AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನಕ್ಕೆ ಹೂಡಿಕೆದಾರರು ಬರುವುದಿಲ್ಲ: ಷೇರುಪೇಟೆಯಲ್ಲಿ ಕುಸಿತದ ನಂತರ ಪೇಟಿಎಂ ಕಾರ್ಯತಂತ್ರ ವಿವರಿಸಿದ ಸಿಇಒ ವಿಜಯ್ ಶೇಖರ್ ಶರ್ಮಾ

ಷೇರುಪೇಟೆಯಲ್ಲಿ ಕಂಪನಿಯ ಷೇರುಮೌಲ್ಯವು ಮೊದಲ ದಿನವೇ ಕುಸಿತ ಕಂಡಿದ್ದಕ್ಕೆ ವಿಚಲಿತರೇನೂ ಆಗಲಿಲ್ಲ. ಬದಲಿಗೆ, ‘ಒಂದೇ ದಿನಕ್ಕೆ ಹೂಡಿಕೆದಾರರು ಬರುವುದಿಲ್ಲ’ ಎಂದು ಆತ್ಮವಿಶ್ವಾಸದ ಮಾತುಗಳನ್ನು ಆಡಿದರು.

ಒಂದೇ ದಿನಕ್ಕೆ ಹೂಡಿಕೆದಾರರು ಬರುವುದಿಲ್ಲ: ಷೇರುಪೇಟೆಯಲ್ಲಿ ಕುಸಿತದ ನಂತರ ಪೇಟಿಎಂ ಕಾರ್ಯತಂತ್ರ ವಿವರಿಸಿದ ಸಿಇಒ ವಿಜಯ್ ಶೇಖರ್ ಶರ್ಮಾ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 19, 2021 | 10:04 AM

Share

ದೆಹಲಿ: ಬಹುನಿರೀಕ್ಷಿತ ಐಪಿಒ ಎನಿಸಿದ್ದ ಪೇಟಿಎಂ ಗುರುವಾರ ಷೇರುಪೇಟೆಯಲ್ಲಿ ಲಿಸ್ಟ್ ಆಯಿತು. ಆದರೆ ಮೊದಲ ದಿನವೇ ಷೇರುಗಳು ಮೌಲ್ಯ ಕಳೆದುಕೊಂಡು ಶೇ 28ರಷ್ಟು ಕುಸಿತ ಕಂಡವು. ಕಂಪನಿಯ ಬೆಲೆಯನ್ನು 20 ಶತಕೋಟಿ ರೂಪಾಯಿ ಎಂದು ಹಣಕಾಸು ಕಂಪನಿಗಳು ತಪ್ಪಾಗಿ ಅಂದಾಜಿಸಿದ್ದವು ಎಂದು ಹೂಡಿಕೆದಾರರು ಮತ್ತು ವಿಶ್ಲೇಷಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಷೇರುಪೇಟೆಯಲ್ಲಿ ಕಂಪನಿ ಲಿಸ್ಟ್ ಆದ ಮೊದಲ ದಿನ ಆನಂದಬಾಷ್ಪ ಹರಿಸಿದ್ದ ಸಿಇಒ ವಿಜಯ್ ಶೇಖರ್ ಶರ್ಮಾ, ಷೇರುಪೇಟೆಯಲ್ಲಿ ಕಂಪನಿಯ ಷೇರುಮೌಲ್ಯವು ಮೊದಲ ದಿನವೇ ಕುಸಿತ ಕಂಡಿದ್ದಕ್ಕೆ ವಿಚಲಿತರೇನೂ ಆಗಲಿಲ್ಲ. ಬದಲಿಗೆ, ‘ಒಂದೇ ದಿನಕ್ಕೆ ಹೂಡಿಕೆದಾರರು ಬರುವುದಿಲ್ಲ’ ಎಂದು ಆತ್ಮವಿಶ್ವಾಸದ ಮಾತುಗಳನ್ನು ಆಡಿದರು.

‘ಒಂದು ದಿನದ ನಷ್ಟ ಇಡೀ ಭವಿಷ್ಯವನ್ನು ಹೇಳಲಾರದು. ಪೇಟಿಎಂನ ವ್ಯಾಪಾರದ ಮಾದರಿ ವಿವರಿಸಲು ನಾವು ಇನ್ನಷ್ಟು ಉತ್ತಮ ಕೆಲಸ ಮಾಡಬೇಕು. ಇದು ಕೇವಲ ಮೊದಲ ದಿನವಷ್ಟೇ. ನಮ್ಮ ವಹಿವಾಟು ಮತ್ತು ಲಾಭ ಗಳಿಕೆಯು ದಿನದಿಂದ ದಿನಕ್ಕೆ ಹೆಚ್ಚಾಗಲಿದೆ. ನಾವು ನಮ್ಮ ವಹಿವಾಟಿನ ಗಾತ್ರವನ್ನು ಸತತವಾಗಿ ವಿಸ್ತರಿಸುತ್ತಲೇ ಇರುತ್ತೇವೆ’ ಎಂದು ಶರ್ಮಾ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ವ್ಯಾಪಾರ ಎನ್ನುವುದು ಟೆಸ್ಟ್​ ಮ್ಯಾಚ್​ಗಳ ಹಲವು ಸರಣಿಗಳಿದ್ದಂತೆ. ಒಂದು ಅಥವಾ ಎರಡು ವಿಕೆಟ್ ಕಳೆದುಕೊಂಡ ತಕ್ಷಣ ಎಲ್ಲವೂ ಮುಗಿದಂತೆ ಅಲ್ಲ ಎಂದು ಹೇಳಿದರು.

ಹೂಡಿಕೆಯ ಪಯಣಕ್ಕೆ ಷೇರುಪೇಟೆಗೆ ಉತ್ತಮ ಆದಾಯ ತಂದುಕೊಡುವ ಗುಣಮಟ್ಟದ ಕಂಪನಿ ಬೇಕು. ಪೇಟಿಎಂ ನೀಡುವ ಸೇವೆಗಳನ್ನು ಅರ್ಥ ಮಾಡಿಕೊಳ್ಳಲು ಹೂಡಿಕೆದಾರರಿಗೆ ನಾವು ಕಾಲಾವಕಾಶ ನೀಡಬೇಕಿದೆ. ವಿಮೆ, ಚಿನ್ನದ ಮಾರಾಟ, ಸಿನಿಮಾ ಮತ್ತು ವಿಮಾನಗಳ ಟಿಕೆಟ್ ಮಾರಾಟ, ಬ್ಯಾಂಕ್​ ಠೇವಣಿಗಳು ಮತ್ತು ಹಣ ವರ್ಗಾವಣೆ ಸೇರಿದಂತೆ ಹತ್ತಾರು ಬಗೆಯ ಸೇವೆಗಳನ್ನು ನಾವು ಒದಗಿಸುತ್ತಿದ್ದೇವೆ ಎಂದು ಹೇಳಿದರು. ಪೇಮೆಂಟ್ಸ್​ ಕಂಪೆನಿಯು ವಿಮೆ ಮತ್ತು ಹೂಡಿಕೆಗಳಿಗೆ ವಹಿವಾಟು ವಿಸ್ತರಿಸಬಹುದು ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ. ನಮ್ಮ ಕಂಪನಿಯ ವ್ಯಾಪಾರದ ರೀತಿಯನ್ನು ವಿವರಿಸುವುದು ಮತ್ತು ಅದನ್ನು ಅನುಷ್ಠಾನಕ್ಕೆ ತರುವುದು ಅತ್ಯಗತ್ಯವಾಗಿದೆ ಎಂದು ಶರ್ಮಾ ತಿಳಿಸಿದರು.

ಕಳೆದ ಜೂನ್ ತಿಂಗಳಿಗೆ ಅಂತ್ಯಗೊಂಡ ತ್ರೈಮಾಸಿಕದ ಫಲಿತಾಂಶದಲ್ಲಿ ಪೇಟಿಎಂ ₹ 3.82 ಶತಕೋಟಿ ನಷ್ಟ ಅನುಭವಿಸಿತ್ತು. ₹ 2,150ಕ್ಕೆ ಐಪಿಒ ನೀಡಿದ್ದ ಕಂಪನಿಯು ₹ 1,950ರಲ್ಲಿ ಲಿಸ್ಟ್ ಆಗಿ, ₹ 1,560ಕ್ಕೆ ಕುಸಿಯಿತು. ಪೇಟಿಎಂ ಕಂಪನಿಯ ಮೌಲ್ಯವನ್ನು ಸರಿಯಾಗಿ ಮಾಡಿಲ್ಲ ಎಂಬ ವರದಿಗಳನ್ನು ನಿರಾಕರಿಸಿದ ಅವರು, ನಾವು ಎಂಜಿನಿಯರಿಂಗ್ ಮತ್ತು ಮಾರಾಟ ಪ್ರತಿನಿಧಿಗಳ ಮೇಲೆ ಹೂಡಿಕೆ ಮಾಡುತ್ತಿದ್ದೇವೆ. ಹೊಸ ಗ್ರಾಹಕರನ್ನು ನಮ್ಮತ್ತ ಸೆಳೆದುಕೊಳ್ಳುವ ಆಕಾಂಕ್ಷೆ ಮೀರಿದರೆ ನಾವು ಹೆಚ್ಚಿನ ಲಾಭವನ್ನು ಈಗಲೇ ತೋರಿಸಬಹುದಿತ್ತು. ಆದರೆ ನಾವು ಭವಿಷ್ಯಕ್ಕಾಗಿ ಹೂಡಿಕೆ ಮುಂದುವರಿಸುತ್ತಿದ್ದೇವೆ ಎಂದು ಮಾಧ್ಯಮಗಳ ಎದುರು ತಮ್ಮ ಕಾರ್ಯತಂತ್ರ ವಿವರಿಸಿದರು.

ಇದನ್ನೂ ಓದಿ: Closing Bell: ಸೆನ್ಸೆಕ್ಸ್, ನಿಫ್ಟಿ ಇಳಿಕೆ; ಪೇಟಿಎಂ ಲಿಸ್ಟಿಂಗ್​ ದಿನ 589 ರೂ. ಅಥವಾ ಶೇ 27ರಷ್ಟು ಕುಸಿತ ಇದನ್ನೂ ಓದಿ: Paytm Listing: ಪೇಟಿಎಂ ಷೇರು ವಿತರಣೆಗಿಂತ 200 ರೂಪಾಯಿ ಕಡಿಮೆಗೆ ಲಿಸ್ಟಿಂಗ್​; ದಿನದ ಕನಿಷ್ಠ 1586 ರೂ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ