AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೆಂಡ್ ಆಯ್ತು Bharat Ratna For Ratan Tata ಹ್ಯಾಶ್ ಟ್ಯಾಗ್… ಈ ಅಭಿಯಾನ ನಿಲ್ಲಿಸಿ; ಅಭಿಮಾನ ಇರಲಿ ಎಂದ ರತನ್ ಟಾಟಾ

BharatRatnaForRatanTata ಪ್ರಶಸ್ತಿಯ ವಿಷಯದಲ್ಲಿ ಸಾಮಾಜಿಕ ಮಾಧ್ಯಮದ ಒಂದು ಭಾಗವು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಪ್ರಶಂಸಿಸುತ್ತಿದ್ದರೂ, ಅಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ವಿನಂತಿಸುತ್ತೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ರತನ್ ಟಾಟಾ ಬರೆದುಕೊಂಡಿದ್ದಾರೆ.

ಟ್ರೆಂಡ್ ಆಯ್ತು Bharat Ratna For Ratan Tata ಹ್ಯಾಶ್ ಟ್ಯಾಗ್... ಈ ಅಭಿಯಾನ ನಿಲ್ಲಿಸಿ; ಅಭಿಮಾನ ಇರಲಿ ಎಂದ ರತನ್ ಟಾಟಾ
ರತನ್ ಟಾಟಾ
ಆಯೇಷಾ ಬಾನು
|

Updated on:Feb 06, 2021 | 12:29 PM

Share

ಬೆಂಗಳೂರು: ಅಪ್ಪಟ ಉದ್ಯಮಿ ರತನ್ ಟಾಟಾ ಅವರು ಭಾರತೀಯರ ಮನೆ-ಮನಗಳಲ್ಲಿ ಕಾಯಂ ಸ್ಥಾನ ಪಡೆದು ಯಾವುದೋ ಕಾಲವಾಗಿದೆ. ಅವರ ಹೆಸರಿನಲ್ಲಿಯೇ ಇದೆ ರತನ; ಅದಕ್ಕೆ ಭಾರತ ರತ್ನ ಮನ್ನಣೆ ಬೇಕಾಗಿದೆ, ನಮ್ಮೀ ಜನಪ್ರಿಯ ಉದ್ಯಮಿ ರತನ್ ಟಾಟಾಗೆ ಭಾರತ ರತ್ನ Bharat Ratna ಪ್ರಶಸ್ತಿ ನೀಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕೇಳಿ ಬರುತ್ತಿರುತ್ತದೆ. #BharatRatnaForRatanTata ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವಿಟರ್​ನಲ್ಲಿ ಕೆಲವರು ಭಾರತ ರತ್ನ ಪ್ರಶಸ್ತಿ ನೀಡಿ ಎಂದು ಒತ್ತಾಯಿಸಿದ್ದಾರೆ. ಟ್ವಿಟರ್​ನಲ್ಲಿ ಶುರುವಾದ ಈ ಅಭಿಯಾನ ಬಾರಿ ಟ್ರೆಂಡಿಂಗ್ ಆಗಿದೆ. ಸದ್ಯ ಈ ಬಗ್ಗೆ ಇಂದು ಸ್ವತಃ ರತನ್ ಟಾಟಾ Ratan Tata ಪ್ರತಿಕ್ರಿಯಿಸಿದ್ದಾರೆ. ಈ ಅಭಿಯಾನವನ್ನು ನಿಲ್ಲಿಸುವಂತೆ ವಿನಂತಿಸಿಕೊಂಡಿದ್ದಾರೆ.

ಭಾರತೀಯನಾಗಲು ನಾನು ಅದೃಷ್ಟಶಾಲಿ ಪ್ರಶಸ್ತಿಯ ವಿಷಯದಲ್ಲಿ ಸಾಮಾಜಿಕ ಮಾಧ್ಯಮದ ಒಂದು ವಲಯವು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಪ್ರಶಂಸಿಸುತ್ತಿದ್ದರೂ, ಅಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ವಿನಂತಿಸುತ್ತೇನೆ. ಬದಲಾಗಿ, ನಾನು ಭಾರತೀಯನಾಗಲು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ ಮತ್ತು ಭಾರತದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಪ್ರಯತ್ನಿಸುವೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ರತನ್ ಟಾಟಾ ಬರೆದುಕೊಂಡಿದ್ದಾರೆ.

ಸುಸ್ಥಿರ ಅಭಿವೃದ್ಧಿ ಮತ್ತು ಶಾಂತಿ ಸಾಧಿಸುವ ನೆಲೆಯಲ್ಲಿ ಹೊಸ ಆವಿಷ್ಕಾರಗಳನ್ನು ಬೆಂಬಲಿಸಿದ ಉದ್ಯಮಿ ರತನ್ ಟಾಟಾಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡುವ ಅಭಿಯಾನದ ಬಗ್ಗೆ ಮೋಟಿವೇಷನಲ್ ಸ್ಪೀಕರ್ ಡಾ. ವಿವೇಕ್ ಭಿಂದ್ರಾ ಟ್ವೀಟ್ ಮಾಡಿದ ನಂತರದಿಂದ #BharatRatnaForRatanTata ಎಂಬ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ.

ಕೆಲವು ಟ್ವಿಟರ್ ಬಳಕೆದಾರರು 12/11ರಲ್ಲಾದ ಭಯೋತ್ಪಾದಕ ದಾಳಿಯ ಸಮಯದಲ್ಲಿ ರತನ್ ಟಾಟಾ ಪ್ರದರ್ಶಿಸಿದ ನಿಜವಾದ ನಾಯಕನ ಗುಣಲಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ.

ಉದ್ಯಮಿ ರತನ್ ಟಾಟಾಗೆ ಭಾರತ-ಇಸ್ರೇಲ್ ವಾಣಿಜ್ಯ ಮಂಡಳಿಯಿಂದ ಗೌರವ

Published On - 12:17 pm, Sat, 6 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ