AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Royal Enfield: ಎಲೆಕ್ಟ್ರಿಕ್ ಬುಲೆಟ್: ಸೌಂಡ್ ಮಾಡದೆ ರಸ್ತೆಗಿಳಿಯಲಿದೆಯಾ ರಾಯಲ್ ಎನ್​ಫೀಲ್ಡ್​?

ಬಜಾಜ್, ಸುಜುಕಿ ಸೇರಿದಂತೆ ದೇಶದ ಪ್ರಮುಖ ಕಂಪೆನಿಗಳು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿದೆ. ಈಗಾಗಲೇ ಹಲವು ಕಂಪೆನಿಗಳು ನೂತನ ಎಲೆಕ್ಟ್ರಿಕ್ ಸ್ಕೂಟರ್​ಗಳನ್ನು ಬಿಡುಗಡೆ ಮಾಡುತ್ತಿದೆ. ದೇಶದಲ್ಲಿ ಇಂಧನ ಬೆಲೆ ಏರಿಕೆಯಿಂದಾಗಿ ಜನರು ಕೂಡ ಎಲೆಕ್ಟ್ರಿಕ್ ವಾಹನಗಳತ್ತ ಆಸಕ್ತಿ ಹೊಂದಿದೆ. ಹೀಗಾಗಿಯೇ ಹಲವು ಕಂಪೆನಿಗಳು ಕೂಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು ಉತ್ತೇಜಿಸಲು ಮುಂದಾಗಿವೆ.

Royal Enfield: ಎಲೆಕ್ಟ್ರಿಕ್ ಬುಲೆಟ್: ಸೌಂಡ್ ಮಾಡದೆ ರಸ್ತೆಗಿಳಿಯಲಿದೆಯಾ ರಾಯಲ್ ಎನ್​ಫೀಲ್ಡ್​?
PC: ElectricVehicleWeb.in
TV9 Web
| Edited By: |

Updated on:Jul 25, 2021 | 10:22 PM

Share

ರಾಯಲ್ ಎನ್​ಫೀಲ್ಡ್ ಕೂಡ ಎಲೆಕ್ಟ್ರಿಕ್ ಬೈಕ್ ಆಗಲಿದೆಯಾ..? ಇಂತಹದೊಂದು ಪ್ರಶ್ನೆಗೆ ಕಾರಣವಾಗಿದ್ದು ಐಷರ್ ಮೋಟಾರ್ಸ್​ನ ಹೊಸ ಯೋಜನೆ. ಹೌದು, ಐಷರ್ ಮೋಟರ್ಸ್​ ಅಧೀನದಲ್ಲಿರುವ ರಾಯಲ್ ಎನ್‌ಫೀಲ್ಡ್ ಪ್ರಸ್ತುತ ದೇಶದಲ್ಲಿ ಕ್ಲಾಸಿಕ್, ಬುಲೆಟ್, ಹಿಮಾಲಯನ್, ಇಂಟರ್‌ಸೆಪ್ಟರ್ ಐಎನ್‌ಟಿ 650, ಕಾಂಟಿನೆಂಟಲ್ ಜಿಟಿ 650 ಮತ್ತು ಉಲ್ಕೆ 350 ಸೇರಿದಂತೆ ಹಲವು ಮಾಡೆಲ್​ಗಳ ಬೈಕ್​ಗಳನ್ನು ರಸ್ತೆಗಿಳಿಸಿದೆ. ಇದೀಗ ಇದೇ ಕಂಪೆನಿ ಎಲೆಕ್ಟ್ರಿಕ್ ವಾಹನ ನಿರ್ಮಾಣದತ್ತ ಬಂಡವಾಳ ಹೂಡಲು ಸಜ್ಜಾಗಿದೆ. ಹೀಗಾಗಿಯೇ ಮುಂದಿನ ದಿನಗಳಲ್ಲಿ ಬುಲೆಟ್ ಕೂಡ ಎಲೆಕ್ಟ್ರಿಕ್ ಬೈಕ್ ಆಗಲಿದೆಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಈ ಬಗ್ಗೆ ಮಾತನಾಡಿರುವ ಐಷರ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ್ ಲಾಲ್, ಐಷರ್ ಮೋಟಾರ್ಸ್ ಎಲೆಕ್ಟ್ರಿಕ್ ವೆಹಿಕಲ್ ವಿಭಾಗದತ್ತ ಗಮನ ಹರಿಸಲು ನಿರ್ಧರಿಸಿದೆ. ಭವಿಷ್ಯದ ದೃಷ್ಟಿಯಲ್ಲಿ ಕಂಪೆನಿಯು ಹೆಚ್ಚಿನ ಎಲೆಕ್ಟ್ರಿಕ್ ವಾಹನ ಉತ್ಪನ್ನಗಳ ಬಗ್ಗೆ ಕೆಲಸ ಮಾಡುತ್ತಿದೆ ಎಂದಿದ್ದಾರೆ. ಇದರ ಬೆನ್ನಲ್ಲೇ ಎಲೆಕ್ಟ್ರಿಕ್ ಬುಲೆಟ್ ಬೈಕ್​ಗಳ ಫೋಟೋಗಳು ವೈರಲ್ ಆಗಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ರಾಯಲ್ ಎನ್​ಫೀಲ್ಡ್​ ಎಲೆಕ್ಟ್ರಿಕ್ ಮಾಡೆಲ್​ನಲ್ಲಿ ರಸ್ತೆಗಿಳಿಯಲಿದೆ ಎಂದೇ ಹೇಳಲಾಗುತ್ತಿದೆ.

ಕಂಪೆನಿಯು ಜಾಗತಿಕ ಮಾರುಕಟ್ಟೆಗಳಿಗೆ ಪೂರ್ಣ ಪ್ರಮಾಣದ ಪ್ರೀಮಿಯಂ ಎಲೆಕ್ಟ್ರಿಕ್ ವಾಹನಗಳು ಮತ್ತು ಸೇವೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದು, ಭವಿಷ್ಯದಲ್ಲಿ ಐಷರ್ ಕಂಪೆನಿಯು ಎಲೆಕ್ಟ್ರಿಕ್ ಬೈಕ್​ಗಳ ನಿರ್ಮಾಣದತ್ತ ಯೋಜನೆ ರೂಪಿಸಲಿದೆ. ಐಷರ್ ಮೋಟಾರ್ಸ್ ಪರಿಸರ, ಸಾಮಾಜಿಕ ಮತ್ತು ಆಡಳಿತ (ಇಎಸ್​​ಜಿ) ದೃಷ್ಟಿಯನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದು, ಎಲೆಕ್ಟ್ರಿಕ್ ವಾಹನಗಳು ಕೂಡ ಅದರ ಒಂದು ಭಾಗವಾಗಿದೆ ಎಂದು ಲಾಲ್ ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಇತ್ತ ಬಜಾಜ್, ಸುಜುಕಿ ಸೇರಿದಂತೆ ದೇಶದ ಪ್ರಮುಖ ಕಂಪೆನಿಗಳು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿದೆ. ಈಗಾಗಲೇ ಹಲವು ಕಂಪೆನಿಗಳು ನೂತನ ಎಲೆಕ್ಟ್ರಿಕ್ ಸ್ಕೂಟರ್​ಗಳನ್ನು ಬಿಡುಗಡೆ ಮಾಡುತ್ತಿದೆ. ದೇಶದಲ್ಲಿ ಇಂಧನ ಬೆಲೆ ಏರಿಕೆಯಿಂದಾಗಿ ಜನರು ಕೂಡ ಎಲೆಕ್ಟ್ರಿಕ್ ವಾಹನಗಳತ್ತ ಆಸಕ್ತಿ ಹೊಂದಿದೆ. ಹೀಗಾಗಿಯೇ ಹಲವು ಕಂಪೆನಿಗಳು ಕೂಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು ಉತ್ತೇಜಿಸಲು ಮುಂದಾಗಿವೆ.

ಅದರಲ್ಲೂ ಓಲಾ ಕಂಪೆನಿಯು ತನ್ನ ನೂತನ ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮೂಲಕ ಭಾರತದಲ್ಲಿ ಸಂಚಲನ ಸೃಷ್ಟಿಸಿದ್ದು, ಈಗಾಗಲೇ 1 ಲಕ್ಷಕ್ಕೂ ಅಧಿಕ ಮಂದಿ ನೂತನ ಸ್ಕೂಟರ್​ಗಾಗಿ ಬುಕ್ಕಿಂಗ್ ಮಾಡಿದ್ದಾರೆ. ಅತ್ತ ಬಜಾಜ್ ಹಾಗೂ ಅಥರ್ ಕಂಪೆನಿ ಕೂಡ ತನ್ನ ಎಲೆಕ್ಟ್ರಿಕ್ ಸ್ಕೂಟರ್​ಗಳ ಬುಕ್ಕಿಂಗ್​ ಅನ್ನು ಮತ್ತಷ್ಟು ಸರಳಗೊಳಿಸಲು ಗ್ರಾಹಕರನ್ನು ಸೆಳೆಯಲು ಮುಂದಾಗಿದೆ. ಇದರ ಬೆನ್ನಲ್ಲೇ ಐಷರ್ ಕಂಪೆನಿ ಕೂಡ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ಒಲವು ತೋರಿದೆ. ಹೀಗಾಗಿಯೇ ಮುಂದಿನ ದಿನಗಳಲ್ಲಿ ಐಷರ್ ಮೋರ್ಟರ್ಸ್​ ಬಿಡುಗಡೆ ಮಾಡಲಿರುವ ಬೈಕ್​ಗಳು ಎಲೆಕ್ಟ್ರಿಕ್ ಬೈಕ್​ಗಳಾಗಿರಲಿವೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.​

PC: ElectricVehicleWeb.in

ಇದನ್ನೂ ಓದಿ: IPL 2021: ಐಪಿಎಲ್​ ಆರಂಭಕ್ಕೂ ಮುನ್ನವೇ CSK ತಂಡದ ಬಿಗ್​ ಪ್ಲ್ಯಾನ್..!

ಇದನ್ನೂ ಓದಿ: ದ್ರಾವಿಡ್ ಗರಡಿ ಹುಡುಗರು ಎಡವಿದೆಲ್ಲಿ: ಭಾರತದ ಸೋಲಿಗೆ ಇದುವೇ ಪ್ರಮುಖ ಕಾರಣ..!

Published On - 5:34 pm, Sun, 25 July 21

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!