ಟ್ರೆಂಡ್ ಆಯ್ತು Bharat Ratna For Ratan Tata ಹ್ಯಾಶ್ ಟ್ಯಾಗ್… ಈ ಅಭಿಯಾನ ನಿಲ್ಲಿಸಿ; ಅಭಿಮಾನ ಇರಲಿ ಎಂದ ರತನ್ ಟಾಟಾ

BharatRatnaForRatanTata ಪ್ರಶಸ್ತಿಯ ವಿಷಯದಲ್ಲಿ ಸಾಮಾಜಿಕ ಮಾಧ್ಯಮದ ಒಂದು ಭಾಗವು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಪ್ರಶಂಸಿಸುತ್ತಿದ್ದರೂ, ಅಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ವಿನಂತಿಸುತ್ತೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ರತನ್ ಟಾಟಾ ಬರೆದುಕೊಂಡಿದ್ದಾರೆ.

ಟ್ರೆಂಡ್ ಆಯ್ತು Bharat Ratna For Ratan Tata ಹ್ಯಾಶ್ ಟ್ಯಾಗ್... ಈ ಅಭಿಯಾನ ನಿಲ್ಲಿಸಿ; ಅಭಿಮಾನ ಇರಲಿ ಎಂದ ರತನ್ ಟಾಟಾ
ರತನ್ ಟಾಟಾ
Follow us
|

Updated on:Feb 06, 2021 | 12:29 PM

ಬೆಂಗಳೂರು: ಅಪ್ಪಟ ಉದ್ಯಮಿ ರತನ್ ಟಾಟಾ ಅವರು ಭಾರತೀಯರ ಮನೆ-ಮನಗಳಲ್ಲಿ ಕಾಯಂ ಸ್ಥಾನ ಪಡೆದು ಯಾವುದೋ ಕಾಲವಾಗಿದೆ. ಅವರ ಹೆಸರಿನಲ್ಲಿಯೇ ಇದೆ ರತನ; ಅದಕ್ಕೆ ಭಾರತ ರತ್ನ ಮನ್ನಣೆ ಬೇಕಾಗಿದೆ, ನಮ್ಮೀ ಜನಪ್ರಿಯ ಉದ್ಯಮಿ ರತನ್ ಟಾಟಾಗೆ ಭಾರತ ರತ್ನ Bharat Ratna ಪ್ರಶಸ್ತಿ ನೀಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕೇಳಿ ಬರುತ್ತಿರುತ್ತದೆ. #BharatRatnaForRatanTata ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವಿಟರ್​ನಲ್ಲಿ ಕೆಲವರು ಭಾರತ ರತ್ನ ಪ್ರಶಸ್ತಿ ನೀಡಿ ಎಂದು ಒತ್ತಾಯಿಸಿದ್ದಾರೆ. ಟ್ವಿಟರ್​ನಲ್ಲಿ ಶುರುವಾದ ಈ ಅಭಿಯಾನ ಬಾರಿ ಟ್ರೆಂಡಿಂಗ್ ಆಗಿದೆ. ಸದ್ಯ ಈ ಬಗ್ಗೆ ಇಂದು ಸ್ವತಃ ರತನ್ ಟಾಟಾ Ratan Tata ಪ್ರತಿಕ್ರಿಯಿಸಿದ್ದಾರೆ. ಈ ಅಭಿಯಾನವನ್ನು ನಿಲ್ಲಿಸುವಂತೆ ವಿನಂತಿಸಿಕೊಂಡಿದ್ದಾರೆ.

ಭಾರತೀಯನಾಗಲು ನಾನು ಅದೃಷ್ಟಶಾಲಿ ಪ್ರಶಸ್ತಿಯ ವಿಷಯದಲ್ಲಿ ಸಾಮಾಜಿಕ ಮಾಧ್ಯಮದ ಒಂದು ವಲಯವು ವ್ಯಕ್ತಪಡಿಸಿದ ಭಾವನೆಗಳನ್ನು ನಾನು ಪ್ರಶಂಸಿಸುತ್ತಿದ್ದರೂ, ಅಂತಹ ಅಭಿಯಾನಗಳನ್ನು ನಿಲ್ಲಿಸಬೇಕೆಂದು ವಿನಂತಿಸುತ್ತೇನೆ. ಬದಲಾಗಿ, ನಾನು ಭಾರತೀಯನಾಗಲು ಅದೃಷ್ಟಶಾಲಿ ಎಂದು ಭಾವಿಸುತ್ತೇನೆ ಮತ್ತು ಭಾರತದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಪ್ರಯತ್ನಿಸುವೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ರತನ್ ಟಾಟಾ ಬರೆದುಕೊಂಡಿದ್ದಾರೆ.

ಸುಸ್ಥಿರ ಅಭಿವೃದ್ಧಿ ಮತ್ತು ಶಾಂತಿ ಸಾಧಿಸುವ ನೆಲೆಯಲ್ಲಿ ಹೊಸ ಆವಿಷ್ಕಾರಗಳನ್ನು ಬೆಂಬಲಿಸಿದ ಉದ್ಯಮಿ ರತನ್ ಟಾಟಾಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡುವ ಅಭಿಯಾನದ ಬಗ್ಗೆ ಮೋಟಿವೇಷನಲ್ ಸ್ಪೀಕರ್ ಡಾ. ವಿವೇಕ್ ಭಿಂದ್ರಾ ಟ್ವೀಟ್ ಮಾಡಿದ ನಂತರದಿಂದ #BharatRatnaForRatanTata ಎಂಬ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದೆ.

ಕೆಲವು ಟ್ವಿಟರ್ ಬಳಕೆದಾರರು 12/11ರಲ್ಲಾದ ಭಯೋತ್ಪಾದಕ ದಾಳಿಯ ಸಮಯದಲ್ಲಿ ರತನ್ ಟಾಟಾ ಪ್ರದರ್ಶಿಸಿದ ನಿಜವಾದ ನಾಯಕನ ಗುಣಲಕ್ಷಣಗಳನ್ನು ನೆನಪಿಸಿಕೊಂಡಿದ್ದಾರೆ.

ಉದ್ಯಮಿ ರತನ್ ಟಾಟಾಗೆ ಭಾರತ-ಇಸ್ರೇಲ್ ವಾಣಿಜ್ಯ ಮಂಡಳಿಯಿಂದ ಗೌರವ

Published On - 12:17 pm, Sat, 6 February 21

ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಮೈಸೂರು ದಸರಾ 2024: ಜಂಬೂಸವಾರಿಗೆ ಸಿದ್ದತೆಯನ್ನು ಲೈವ್ ಆಗಿ ನೋಡಿ​
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ಬಿಗ್ ಬಾಸ್ ಲಾಂಚ್​ಗೆ ಭರ್ಜರಿ ಟಿಆರ್​ಪಿ; ಹೇಗಿತ್ತು ನೋಡಿ ಸೆಲೆಬ್ರೇಷನ್
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್