AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಕೃತಕ ಬುದ್ಧಿಮತ್ತೆಯಿಂದ ಪರಿಹರಿಸಬಲ್ಲ 10 ಸಮಸ್ಯೆಗಳನ್ನು ಗುರುತಿಸಿ: ಪ್ರಧಾನಿ ನರೇಂದ್ರ ಮೋದಿ

Post-Budget Webinar on Technology Usage: ಕೃತಕ ಬುದ್ಧಿಮತ್ತೆ ಮತ್ತು 5ಜಿಯಂತಹ ತಂತ್ರಜ್ಞಾನಗಳು ಶಿಕ್ಷಣ, ಕೃಷಿ, ಔಷಧ ಹಾಗೂ ಇತರ ಹಲವು ವಲಯಗಳಲ್ಲಿ ಪರಿವರ್ತನೆ ತರಲು ಹೊರಟಿವೆ. ಎಐನಿಂದ ಪರಿಹಾರ ತರಬಹುದಾದ 10 ಸಮಸ್ಯೆಗಳನ್ನು ಗುರುತಿಸುವ ಕೆಲಸವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Narendra Modi: ಕೃತಕ ಬುದ್ಧಿಮತ್ತೆಯಿಂದ ಪರಿಹರಿಸಬಲ್ಲ 10 ಸಮಸ್ಯೆಗಳನ್ನು ಗುರುತಿಸಿ: ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 28, 2023 | 1:11 PM

ನವದೆಹಲಿ: ಮುಂದಿನ ಎರಡು ದಶಕದಲ್ಲಿ ಭಾರತ ಒಂದು ಮುಂದುವರಿದ ದೇಶವಾಗಲು ತಂತ್ರಜ್ಞಾನ ಸಹಾಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು. ಬಜೆಟ್ ನಂತರದ ವೆಬಿನಾರ್​ವೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿಗಳು, ಭಾರತದಲ್ಲಿ ಡಿಜಿಟಲ್ ಕ್ರಾಂತಿಯ ಫಲ ಎಲ್ಲಾ ನಾಗರಿಕರಿಗೂ ಪ್ರಾಪ್ತವಾಗುವಂತಾಗಲು ಅಗಾಧ ಮತ್ತು ಅತ್ಯಾಧುನಿಕ ಡಿಜಿಟಲ್ ಸೌಕರ್ಯ ವ್ಯವಸ್ಥೆ (Modern Digital Infrastructure) ರೂಪಿಸಲಾಗುತ್ತಿರುವುದರ ಮಾಹಿತಿ ನೀಡಿದರು.

ತಂತ್ರಜ್ಞಾನ ಬಳಸಿ ಜೀವನ ಸುಗಮಗೊಳಿಸುವುದರ ಕುರಿತು (Unleashing the Potential: Ease of Living Using Technology) ನಡೆದ ವೆಬಿನಾರ್​ನಲ್ಲಿ ಅವರು 2047ರಷ್ಟರಲ್ಲಿ ಮುಂದುವರಿದ ದೇಶವಾಗಬೇಕೆನ್ನುವ ಭಾರತದ ಗುರಿಗೆ ತಂತ್ರಜ್ಞಾನ ನೆರವಾಗುತ್ತದೆ ಎಂದರು. ಡಿಜಿಟಲ್ ಇನ್​ಫ್ರಾಸ್ಟ್ರಕ್ಚರ್ ಬಗ್ಗೆ ಇನ್ನಷ್ಟು ವಿವರ ನೀಡಿದ ಅವರು, ಸಣ್ಣ ಉದ್ಯಮಗಳ ಹೊಂದಾಣಿಕೆಯ ವೆಚ್ಚವನ್ನು (Cost of Compliances For Small Businesses) ಸರ್ಕಾರ ತಗ್ಗಿಸಬಯಸುತ್ತದೆ. ಯಾವ್ಯಾವ ನಿಯಮಾವಳಿಗಳನ್ನು ಕಡಿಮೆ ಮಾಡಬೇಕೆಂದು ಉದ್ಯಮದಿಂದ ಒಂದು ಪಟ್ಟಿ ಸಿದ್ಧವಾಗಲಿ ಎಂದೂ ಅವರು ಸಲಹೆ ನೀಡಿದರು.

ಸಣ್ಣ ಉದ್ಯಮಗಳು ನಿಯಮಗಳ ಹೊಂದಾಣಿಕೆಗೆ ಮಾಡುವ ವೆಚ್ಚ ಕಡಿಮೆ ಆಗಬೇಕು. ನೀವು ಅನಗತ್ಯವಾಗಿರುವ ನಿಯಮಾವಳಿಗಳನ್ನು ಇಳಿಸಿ ಒಂದು ಪಟ್ಟಿ ಸಿದ್ಧಪಡಿಸಬಹುದಾ ನೋಡಿ. ನಾವು 40 ಸಾವಿರದಷ್ಟು ನಿಯಮಾವಳಿಗಳನ್ನು ನಿಲ್ಲಿಸಿದ್ದೇವೆ ಎಂದು ಪೋಸ್ಟ್ ಬಜೆಟ್ ವೆಬಿನಾರ್​ನಲ್ಲಿ ನರೇಂದ್ರ ಮೋದಿ ತಿಳಿಸಿದರು.

ಇದನ್ನೂ ಓದಿBill Gates at India G20: ಜಿ20 ಸಭೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಜೊತೆ ಬಿಲ್ ಗೇಟ್ಸ್

ತೆರಿಗೆ ವ್ಯವಸ್ಥೆಯನ್ನು ಫೇಸ್​ಲೆಸ್ ಆಗುವಂತೆ ಮಾಡಲು ತಂತ್ರಜ್ಞಾನ ಬಳಸುತ್ತಿದ್ದೇವೆ. ನಾಗರಿಕರ ಜೀವನದ ಗುಣಮಟ್ಟದಲ್ಲಿ ಬದಲಾವಣೆ ತರಲು ತಂತ್ರಜ್ಞಾನ ಸಹಾಯಕವಾಗಿದೆ. ಕೃತಕ ಬುದ್ಧಿಮತ್ತೆ (ಎಐಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಮತ್ತು 5ಜಿಯಂತಹ ತಂತ್ರಜ್ಞಾನಗಳು ಶಿಕ್ಷಣ, ಕೃಷಿ, ಔಷಧ ಹಾಗೂ ಇತರ ಹಲವು ವಲಯಗಳಲ್ಲಿ ಪರಿವರ್ತನೆ ತರಲು ಹೊರಟಿವೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದಿಂದ ಪರಿಹಾರ ತರಬಹುದಾದ 10 ಸಮಸ್ಯೆಗಳನ್ನು ಗುರುತಿಸುವ ಕೆಲಸವಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಕರೆ ನೀಡಿದರು.

ತಂತ್ರಜ್ಞಾನ ಬಳಕೆಯ ಮಹತ್ವದ ಬಗ್ಗೆ ಇನ್ನಷ್ಟು ಮಾತನಾಡಿದ ಅವರು, ಒಂದು ದೇಶ ಒಂದು ಪಡಿತರ (ಒನ್ ನೇಷನ್ ಒನ್ ರೇಷನ್) ಸಂಕಲ್ಪಕ್ಕೆ ತಂತ್ರಜ್ಞಾನವೇ ಅಡಿಪಾಯ ಆಗಿದೆ. ಜ್ಯಾಮ್ (ಜೆಎಎಂಜನ್ ಧನ್ ಯೋಜನಾ, ಆಧಾರ್ ಮತ್ತು ಮೊಬೈಲ್ ನಂಬರ್) ತ್ರಯದಿಂದ ಬಡವರಿಗೆ ಪ್ರಯೋಜನ ಸಿಕ್ಕಿದೆ. 21ನೇ ಶತಮಾನವು ತಂತ್ರಜ್ಞಾನದಿಂದ ಮುನ್ನಡೆಯುತ್ತದೆ. ಇದು ಕೇವಲ ಡಿಜಿಟಲ್, ಇಂಟರ್ನೆಟ್ ತಂತ್ರಜ್ಞಾನಕ್ಕೆ ಮಾತ್ರ ಸೀಮಿತವಾಗುವುದಿಲ್ಲ ಎಂದರು.

ಇನ್ನಷ್ಟು ಉದ್ಯಮ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್