AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೆಂಡ್ ಆಯ್ತು Bharat Ratna For Ratan Tata ಹ್ಯಾಶ್ ಟ್ಯಾಗ್… ಈ ಅಭಿಯಾನ ನಿಲ್ಲಿಸಿ; ಅಭಿಮಾನ ಇರಲಿ ಎಂದ ರತನ್ ಟಾಟಾ

BharatRatnaForRatanTata ಪ್ರಶಸ್ತಿಯ ವಿಷಯದಲ್ಲಿ ಸಾಮಾಜಿಕ ಮಾಧ್ಯಮದ ಒಂದು ಭಾಗವು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಪ್ರಶಂಸಿಸುತ್ತಿದ್ದರೂ, ಅಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ವಿನಂತಿಸುತ್ತೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ರತನ್ ಟಾಟಾ ಬರೆದುಕೊಂಡಿದ್ದಾರೆ.

ಟ್ರೆಂಡ್ ಆಯ್ತು Bharat Ratna For Ratan Tata ಹ್ಯಾಶ್ ಟ್ಯಾಗ್... ಈ ಅಭಿಯಾನ ನಿಲ್ಲಿಸಿ; ಅಭಿಮಾನ ಇರಲಿ ಎಂದ ರತನ್ ಟಾಟಾ
ರತನ್ ಟಾಟಾ
ಆಯೇಷಾ ಬಾನು
|

Updated on:Feb 06, 2021 | 12:29 PM

Share

ಬೆಂಗಳೂರು: ಅಪ್ಪಟ ಉದ್ಯಮಿ ರತನ್ ಟಾಟಾ ಅವರು ಭಾರತೀಯರ ಮನೆ-ಮನಗಳಲ್ಲಿ ಕಾಯಂ ಸ್ಥಾನ ಪಡೆದು ಯಾವುದೋ ಕಾಲವಾಗಿದೆ. ಅವರ ಹೆಸರಿನಲ್ಲಿಯೇ ಇದೆ ರತನ; ಅದಕ್ಕೆ ಭಾರತ ರತ್ನ ಮನ್ನಣೆ ಬೇಕಾಗಿದೆ, ನಮ್ಮೀ ಜನಪ್ರಿಯ ಉದ್ಯಮಿ ರತನ್ ಟಾಟಾಗೆ ಭಾರತ ರತ್ನ Bharat Ratna ಪ್ರಶಸ್ತಿ ನೀಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕೇಳಿ ಬರುತ್ತಿರುತ್ತದೆ. #BharatRatnaForRatanTata ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವಿಟರ್​ನಲ್ಲಿ ಕೆಲವರು ಭಾರತ ರತ್ನ ಪ್ರಶಸ್ತಿ ನೀಡಿ ಎಂದು ಒತ್ತಾಯಿಸಿದ್ದಾರೆ. ಟ್ವಿಟರ್​ನಲ್ಲಿ ಶುರುವಾದ ಈ ಅಭಿಯಾನ ಬಾರಿ ಟ್ರೆಂಡಿಂಗ್ ಆಗಿದೆ. ಸದ್ಯ ಈ ಬಗ್ಗೆ ಇಂದು ಸ್ವತಃ ರತನ್ ಟಾಟಾ Ratan Tata ಪ್ರತಿಕ್ರಿಯಿಸಿದ್ದಾರೆ. ಈ ಅಭಿಯಾನವನ್ನು ನಿಲ್ಲಿಸುವಂತೆ ವಿನಂತಿಸಿಕೊಂಡಿದ್ದಾರೆ.

ಭಾರತೀಯನಾಗಲು ನಾನು ಅದೃಷ್ಟಶಾಲಿ ಪ್ರಶಸ್ತಿಯ ವಿಷಯದಲ್ಲಿ ಸಾಮಾಜಿಕ ಮಾಧ್ಯಮದ ಒಂದು ವಲಯವು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಪ್ರಶಂಸಿಸುತ್ತಿದ್ದರೂ, ಅಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ವಿನಂತಿಸುತ್ತೇನೆ. ಬದಲಾಗಿ, ನಾನು ಭಾರತೀಯನಾಗಲು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ ಮತ್ತು ಭಾರತದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಪ್ರಯತ್ನಿಸುವೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ರತನ್ ಟಾಟಾ ಬರೆದುಕೊಂಡಿದ್ದಾರೆ.

ಸುಸ್ಥಿರ ಅಭಿವೃದ್ಧಿ ಮತ್ತು ಶಾಂತಿ ಸಾಧಿಸುವ ನೆಲೆಯಲ್ಲಿ ಹೊಸ ಆವಿಷ್ಕಾರಗಳನ್ನು ಬೆಂಬಲಿಸಿದ ಉದ್ಯಮಿ ರತನ್ ಟಾಟಾಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡುವ ಅಭಿಯಾನದ ಬಗ್ಗೆ ಮೋಟಿವೇಷನಲ್ ಸ್ಪೀಕರ್ ಡಾ. ವಿವೇಕ್ ಭಿಂದ್ರಾ ಟ್ವೀಟ್ ಮಾಡಿದ ನಂತರದಿಂದ #BharatRatnaForRatanTata ಎಂಬ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ.

ಕೆಲವು ಟ್ವಿಟರ್ ಬಳಕೆದಾರರು 12/11ರಲ್ಲಾದ ಭಯೋತ್ಪಾದಕ ದಾಳಿಯ ಸಮಯದಲ್ಲಿ ರತನ್ ಟಾಟಾ ಪ್ರದರ್ಶಿಸಿದ ನಿಜವಾದ ನಾಯಕನ ಗುಣಲಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ.

ಉದ್ಯಮಿ ರತನ್ ಟಾಟಾಗೆ ಭಾರತ-ಇಸ್ರೇಲ್ ವಾಣಿಜ್ಯ ಮಂಡಳಿಯಿಂದ ಗೌರವ

Published On - 12:17 pm, Sat, 6 February 21

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ