AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಕುಟುಂಬಕ್ಕೆ ಲಂಡನ್ ವಾಸ್ತವ್ಯದ ಆಲೋಚನೆಯಿಲ್ಲ: ರಿಲಯನ್ಸ್​ ಇಂಡಸ್ಟ್ರೀಸ್ ಸ್ಪಷ್ಟನೆ

ಅಂಬಾನಿ ಕುಟುಂಬವು ಲಂಡನ್​ಗೆ ಭಾಗಶಃ ವಾಸ್ತವ್ಯ ಬದಲಿಸುವ ಯಾವುದೇ ಆಸಕ್ತಿ ಹೊಂದಿಲ್ಲ ಎಂದು ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್ (RIL) ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಅಂಬಾನಿ ಕುಟುಂಬಕ್ಕೆ ಲಂಡನ್ ವಾಸ್ತವ್ಯದ ಆಲೋಚನೆಯಿಲ್ಲ: ರಿಲಯನ್ಸ್​ ಇಂಡಸ್ಟ್ರೀಸ್ ಸ್ಪಷ್ಟನೆ
ಮುಕೇಶ್ ಅಂಬಾನಿ ಮತ್ತು ಲಂಡನ್​ನ ಸ್ಟೋಕ್​ ಪಾರ್ಕ್
TV9 Web
| Edited By: |

Updated on: Nov 05, 2021 | 10:56 PM

Share

ಮುಂಬೈ: ಅಂಬಾನಿ ಕುಟುಂಬವು ಲಂಡನ್​ಗೆ ಭಾಗಶಃ ವಾಸ್ತವ್ಯ ಬದಲಿಸುವ ಯಾವುದೇ ಆಸಕ್ತಿ ಹೊಂದಿಲ್ಲ ಎಂದು ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್ (RIL) ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ. ಲಂಡನ್​ನ ಸ್ಟೋಕ್ ಪಾರ್ಕ್​ಗೆ ಅಂಬಾನಿ ಕುಟುಂಬ ಭಾಗಶಃ ವಾಸ್ತವ್ಯ ಬದಲಿಸಲು ಆಲೋಚಿಸುತ್ತಿದೆ ಎಂದು ದಿನಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ವರದಿಯು ಕೆಲ ಅನಗತ್ಯ ಮತ್ತು ಅನಪೇಕ್ಷಿತ ಆಧಾರ ರಹಿತ ಊಹಾಪೋಹಗಳಿಗೆ ಕಾರಣವಾಗಿದೆ ಎಂದು ರಿಲಯನ್ಸ್​ ಹೇಳಿದೆ.

ರಿಲಯನ್ಸ್​ನ ಅಧ್ಯಕ್ಷರು ಅಥವಾ ಅವರ ಕುಟುಂಬವು ಲಂಡನ್​ ಅಥವಾ ವಿಶ್ವದ ಬೇರೆ ಯಾವುದೇ ನಗರಕ್ಕೆ ವಾಸ್ತವ್ಯ ಬದಲಿಸುವ ಆಲೋಚನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಿಲಯನ್ಸ್​ ಇಂಡಸ್ಟ್ರೀಸ್​ನ ಭಾಗವಾಗಿರುವ ಆರ್​ಐಐಎಚ್​ಎಲ್ ಲಂಡನ್​ನ ಸ್ಟೋಕ್ ಪಾರ್ಕ್ ಎಸ್ಟೇಟ್​ ಅನ್ನು ಈಚೆಗೆ ಖರೀದಿಸಿತ್ತು. ಪರಂಪರೆಯ ಮೌಲ್ಯ ಹೊಂದಿರುವ ಈ ಆಸ್ತಿಯನ್ನು ಉತ್ತಮ ಗಾಲ್ಫ್​ ಮತ್ತು ಕ್ರೀಡಾ ರೆಸಾರ್ಟ್​ ಆಗಿ ಅಭಿವೃದ್ಧಿಪಡಿಸುವುದು ಕಂಪನಿಯ ಉದ್ದೇಶವಾಗಿದೆ. ಪ್ಲಾನಿಂಗ್ ವೇಳೆ ಸ್ಥಳೀಯ ನಿಯಮಗಳನ್ನು ಸಂಪೂರ್ಣವಾಗಿ ಅನುಸರಿಸಲಾಗುವುದು ಎಂದು ಭರವಸೆ ನೀಡಿದೆ.

ಈ ಆಸ್ತಿಯನ್ನು ತನ್ನ ಸುಪರ್ದಿಗೆ ಪಡೆದುಕೊಂಡ ನಂತರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಗ್ರಾಹಕ ವ್ಯವಹಾರವೊಂದು ರಿಲಯನ್ಸ್​ ಸಮೂಹದ ಭಾಗವಾದಂತೆ ಆಗಿದೆ. ಭಾರತವು ಹೆಸರುವಾಸಿಯಾಗಿರುವ ಆತಿಥ್ಯ ಉದ್ಯಮವನ್ನು ಜಾಗತಿಕ ಮಟ್ಟದಲ್ಲಿ ವಿಸ್ತರಿಸಲು ಈ ಪ್ರಯತ್ನ ನೆರವಾಗಲಿದೆ ಎಂದು ಆರ್​ಐಎಸ್ ಹೇಳಿದೆ.

ಇದನ್ನೂ ಓದಿ: Channapatna toys: ಅಂಬಾನಿಯ ರಿಲಯನ್ಸ್ ಸಹಭಾಗಿ ಸಂಸ್ಥೆಯ ನೆರವು, ಚನ್ನಪಟ್ಟಣದ ಬೊಂಬೆಗಳು ಸಿಂಗಾಪೂರಕ್ಕೆ ರಫ್ತು ಇದನ್ನೂ ಓದಿ: Reliance Industries: ರಿಲಯನ್ಸ್​ ಇಂಡಸ್ಟ್ರೀಸ್​ಗೆ ಸೆಪ್ಟೆಂಬರ್​ ತ್ರೈಮಾಸಿಕದಲ್ಲಿ ದಾಖಲೆಯ 15,479 ಕೋಟಿ ರೂ. ಲಾಭ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ