AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ, ಮುಂದುವರಿದ ಕಾರ್ಮಿಕರ ಮುಷ್ಕರ..

ಅದು ರಾಜ್ಯದ ಪ್ರತಿಷ್ಠಿತ ಕಂಪನಿ. ಸಾವಿರಾರು ಕಾರ್ಮಿಕರು ಆ ಕಂಪನಿಯಲ್ಲಿ ಕೆಲ್ಸ ನಿರ್ವಹಿಸುತ್ತಿದ್ದಾರೆ. ಆದ್ರೆ ಕಾರ್ಮಿಕರು ಹಾಗೂ ಕಂಪನಿ ಆಡಳಿತ ಮಂಡಳಿ ಹಗ್ಗ ಜಗ್ಗಾಟದಿಂದ ಒಂದೆಡೆ ಕಂಪನಿ ಎರಡನೇ ಬಾರಿಗೆ ಲಾಕ್‌ಔಟ್‌ ಘೋಷಣೆ ಮಾಡಿದ್ರೆ, ಮತ್ತೊಂದೆಡೆ ಕಾರ್ಮಿಕರು ತಮ್ಮ ಪಟ್ಟುಬಿಡದೆ ಪ್ರತಿಭಟನೆ ಮುಂದುವರೆಸಿದ್ದಾರೆ.

2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ, ಮುಂದುವರಿದ ಕಾರ್ಮಿಕರ ಮುಷ್ಕರ..
2ನೇ ಬಾರಿ ಲಾಕ್‌ಔಟ್ ಘೋಷಿಸಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿ
ಆಯೇಷಾ ಬಾನು
| Edited By: |

Updated on:Nov 26, 2020 | 11:28 AM

Share

ರಾಮನಗರ: ಬಿಡದಿ ಕೈಗಾರಿಕಾ ಪ್ರದೇಶದಲ್ಲಿರೋ ಪ್ರತಿಷ್ಠಿತ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಕಂಪನಿಯ ಆಡಳಿತ ಮಂಡಳಿ, ಎರಡನೇ ಬಾರಿಗೆ ಕಂಪನಿಗೆ ಲಾಕ್‌ಔಟ್ ಘೋಷಣೆ ಮಾಡಿದೆ. ಅತ್ತ ಕಂಪನಿಯ ಆಡಳಿತ ಮಂಡಳಿಯ ನಡೆಯನ್ನ ವಿರೋಧಿಸಿ ಕಾರ್ಮಿಕರು ಸಹ ಪ್ರತಿಭಟನೆ ಮುಂದುವರೆಸಿದ್ದಾರೆ.

ಅಂದಹಾಗೆ, ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವಿನ ಹಗ್ಗಾ ಜಗ್ಗಾಟದಿಂದ ನವೆಂಬರ್ 10ರಂದು ಲಾಕ್ಔಟ್‌ ಘೋಷಣೆ ಮಾಡಿತ್ತು. ಇದನ್ನ ಖಂಡಿಸಿ ಕಾರ್ಮಿಕರು ಸಹ ಪ್ರತಿಭಟನೆ ಮುಂದುವರೆಸಿದ್ರು.

ಹೀಗಾಗಿ ರಾಜ್ಯ ಸರ್ಕಾರ ಸಹ ಮಧ್ಯಪ್ರವೇಶಿಸಿ ಕಂಪನಿಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮುಖಂಡರ ಸಭೆ ನಡೆಸಿ, ರಾಜಿ ಸಂಧಾನ ಸಹ ಮಾಡಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿತ್ತು.

ಅಲ್ಲದೆ ಲಾಕ್ಔಟ್‌ ಹಾಗೂ ಮುಷ್ಕರ ಎರಡನ್ನೂ ನಿಷೇಧಿಸಿ ರಾಜ್ಯ ಸರ್ಕಾರ ನವೆಂಬರ್‌ 18ರಂದು ಆದೇಶಿಸಿತ್ತು. ಈ ನಿಟ್ಟಿನಲ್ಲಿ ಕಂಪನಿ ಲಾಕ್‌ಔಟ್‌ ತೆರವುಗೊಳಿಸಿ ನವೆಂಬರ್‌ 10ರಂದು ಆದೇಶಿಸಿತ್ತು.

ಈ ನಿಟ್ಟಿನಲ್ಲಿ ಕಂಪನಿ ಲಾಕ್ಔಟ್‌ ತೆರವುಗೊಳಿಸಿ ನವೆಂಬರ್‌ 19ರಿಂದ ಕೆಲಸ ಪುನಾರಂಭ ಮಾಡಿತ್ತು. ಆದ್ರೆ ಕಾರ್ಮಿಕರು ಮುಷ್ಕರ ಮುಂದುವರೆಸಿದ್ದರಿಂದ ಮತ್ತೆ ಎರಡನೇ ಬಾರಿ ಟೊಯೋಟಾ ಕಂಪನಿ ಮತ್ತೆ ಲಾಕ್ಔಟ್‌ ಘೋಷಣೆ ಮಾಡಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರೋ ಆಡಳಿತ ಮಂಡಳಿ, ಕಾರ್ಮಿಕರು ಶಿಸ್ತು, ಕಂಪನಿಯ ನಿಯಮಗಳನ್ನ ಪಾಲಿಸುತ್ತಿಲ್ಲ. ಕೆಲಸಕ್ಕೆ ಬರೋ ಕಾರ್ಮಿಕರಿಗೆ, ಮುಖಂಡರು ಬೆದರಿಕೆ ಹಾಕ್ತಿದ್ದಾರೆ. ಕೆಲಸಕ್ಕೆ ಕಾರ್ಮಿಕರು ಹಾಜರಾಗಿಲ್ಲ. ಹೀಗಾಗಿ ನಾವು ಎರಡನೇ ಬಾರಿ ಲಾಕ್ಔಟ್‌ ಮಾಡಿದ್ದೇವೆ ಎಂದಿದೆ.

ಒಟ್ನಲ್ಲಿ ಕಂಪನಿಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಆರೋಪ ಪ್ರತ್ಯಾರೋಪದಿಂದ ಕಂಪನಿ ಲಾಕ್‌ಔಟ್‌ ಆಗಿದ್ರೆ ಕಾರ್ಮಿಕರು ಹೋರಾಟ ಮುಂದುವರೆಸಿದ್ದಾರೆ. ಹೀಗಾಗಿ ಸರ್ಕಾರ ಈ ವಿಚಾರವಾಗಿ ಮತ್ತೆ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸೋ ಕೆಲ್ಸ ಮಾಡ್ಬೇಕಿದೆ.

Published On - 6:40 am, Thu, 26 November 20

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ