AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ, ಮುಂದುವರಿದ ಕಾರ್ಮಿಕರ ಮುಷ್ಕರ..

ಅದು ರಾಜ್ಯದ ಪ್ರತಿಷ್ಠಿತ ಕಂಪನಿ. ಸಾವಿರಾರು ಕಾರ್ಮಿಕರು ಆ ಕಂಪನಿಯಲ್ಲಿ ಕೆಲ್ಸ ನಿರ್ವಹಿಸುತ್ತಿದ್ದಾರೆ. ಆದ್ರೆ ಕಾರ್ಮಿಕರು ಹಾಗೂ ಕಂಪನಿ ಆಡಳಿತ ಮಂಡಳಿ ಹಗ್ಗ ಜಗ್ಗಾಟದಿಂದ ಒಂದೆಡೆ ಕಂಪನಿ ಎರಡನೇ ಬಾರಿಗೆ ಲಾಕ್‌ಔಟ್‌ ಘೋಷಣೆ ಮಾಡಿದ್ರೆ, ಮತ್ತೊಂದೆಡೆ ಕಾರ್ಮಿಕರು ತಮ್ಮ ಪಟ್ಟುಬಿಡದೆ ಪ್ರತಿಭಟನೆ ಮುಂದುವರೆಸಿದ್ದಾರೆ.

2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ, ಮುಂದುವರಿದ ಕಾರ್ಮಿಕರ ಮುಷ್ಕರ..
2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Nov 26, 2020 | 11:28 AM

ರಾಮನಗರ: ಬಿಡದಿ ಕೈಗಾರಿಕಾ ಪ್ರದೇಶದಲ್ಲಿರೋ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿಯ ಆಡಳಿತ ಮಂಡಳಿ, ಎರಡನೇ ಬಾರಿಗೆ ಕಂಪನಿಗೆ ಲಾಕ್‌ಔಟ್ ಘೋಷಣೆ ಮಾಡಿದೆ. ಅತ್ತ ಕಂಪನಿಯ ಆಡಳಿತ ಮಂಡಳಿಯ ನಡೆಯನ್ನ ವಿರೋಧಿಸಿ ಕಾರ್ಮಿಕರು ಸಹ ಪ್ರತಿಭಟನೆ ಮುಂದುವರೆಸಿದ್ದಾರೆ.

ಅಂದಹಾಗೆ, ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವಿನ ಹಗ್ಗಾ ಜಗ್ಗಾಟದಿಂದ ನವೆಂಬರ್ 10ರಂದು ಲಾಕ್ಔಟ್‌ ಘೋಷಣೆ ಮಾಡಿತ್ತು. ಇದನ್ನ ಖಂಡಿಸಿ ಕಾರ್ಮಿಕರು ಸಹ ಪ್ರತಿಭಟನೆ ಮುಂದುವರೆಸಿದ್ರು.

ಹೀಗಾಗಿ ರಾಜ್ಯ ಸರ್ಕಾರ ಸಹ ಮಧ್ಯಪ್ರವೇಶಿಸಿ ಕಂಪನಿಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮುಖಂಡರ ಸಭೆ ನಡೆಸಿ, ರಾಜಿ ಸಂಧಾನ ಸಹ ಮಾಡಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿತ್ತು.

ಅಲ್ಲದೆ ಲಾಕ್ಔಟ್‌ ಹಾಗೂ ಮುಷ್ಕರ ಎರಡನ್ನೂ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18ರಂದು ಆದೇಶಿಸಿತ್ತು. ಈ ನಿಟ್ಟಿನಲ್ಲಿ ಕಂಪನಿ ಲಾಕ್‌ಔಟ್‌ ತೆರವುಗೊಳಿಸಿ ನವೆಂಬರ್‌ 10ರಂದು ಆದೇಶಿಸಿತ್ತು.

ಈ ನಿಟ್ಟಿನಲ್ಲಿ ಕಂಪನಿ ಲಾಕ್ಔಟ್‌ ತೆರವುಗೊಳಿಸಿ ನವೆಂಬರ್‌ 19ರಿಂದ ಕೆಲಸ ಪುನಾರಂಭ ಮಾಡಿತ್ತು. ಆದ್ರೆ ಕಾರ್ಮಿಕರು ಮುಷ್ಕರ ಮುಂದುವರೆಸಿದ್ದರಿಂದ ಮತ್ತೆ ಎರಡನೇ ಬಾರಿ ಟೊಯೋಟಾ ಕಂಪನಿ ಮತ್ತೆ ಲಾಕ್ಔಟ್‌ ಘೋಷಣೆ ಮಾಡಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರೋ ಆಡಳಿತ ಮಂಡಳಿ, ಕಾರ್ಮಿಕರು ಶಿಸ್ತು, ಕಂಪನಿಯ ನಿಯಮಗಳನ್ನ ಪಾಲಿಸುತ್ತಿಲ್ಲ. ಕೆಲಸಕ್ಕೆ ಬರೋ ಕಾರ್ಮಿಕರಿಗೆ, ಮುಖಂಡರು ಬೆದರಿಕೆ ಹಾಕ್ತಿದ್ದಾರೆ. ಕೆಲಸಕ್ಕೆ ಕಾರ್ಮಿಕರು ಹಾಜರಾಗಿಲ್ಲ. ಹೀಗಾಗಿ ನಾವು ಎರಡನೇ ಬಾರಿ ಲಾಕ್ಔಟ್‌ ಮಾಡಿದ್ದೇವೆ ಎಂದಿದೆ.

ಒಟ್ನಲ್ಲಿ ಕಂಪನಿಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಆರೋಪ ಪ್ರತ್ಯಾರೋಪದಿಂದ ಕಂಪನಿ ಲಾಕ್‌ಔಟ್‌ ಆಗಿದ್ರೆ ಕಾರ್ಮಿಕರು ಹೋರಾಟ ಮುಂದುವರೆಸಿದ್ದಾರೆ. ಹೀಗಾಗಿ ಸರ್ಕಾರ ಈ ವಿಚಾರವಾಗಿ ಮತ್ತೆ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸೋ ಕೆಲ್ಸ ಮಾಡ್ಬೇಕಿದೆ.

Published On - 6:40 am, Thu, 26 November 20

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ