AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Alert: ಎಸ್​ಬಿಐ ಗ್ರಾಹಕರೇ ಗಮನಿಸಿ!; ನಾಳೆ 2 ಗಂಟೆ ಕಾಲ ಬ್ಯಾಂಕಿಂಗ್ ಸೇವೆ ಇರೋದಿಲ್ಲ

SBI Internet Banking | ಸೆಪ್ಟೆಂಬರ್ 15ರಂದು ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯವರೆಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ ಇರುವುದಿಲ್ಲ. ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಬಳಸುವವರು 2 ಗಂಟೆಯ ಬಳಿಕ ಸೇವೆಯನ್ನು ಬಳಸಬಹುದು ಎಂದು ಎಸ್​ಬಿಐ ಟ್ವೀಟ್ ಮಾಡಿದೆ.

SBI Alert: ಎಸ್​ಬಿಐ ಗ್ರಾಹಕರೇ ಗಮನಿಸಿ!; ನಾಳೆ 2 ಗಂಟೆ ಕಾಲ ಬ್ಯಾಂಕಿಂಗ್ ಸೇವೆ ಇರೋದಿಲ್ಲ
ಎಸ್​ಬಿಐ
TV9 Web
| Edited By: |

Updated on: Sep 14, 2021 | 5:53 PM

Share

ನವದೆಹಲಿ: ನೀವು ಎಸ್​ಬಿಐ ಗ್ರಾಹಕರಾ? ಆನ್​ಲೈನ್ ಅಥವಾ ಮೊಬೈಲ್ ಬ್ಯಾಂಕಿಂಗ್ ಬಳಸುತ್ತೀರಾ? ಹಾಗಿದ್ದರೆ ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಎಸ್​ಬಿಐ ಮತ್ತೊಮ್ಮೆ ಮೇಂಟೇನನ್ಸ್​ಗಾಗಿ ನಾಳೆ 2 ಗಂಟೆಗಳ ಕಾಲ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆ ನೀಡುವುದಿಲ್ಲ. ಎಸ್​ಬಿಐ ಗ್ರಾಹಕರಿಗೆ ಬುಧವಾರ 2 ಗಂಟೆಗಳ ಕಾಲ ಡಿಜಿಟಲ್ ಬ್ಯಾಂಕಿಂಗ್ ಸೇವೆ ಲಭ್ಯ ಇರುವುದಿಲ್ಲ. ಈ ಬಗ್ಗೆ ಟ್ವಿಟ್ಟರ್​ನಲ್ಲಿ ಎಸ್​ಬಿಐ ಘೋಷಣೆ ಮಾಡಿದೆ.

ಬುಧವಾರ 2 ಗಂಟೆಗಳ ಕಾಲ ತಾತ್ಕಾಲಿಕವಾಗಿ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು. ಇದಕ್ಕೆ ಗ್ರಾಹಕರು ಸಹಕರಿಸಬೇಕು. ಸೆಪ್ಟೆಂಬರ್ 15ರಂದು ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 2 ಗಂಟೆಯವರೆಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆ ಇರುವುದಿಲ್ಲ. ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಬಳಸುವವರು 2 ಗಂಟೆಯ ಬಳಿಕ ಸೇವೆಯನ್ನು ಬಳಸಬಹುದು ಎಂದು ಎಸ್​ಬಿಐ ಟ್ವೀಟ್ ಮಾಡಿದೆ.

ಕಳೆದ ತಿಂಗಳು ಕೂಡ ಎಸ್​ಬಿಐ ನಿರ್ವಹಣೆಗಾಗಿ ಇಂಟರ್ನೆಟ್ ಬ್ಯಾಂಕಿಂಗ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್ ತಿಂಗಳಲ್ಲಿ ಸಾಲು ಸಾಲು ರಜೆಗಳನ್ನು ಘೋಷಿಸಿದೆ. ಸೆಪ್ಟೆಂಬರ್ 17 – ಕರ್ಮ ಪೂಜೆ – (ರಾಂಚಿ), ಸೆಪ್ಟೆಂಬರ್ 19 – ಭಾನುವಾರ, ಸೆಪ್ಟೆಂಬರ್ 20 – ಇಂದ್ರಜಾತ್ರೆ – (ಗಾಂಗ್ಟಕ್), ಸೆಪ್ಟೆಂಬರ್ 21 – ಶ್ರೀ ನಾರಾಯಣ ಗುರು ಸಮಾಧಿ ದಿನ – (ಕೊಚ್ಚಿ ಮತ್ತು ತಿರುವನಂತಪುರಂ), ಸೆಪ್ಟೆಂಬರ್ 25 – ನಾಲ್ಕನೇ ಶನಿವಾರ, ಸೆಪ್ಟೆಂಬರ್ 26 – ಭಾನುವಾರ ಇರಲಿದೆ.

ಈ ಹಿಂದೆ ಸೆಪ್ಟೆಂಬರ್ 4 ರಂದು ಎಸ್‌ಬಿಐನ ಯೋನೊ ಸೇವೆಯನ್ನು ನಿರ್ವಹಣೆ ಕೆಲಸದ ಕಾರಣದಿಂದ ಸುಮಾರು 3 ಗಂಟೆಗಳ ಕಾಲ ರದ್ದುಗೊಳಿಸಲಾಗಿತ್ತು. ಹಾಗೇ, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ನಿರ್ವಹಣೆಯ ಕಾರಣದಿಂದಾಗಿ SBI ಬ್ಯಾಂಕಿಂಗ್ ಸೇವೆಗಳನ್ನುಸ್ಥಗಿತಗೊಳಿಸಲಾಗಿತ್ತು. ಈ ಬಾರಿಯೂ ರಾತ್ರಿ ವೇಳೆ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಸ್ಥಗಿತಗೊಳ್ಳುವುದರಿಂದ ಹೆಚ್ಚು ಜನರಿಗೆ ಸಮಸ್ಯೆ ಆಗುವುದಿಲ್ಲ.

ಇದನ್ನೂ ಓದಿ: SBI Internet Banking: ಇಂದು 3 ತಾಸು ಸ್ಥಗಿತಗೊಳ್ಳಲಿರುವ ಎಸ್​ಬಿಐ ಇಂಟರ್​ನೆಟ್​​ ಬ್ಯಾಂಕಿಂಗ್​, ಯೊನೊ ಆ್ಯಪ್​ ಸೇವೆಗಳು; ಸಮಯ ಹೀಗಿದೆ ನೋಡಿ

SBI Pension Portal: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾದಿಂದ ಪಿಂಚಣಿದಾರರಿಗಾಗಿಯೇ ಹೊಸ ಪೋರ್ಟಲ್

(SBI alert Internet Banking services to be closed for 2 hours on September 15 SBI Yono App)

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ