AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ತಿಂಗಳು ರಾಷ್ಟ್ರವ್ಯಾಪಿ ಲಾಕ್​ಡೌನ್ ಮಾಡಿದರೆ ಅಂದಾಜು 2.68 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ನಷ್ಟ

ಕೊರೊನಾ ನಿಯಂತ್ರಣಕ್ಕಾಗಿ ಒಂದು ವೇಳೆ ರಾಷ್ಟ್ರವ್ಯಾಪಿ ಲಾಕ್​ಡೌನ್ ಘೋಷಣೆ ಮಾಡಿದಲ್ಲಿ ಒಂದು ಅಂದಾಜಿನ ಪ್ರಕಾರ 2.68 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಬಹುದು ಎನ್ನಲಾಗಿದೆ.

ಒಂದು ತಿಂಗಳು ರಾಷ್ಟ್ರವ್ಯಾಪಿ ಲಾಕ್​ಡೌನ್ ಮಾಡಿದರೆ ಅಂದಾಜು 2.68 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ನಷ್ಟ
ಪ್ರಾತಿನಿಧಿಕ ಚಿತ್ರ
Srinivas Mata
|

Updated on: Apr 19, 2021 | 8:37 PM

Share

ಮುಂಬೈ: ಒಂದು ತಿಂಗಳ ಕಾಲ ಭಾರತದಲ್ಲಿ ರಾಷ್ಟ್ರವ್ಯಾಪಿ ಲಾಕ್​ಡೌನ್ ಮಾಡಿದಲ್ಲಿ ಜಿಡಿಪಿ ಬೆಳವಣಿಗೆ 2 ಪರ್ಸಂಟೇಜ್ ಪಾಯಿಂಟ್​ಗೆ (ಒಂದು ಅಂದಾಜಿನ ಪ್ರಕಾರ 2.68 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು) ಪೆಟ್ಟು ಬೀಳುತ್ತದೆ ಎಂದು ಸೋಮವಾರ ಅಮೆರಿಕ ಬ್ರೋಕರೇಜ್ ಎಚ್ಚರಿಕೆ ನೀಡಿದೆ. ಕೋವಿಡ್ ಹಬ್ಬವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸ್ಥಳೀಯವಾಗಿ ನಿರ್ಬಂಧಗಳನ್ನು ಸರ್ಕಾರಗಳು ಹೇರುತ್ತಿವೆ. ಅಂದಹಾಗೆ ಒಂದು ತಿಂಗಳ ಹಿಂದೆ ದಿನಕ್ಕೆ 35,000 ಪ್ರಕರಣಗಳು ವರದಿ ಆಗುತ್ತಿದ್ದವು. ಅದೀಗ ದಿನಕ್ಕೆ ಏಳು ಪಟ್ಟು ಹೆಚ್ಚಾಗಿದೆ. ದಿನಕ್ಕೆ 2.61 ಲಕ್ಷ ಹೊಸ ಪ್ರಕರಣಗಳು ವರದಿ ಆಗಿವೆ. ಬೋಫಾ ಸೆಕ್ಯೂರಿಟೀಸ್ ಹೇಳುವಂತೆ, ಕೋವಿಡ್​- 19ನಿಂದ ಈಗಿನ್ನೂ ಚೇತರಿಸಿಕೊಳ್ಳುತ್ತಿರುವ ಆರ್ಥಿಕತೆಗೆ ಅಪಾಯವಾಗಿಯೇ ಕಂಡುಬರುತ್ತಿದೆ.

ಈಗಿನ ಸ್ಥಿತಿಯನ್ನು ಗಂಭೀರವಾದ ರಾಷ್ಟ್ರವ್ಯಾಪಿ ಲಾಕ್​ಡೌನ್ ಆಗದ ಹೊರತು ಕೋವಿಡ್-19 ಎರಡನೇ ಅಲೆ ಕಡಿಮೆ ಆಗುವಂತೆ ಕಾಣುತ್ತಿಲ್ಲ. ಹಾಗೊಂದು ವೇಳೆ ಒಂದು ತಿಂಗಳು ರಾಷ್ಟ್ರವ್ಯಾಪಿ ಲಾಕ್​ಡೌನ್ ಮಾಡಿದಲ್ಲಿ ಇದರಿಂದ ಶೇಕಡಾ 1ರಿಂದ 2ರಷ್ಟು ಜಿಡಿಪಿ ನಷ್ಟವಾಗುತ್ತದೆ. ಅಂಥದ್ದೊಂದು ಭಾರೀ ಆರ್ಥಿಕ ಬೆಲೆ ತೆತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್-19 ನಿರ್ಬಂಧಗಳು, ರಾತ್ರಿ ಕರ್ಫ್ಯೂಗಳು ಮತ್ತು ಸ್ಥಳೀಯ ಲಾಕ್​ಡೌನ್​ಗಳ ಮೂಲಕ ಕೊರೊನಾ ಹಬ್ಬದಂತೆ ತಡೆಯಬಹುದು ಎಂದು ವರದಿ ಹೇಳಿದೆ. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗಾಗಲೇ ರಾಷ್ಟ್ರವ್ಯಾಪಿ ಲಾಕ್​ಡೌನ್ ಮಾಡುವುದಿಲ್ಲ ಎಂದು ಹೇಳಿಯಾಗಿದೆ.

ಬ್ರೋಕರೇಜ್ ಹೇಳಿದಂತೆ, ಒಟ್ಟಾರೆ ಪ್ರಕರಣಗಳ ಪೈಕಿ ನಾಲ್ಕನೇ ಮೂರು ಭಾಗದಷ್ಟು ಬರುತ್ತಿರುವುದು 29 ರಾಜ್ಯಗಳ ಪೈಕಿ 10 ರಾಜ್ಯಗಳಿಂದ. ಇನ್ನು ಮೊದಲಿಗೆ ಮಹಾರಾಷ್ಟ್ರ ಕಠಿಣ ನಿರ್ಬಂಧಗಳನ್ನು ಹೇರಿದ ಮೇಲೆ ಉಳಿದ ರಾಜ್ಯಗಳು ಅದನ್ನು ಅನುಸರಿಸಿದವು. ಸದ್ಯಕ್ಕೆ ಒಟ್ಟು ಜನಸಂಖ್ಯೆಯ ಶೇ 1.2ರಷ್ಟು ಮಂದಿ ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಶೇ 7.8ರಷ್ಟು ಮಂದಿ ಒಂದು ಡೋಸ್ ಹಾಕಿಸಿಕೊಂಡಿದ್ದಾರೆ. ಏಪ್ರಿಲ್ 16ರ ವಾರಕ್ಕೆ ಲಸಿಕೆ ಕೊರತೆಯ ಕಾರಣಕ್ಕೆ ಶೇ 12ರಷ್ಟು ಹಾಕುವ ವೇಗ ಶೇ 12ರಷ್ಟು ಕಡಿಮೆ ಆಗಿದೆ. 2021ರ ಕೊನೆ ಹೊತ್ತಿಗೆ ಒಟ್ಟು ಜನಸಂಖ್ಯೆಯ ಶೇ 34ರಷ್ಟು ಮಂದಿಗೆ ಲಸಿಕೆ ಹಾಕಲಾಗಿರುತ್ತದೆ. ಇದು ತುಂಬ ಕನಿಷ್ಠ ಮಟ್ಟದ ಸನ್ನಿವೇಶದಲ್ಲಿ ಆಯಿತು. ಇನ್ನು ಹೊಸದಾಗಿ ರಷ್ಯಾದ ಸ್ಪುಟ್ನಿಕ್​ಗೆ ಅನುಮತಿ ಸಿಕ್ಕ ಮೇಲೆ ಶೇಕಡಾ 40ರಷ್ಟು ಲಸಿಕೆ ಹಾಕಬಹುದು.

ಈ ಎರಡೂ ಲಸಿಕೆ ಸೇರಿ ಪ್ರತಿ ತಿಂಗಳು 7.5 ಕೋಟಿ ಡೋಸ್​ಗಳು ಸದ್ಯಕ್ಕೆ ಉತ್ಪಾದನೆಯಾಗುತ್ತಿದೆ ಎನ್ನಲಾಗಿದೆ. ಭಾರತದ ಸೆರಂ ಇನ್​ಸ್ಟಿಟ್ಯೂಟ್​ನಿಂದ ಜೂನ್ ನಂತರ ತಿಂಗಳಿಗೆ 10 ಕೋಟಿ ಡೋಸ್​ಗೂ ಹೆಚ್ಚು ಉತ್ಪಾದಿಸುವ ನಿರೀಕ್ಷೆ ಇದೆ. ಭಾರತ್ ಬಯೋಟೆಕ್ 1.2 ಕೋಟಿ ಡೋಸ್ ಉತ್ಪಾದಿಸುತ್ತದೆ. ಡಾ ರೆಡ್ಡೀಸ್​ನಿಂದ 10 ಕೋಟಿ ಡೋಸ್ ಅನ್ನು ಸ್ಪುಟ್ನಿಕ್​ನಿಂದ ಆಮದು ಮಾಡಿಕೊಳ್ಳುವ ಬಗ್ಗೆ ಹೇಳಲಾಗಿದೆ. ಇನ್ನು ಜಾನ್ಸನ್ ಅಂಡ್ ಜಾನ್ಸನ್ ಲಸಿಕೆ ತೆಗೆದುಕೊಂಡವರಲ್ಲಿ ಹೆಪ್ಪುಗಟ್ಟುವ ಸಮಸ್ಯೆ ಹಲವು ಕಡೆ ಕಂಡುಬಂದಿದೆ ಮತ್ತು ಫೈಜರ್​ಗೆ ಸಂಗ್ರಹಕ್ಕೆ ತುಂಬ ಕಡಿಮೆ ತಾಪಮಾನ ಬೇಕಾಗುತ್ತದೆ. ಆದ್ದರಿಂದ ಈ ಲಸಿಕೆಗಳಿಗೆ ಅವಕಾಶ ಕೊಟ್ಟರೂ ಹೆಚ್ಚಿನ ಪ್ರಯೋಜನ ಆಗಲ್ಲ.

ಇದನ್ನೂ ಓದಿ: ಲಾಕ್​ಡೌನ್ ಮಾಡುವುದಿದ್ದರೆ ಮೊದಲು ಜನರ ಅಕೌಂಟ್​ಗೆ 25,000 ರೂ ಹಾಕಿ; ಸಭೆಯಲ್ಲಿ ಪ್ರತಿಪಕ್ಷಗಳ ಒತ್ತಾಯ

ಇದನ್ನೂ ಓದಿ: ದೆಹಲಿಯಲ್ಲಿ 6 ದಿನಗಳ ಲಾಕ್​ಡೌನ್; ಇಂದು ರಾತ್ರಿಯಿಂದಲೇ ಕಠಿಣ ನಿಯಮ ಜಾರಿ: ಅರವಿಂದ ಕೇಜ್ರಿವಾಲ್

( If government announce 1 month nationwide lock down to contain corona may cause Rs 2.68 lakh crore loss to GDP)

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?