AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toll plaza tax: ಈ ರಾಜ್ಯ ಸರ್ಕಾರದಿಂದ ಖಾಸಗಿ ವಾಹನಗಳಿಗೆ ಟೋಲ್​ ಪ್ಲಾಜಾ ತೆರಿಗೆ ವಿನಾಯಿತಿ

ಮಧ್ಯಪ್ರದೇಶ ರಾಜ್ಯ ಸರ್ಕಾರವು ಖಾಸಗಿ ವಾಹನಗಳಿಗೆ ಟೋಲ್​ ತೆರಿಗೆಯಿಂದ ವಿನಾಯಿತಿ ನೀಡಲಿದೆ. ಆ ಬಗ್ಗೆ ವಿವರ ಈ ಲೇಖನದಲ್ಲಿ ನೀಡಲಾಗಿದೆ.

Toll plaza tax: ಈ ರಾಜ್ಯ ಸರ್ಕಾರದಿಂದ ಖಾಸಗಿ ವಾಹನಗಳಿಗೆ ಟೋಲ್​ ಪ್ಲಾಜಾ ತೆರಿಗೆ ವಿನಾಯಿತಿ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 17, 2022 | 6:38 PM

Share

ಖಾಸಗಿ ವಾಹನಗಳಿಗೆ ಟೋಲ್ ತೆರಿಗೆಯಿಂದ ವಿನಾಯಿತಿ ನೀಡುವುದಕ್ಕೆ ಮಧ್ಯಪ್ರದೇಶದ ರಾಜ್ಯ ಸರ್ಕಾರ ನಿರ್ಧಾರ ಮಾಡಿರುವುದರಿಂದ ಅಲ್ಲಿನ ಪ್ರಯಾಣಿಕರು ನಿರಾಳ ಆಗುವಂತಾಗಿದೆ. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಹೊಸ ರಸ್ತೆಗಳಲ್ಲಿ ಈ ನಿರ್ಧಾರವನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಮಧ್ಯಪ್ರದೇಶ ಸರ್ಕಾರವು ಟೋಲ್ ತೆರಿಗೆಗೆ (Toll tax) ಸಂಬಂಧಿಸಿದ ನೀತಿಯಲ್ಲಿ ಹೊಸ ನಿಬಂಧನೆಗಳನ್ನು ಮಾಡಿದೆ. ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರವು ಟೋಲ್ ತೆರಿಗೆ ಪಾವತಿಯಿಂದ ಖಾಸಗಿ ವಾಹನಗಳಿಗೆ ವಿನಾಯಿತಿ ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ನಿರ್ಧಾರ ಕೈಗೊಳ್ಳುವ ಮುನ್ನ ಲೋಕೋಪಯೋಗಿ ಇಲಾಖೆಯಿಂದ ಸುಮಾರು 200 ರಸ್ತೆಗಳ ಸಮೀಕ್ಷೆ ನಡೆಸಲಾಗಿತ್ತು. ರಾಜ್ಯದ ಬಹುತೇಕ ಪ್ರಮುಖ ರಸ್ತೆಗಳನ್ನು ರಾಜ್ಯ ರಸ್ತೆ ಅಭಿವೃದ್ಧಿ ನಿಗಮವು ಬಿಲ್ಡ್ ಆಪರೇಟ್ ಮತ್ತು ಟ್ರಾನ್ಸ್‌ಫರ್ (ಬಿಒಟಿ) ವಿಧಾನವನ್ನು ಬಳಸಿ ನಿರ್ಮಿಸಿದೆ. ಶೇ 80ರಷ್ಟು ಟೋಲ್ ತೆರಿಗೆಯನ್ನು ವಾಣಿಜ್ಯ ವಾಹನಗಳಿಂದ ಸಂಗ್ರಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಬಹಿರಂಗಪಡಿಸಿದೆ. ಖಾಸಗಿ ವಾಹನಗಳಿಗೆ ಕೇವಲ ಶೇ 20ರಷ್ಟು ತೆರಿಗೆ ವಿಧಿಸಲಾಗಿದೆ.

ಟೋಲ್ ಪ್ಲಾಜಾಗಳ ದಟ್ಟಣೆಯನ್ನು ಕಡಿಮೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಂಗ್ರಹಿಸಿದ ಎಲ್ಲ ಟೋಲ್ ತೆರಿಗೆಗಳಲ್ಲಿ ಐದನೇ ಒಂದು ಭಾಗವನ್ನು ಖಾಸಗಿ ವಾಹನಗಳು ಕೊಡುಗೆ ನೀಡುತ್ತವೆಯಾದರೂ ಅವು ಆಗಾಗ ಸಂಚಾರ ದಟ್ಟಣೆಗೆ ಕಾರಣವಾಗುತ್ತವೆ. ಇಂತಹ ಸನ್ನಿವೇಶವನ್ನು ತಪ್ಪಿಸಲು ರಾಜ್ಯ ಸಾರಿಗೆ ಇಲಾಖೆಯು ಖಾಸಗಿ ವಾಹನಗಳಿಗೆ ಟೋಲ್ ತೆರಿಗೆಯಿಂದ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವ ಸಲ್ಲಿಸಿತ್ತು. ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೀರಜ್ ಮಂಡ್ಲೋಯ್ ಪ್ರಕಾರ, ಈಗ ಟೋಲ್ ತೆರಿಗೆ ವಿಧಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಅನುಮೋದನೆಗೆ ಕಳುಹಿಸಲಾಗುವುದು, ಖಾಸಗಿ ವಾಹನಗಳಿಂದ ತೆರಿಗೆ ವಸೂಲಿ ಮಾಡದಿರುವ ನಿಯಮವನ್ನು ಸೇರಿಸಲಾಗುವುದಿಲ್ಲ.

ವಿಐಪಿಗಳಿಗೆ ಸಾಮಾನ್ಯವಾಗಿ ಟೋಲ್ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗುತ್ತದೆ. ಈ ಪಟ್ಟಿಯಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ, ಮಂತ್ರಿಗಳಿಂದ ಮೊದಲುಗೊಂಡು ಸಂಸದರಿದ್ದಾರೆ. ನ್ಯಾಯಾಧೀಶರು, ಮ್ಯಾಜಿಸ್ಟ್ರೇಟ್‌ಗಳು, ರಕ್ಷಣೆ, ಪೊಲೀಸ್, ಅಗ್ನಿಶಾಮಕ, ಆಂಬ್ಯುಲೆನ್ಸ್‌ಗಳು, ಆಟೋಮೊಬೈಲ್‌ಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅಧಿಕಾರಿಗಳು, ಕಾರ್ಯದರ್ಶಿಗಳು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿದವರಿಗೆ ವಿನಾಯಿತಿ ಇದೆ.

ಇದನ್ನೂ ಓದಿ: ವರ್ಷದೊಳಗೆ ಜಿಪಿಎಸ್ ಆಧರಿತ ಟೋಲ್, ಬ್ಯಾಂಕ್ ಖಾತೆಯಿಂದಲೇ ಟೋಲ್ ಶುಲ್ಕ ಕಡಿತ: ನಿತಿನ್ ಗಡ್ಕರಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!