪ್ಟೆಂಬರ್​ನಲ್ಲಿ ಶೇ 1.9ರಷ್ಟು ಹೀಗೆ ಒಟ್ಟಾರೆಯಾಗಿ ಶೇ 4.9ರಷ್ಟು ದರ ಇಳಿಕೆ ಮಾಡಲಾಗಿತ್ತು.

ಕಳೆದ ತಿಂಗಳು ಕಂಪೆನಿಯಿಂದ ಹೇಳಿದ ಪ್ರಕಾರ, ಅಗತ್ಯ ವಸ್ತುಗಳಾದ ಉಕ್ಕು, ಅಲ್ಯೂಮಿನಿಯಂ, ತಾಮ್ರ, ಪ್ಲಾಸ್ಟಿಕ್ ಮತ್ತು ಬೆಲೆಬಾಳುವ ಇತರ ಲೋಹಗಳ ಬೆಲೆಗಳು ಕಳೆದ ಒಂದು ವರ್ಷದಲ್ಲಿ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಆಗಿದೆ ಎಂದು ತಿಳಿಸಲಾಗಿತ್ತು.

ಇದನ್ನೂ ಓದಿ: Maruti Suzuki: ಚಿಪ್ ಕೊರತೆಯಿಂದ ಸತತ ಎರಡನೇ ತಿಂಗಳು ಮಾರುತಿ ಸುಜುಕಿ ಕಾರುಗಳ ಉತ್ಪಾದನೆ ಕುಂಠಿತ ಸಾಧ್ಯತೆ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ