AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Data Protection Bill: ಡಾಟಾ ಪ್ರೊಟೆಕ್ಷನ್ ಬಿಲ್​ಗೆ ಅನುಮೋದನೆಯಾಗಿದೆ ಎಂದು ಸಚಿವರು ಹೇಳಿಲ್ಲ: NASSCOM ಸ್ಪಷ್ಟನೆ

NASSCOM Clarification Statement: ಕೇಂದ್ರ ಸರ್ಕಾರ ರೂಪಿಸಿರುವ ಡಿಜಿಟಲ್ ಡೇಟಾ ಪ್ರೊಟೆಕ್ಷನ್ ಕರಡು ಮಸೂದೆಗೆ ಸಂಸದೀಯ ಸ್ಥಾಯಿ ಸಮಿತಿಯೊಂದರ ಅನುಮೋದನೆ ಆಗಿದೆ ಎಂದು ನಿನ್ನೆ ಗುರುವಾರ ಕೇಂದ್ರ ಉದ್ಯಮ ಮತ್ತು ವ್ಯವಹಾರಗಳ ಸಚಿವ ಅಶ್ವಿನಿ ವೈಷ್ಣವ್ ಅವರು ನಾಸ್​ಕಾಮ್ ಟೆಕ್ನಾಲಜಿ ಲೀಡರ್​ಶಿಪ್ ಫೋರಂ ಸಭೆಯಲ್ಲಿ ಹೇಳಿದ್ದರು. ಆದರೆ ಈ ವರದಿಯನ್ನು ನಾಸ್​ಕಾಮ್ ನಿರಾಕರಿಸಿದೆ.

Data Protection Bill: ಡಾಟಾ ಪ್ರೊಟೆಕ್ಷನ್ ಬಿಲ್​ಗೆ ಅನುಮೋದನೆಯಾಗಿದೆ ಎಂದು ಸಚಿವರು ಹೇಳಿಲ್ಲ: NASSCOM ಸ್ಪಷ್ಟನೆ
ಸಚಿವ ಅಶ್ವಿನಿ ವೈಷ್ಣವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Mar 03, 2023 | 4:19 PM

Share

ನವದೆಹಲಿ: ಡಿಜಿಟಲ್ ಡಾಟಾ ರಕ್ಷಣೆ ಮಸೂದೆಯ (Digital Data Protection Bill 2023) ಅನುಷ್ಠಾನ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ತಂತ್ರಜ್ಞಾನ ಉದ್ಯಮ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಒತ್ತಾಯಿಸಿದೆ. ಭಾರತವನ್ನು ಒಂದು ನಂಬುಗೆಯ ದೇಶವಾಗಿ ನಿರ್ಮಿಸಲು ಡಿಜಿಟಲ್ ಡೇಟಾ ಪ್ರೊಟೆಕ್ಷನ್ ಬಿಲ್ ಬಹಳ ಮುಖ್ಯ. ಇದರ ಶೀಘ್ರ ಅನುಷ್ಠಾನಕ್ಕೆ ಸರ್ಕಾರ ಗಮನ ಕೊಡಬೇಕು ಎಂದು ಉದ್ಯಮ ಸಂಘಟನೆ ನಾಸ್​ಕಾಮ್ ಸಲಹೆ ನೀಡಿದೆ.

ಕೇಂದ್ರ ಸರ್ಕಾರ ರೂಪಿಸಿರುವ ಡಿಜಿಟಲ್ ಡೇಟಾ ಪ್ರೊಟೆಕ್ಷನ್ ಕರಡು ಮಸೂದೆಗೆ ಸಂಸದೀಯ ಸ್ಥಾಯಿ ಸಮಿತಿಯೊಂದರ (Parliamentary Standing Committee) ಅನುಮೋದನೆ ಆಗಿದೆ ಎಂದು ನಿನ್ನೆ ಗುರುವಾರ ಕೇಂದ್ರ ಉದ್ಯಮ ಮತ್ತು ವ್ಯವಹಾರಗಳ ಸಚಿವ ಅಶ್ವಿನಿ ವೈಷ್ಣವ್ ಅವರು ನಾಸ್​ಕಾಮ್ ಟೆಕ್ನಾಲಜಿ ಲೀಡರ್​ಶಿಪ್ ಫೋರಂ ಸಭೆಯಲ್ಲಿ ಹೇಳಿದ್ದರು. ಆದರೆ ಈ ವರದಿಯನ್ನು ನಾಸ್​ಕಾಮ್ ನಿರಾಕರಿಸಿದೆ.

ಮಸೂದೆಗೆ ಸಮಿತಿಯಿಂದ ಅನುಮೋದನೆ ಸಿಕ್ಕಿದೆ ಎಂದು ಸಚಿವ ವೈಷ್ಣವ್ ಆ ಕಾರ್ಯಕ್ರಮದಲ್ಲಿ ಹೇಳಲಿಲ್ಲ ಎಂದು ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ ಎಂದು ನಾಸ್​ಕಾಮ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಆದರೆ, ಸಭೆಯಲ್ಲಿ ಮಾತನಾಡುತ್ತಾ ಸಚಿವ ವೈಷ್ಣವ್ ಅವರು ಮಸೂದೆಯನ್ನು ಸಂಸತ್​ನಲ್ಲಿ ಮಂಡನೆ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ. ಐಟಿ ಮತ್ತು ಸಂವಹನದ ಸಂಸದೀಯ ಸಮಿತಿಯಲ್ಲಿ ಆದಷ್ಟೂ ಬೇಗ ಚರ್ಚೆಗಳನ್ನು ಏರ್ಪಡಿಸಲಾಗುವುದು ಎಂದು ಭರವಸೆ ನೀಡಿದ್ದರು ಎಂದು ನಾಸ್​ಕಾಮ್ ತನ್ನ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿG20 Meet: ದ್ವಿಪಕ್ಷೀಯ ಸಂಬಂಧ ಗಟ್ಟಿಗೊಳಿಸಲು ಭಾರತ-ಚೀನಾ ಭರವಸೆ, ಗಡಿಯಲ್ಲಿ ಶಾಂತಿ ಬಗ್ಗೆ ಚರ್ಚೆ

ನಾಸ್​ಕಾಮ್ ಟೆಕ್ನಾಲಜಿ ಲೀಡರ್​ಶಿಪ್ ಫೋರಮ್ (ಎನ್​ಟಿಎಲ್​ಎಫ್) 2023 ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅಶ್ವಿನಿ ವೈಷ್ಣವ್, ಐಟಿ ಮತ್ತು ಕಮ್ಯೂನಿಕೇಶನ್ಸ್​ನ ಸಂಸದೀಯ ಸ್ಥಾಯಿ ಸಮಿತಿ ಈ ಮಸೂದೆ ಸಂಸತ್​ನಲ್ಲಿ ಮಂಡನೆಯಾಗುವ ಮುನ್ನ ಮುಂಚಿತವಾಗಿ ಪರಿಶೀಲನೆ ನಡೆಸಿ ಸಮ್ಮತಿ ಕೊಟ್ಟಿದೆ ಎಂದು ಹೇಳಿದರೆಂದು ಮಾಧ್ಯಮಗಳಲ್ಲಿ ನಿನ್ನೆ ಗುರುವಾರ ವರದಿಗಳಾಗಿದ್ದವು.

ಕಾಂಗ್ರೆಸ್ ಮುಖಂಡ ಕಾರ್ತಿ ಚಿದಂಬರಂ ಕೂಡ ಸ್ಥಾಯಿ ಸಮಿತಿಯಿಂದ ಮಸೂದೆ ಅನುಮೋದನೆ ಆಗಿರುವ ವರದಿ ಸುಳ್ಳು ಎಂದು ಹೇಳಿ ವರದಿಗಳನ್ನು ತಳ್ಳಿಹಾಕಿದ್ದಾರೆ.

ಇನ್ನಷ್ಟು ಉದ್ಯಮ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Fri, 3 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ