World Consumer Day: ವಿಶ್ವ ಗ್ರಾಹಕ ದಿನ; ಗ್ರಾಹಕರೇ ನಿಮ್ಮ ಹಕ್ಕುಗಳ ಬಗ್ಗೆ ನಿಮಗೆ ಅರಿವಿದೆಯೇ?

ಗ್ರಾಹಕ ಹಕ್ಕುಗಳನ್ನು ಕಾಪಾಡಲು ನ್ಯಾಯಾಲಯಗಳೂ ಇರುತ್ತವೆ. ಹಾಗಾದರೆ ಗ್ರಾಹಕನ ಹಕ್ಕುಗಳು ಯಾವುವು? ಇಲ್ಲಿವೆ ವಿವರ.

World Consumer Day: ವಿಶ್ವ ಗ್ರಾಹಕ ದಿನ; ಗ್ರಾಹಕರೇ ನಿಮ್ಮ ಹಕ್ಕುಗಳ ಬಗ್ಗೆ ನಿಮಗೆ ಅರಿವಿದೆಯೇ?
ಇಂದು ವಿಶ್ವ ಗ್ರಾಹಕ ದಿನ
Follow us
| Updated By: Skanda

Updated on: Mar 15, 2021 | 12:19 PM

ಇಂದು ವಿಶ್ವ ಗ್ರಾಹಕ ದಿನ. ಜಾಗತಿಕವಾಗಿ ಗ್ರಾಹಕರ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಸಂಘಟನೆಗಳು ಗ್ರಾಹಕ ದಿನವನ್ನು ಆಚರಿಸುತ್ತಿವೆ. ಪ್ರತಿಯೊಬ್ಬ ಗ್ರಾಹಕರಿಗೂ ಅವರದೇ ಆದ ಮೂಲಭೂತ ಹಕ್ಕುಗಳಿರುತ್ತವೆ. ಅವುಗಳನ್ನು ಪಡೆಯುವುದರಿಂದ ಯಾವುದೇ ಗ್ರಾಹಕನೂ ವಂಚಿತನಾಗಬಾರದು ಎಂಬುದೇ ವಿಶ್ವ ಗ್ರಾಹಕ ದಿನ ಆಚರಣೆಯ ಉದ್ದೇಶ. ಅಂದಹಾಗೆ ಭಾರತದಲ್ಲಿ ಮಾತ್ರ ಮಾರ್ಚ್ 24ರಂದು ಗ್ರಾಹಕ ದಿನವನ್ನು ಆಚರಿಸಲಾಗುತ್ತದೆ.

ಬೆಂಗಳೂರು, ಮೈಸೂರು ಸೇರಿದಂತೆ ಬೃಹತ್ ನಗರಗಳಲ್ಲಿ ಗ್ರಾಹಕ ರಕ್ಷಣಾ ಒಕ್ಕೂಟಗಳು ಸಕ್ರಿಯವಾಗಿರುತ್ತವೆ. ಗ್ರಾಹಕ ಹಕ್ಕುಗಳಲ್ಲಿ ಯಾವುದೇ ಕುಂದುಕೊರತೆ ಬಂದಲ್ಲಿ ಜಿಲ್ಲಾ ವ್ಯಾಪ್ತಿಗಳಲ್ಲೂ ಗ್ರಾಹಕರ ಹಿತ ರಕ್ಷಣಾ ವೇದಿಕೆಗಳಿರುತ್ತವೆ. ಇವು ಗ್ರಾಹಕ ರಕ್ಷಣಾ ಒಕ್ಕೂಟಗಳು ಗ್ರಾಹಕರ ಹಿತ ರಕ್ಷಣೆ ಕಾಪಾಡುವ ಹೊಣೆ ಹೊತ್ತಿರುತ್ತವೆ. ಯಾವುದೇ ಒಬ್ಬ ಗ್ರಾಹಕ ಮೋಸ ಹೋಗದಂತೆ ತಡೆಯಲು, ಆತ ಕೊಂಡುಕೊಳ್ಳುವ ವಸ್ತುಗಳ ಬೆಲೆಗೆ ತಕ್ಕನಾಗಿರುವಂತೆ ವಸ್ತು ಅಥವಾ ಸೇವೆಗಳು ದೊರೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಗ್ರಾಹಕ ಹಕ್ಕುಗಳ ಹಿತ ರಕ್ಷಣಾ ವೇದಿಕೆ ಹೊಂದಿರುತ್ತದೆ. ಯಾವುದೇ ಗ್ರಾಹಕ ತಾನು ಕೊಂಡ ವಸ್ತುವಿನಲ್ಲಿ ದೋಷ ಕಂಡುಬಂದಲ್ಲಿ ಗ್ರಾಹಕ ರಕ್ಷಣಾ ಸಮಿತಿಯ ಮೊರೆ ಹೋಗಬಹುದು.

ಹಾಗಾದರೆ ಗ್ರಾಹಕನ ಹಕ್ಕುಗಳು ಯಾವುವು? ಇಲ್ಲಿವೆ ವಿವರ.

1). ಸುರಕ್ಷತೆಯ ಹಕ್ಕು 2). ಮಾಹಿತಿ ಪಡೆಯುವ ಹಕ್ಕು 3). ಆಯ್ಕೆಯ ಹಕ್ಕು ಮತ್ತು ಆಲಿಸುವ ಹಕ್ಕು 4). ಕುಂದುಕೊರತೆಗಳನ್ನು ಪರಿಹರಿಸುವ ಹಕ್ಕು 5). ಗ್ರಾಹಕರ ಶಿಕ್ಷಣದ ಹಕ್ಕು

ಗ್ರಾಹಕ ಹಕ್ಕುಗಳಲ್ಲಿ ಯಾವುದೇ ಕುಂದುಕೊರತೆ ಬಂದಲ್ಲಿ ಜಿಲ್ಲಾ ವ್ಯಾಪ್ತಿಗಳಲ್ಲೂ ಗ್ರಾಹಕರ ಹಿತ ರಕ್ಷಣಾ ವೇದಿಕೆಗಳಿರುತ್ತವೆ. ಅವುಗಳ ಮೂಲಕವು ಗ್ರಾಹಕರು ತಾವು ಕೊಂಡ ವಸ್ತು ಅಥವಾ ಪಡೆದ ಸೌಲಭ್ಯಗಳಲ್ಲಿ ಲೋಪದೋಷ ಕಂಡುಬಂದಲ್ಲಿ ಪರಿಹರಿಸಿಕೊಳ್ಳಬಹುದು. ಜಿಲ್ಲಾ ವೇದಿಕೆಯನ್ನು ಜಿಲ್ಲೆಯಲ್ಲಿ ಗ್ರಾಹಕರ ಹಿತರಕ್ಷಣಾ ಕಾಯ್ದೆ 1989 ರ ಅನ್ವಯ ಸ್ಥಾಪಿಸಲಾಗಿದೆ. ಮತ್ತು ರಾಜ್ಯ ಸರ್ಕಾರ ಇಚ್ಚಿಸಿದಲ್ಲಿ ಹೆಚ್ಚುವರಿ ಜಿಲ್ಲಾ ವೇದಿಕೆಗಳನ್ನು ಪ್ರತಿ ಜಿಲ್ಲೆಯಲ್ಲಿ ಸ್ಥಾಪಿಸಬಹುದಾಗಿದೆ.

ಗ್ರಾಹಕ ಸೇವೆಗಳನ್ನು ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲೂ ನೀಡಬೇಕು ಎಂಬ ಕೂಗು ಇತ್ತೀಚಿಗೆ ಪ್ರಬಲವಾಗುತ್ತದೆ. ಗ್ರಾಹಕರು ತಮ್ಮ ಮಾತೃಭಾಷೆಗಳಲ್ಲಿ ಗ್ರಾಹಕ ಸೇವೆ ಪಡೆಯಬೇಕು. ಯಾವುದೇ ಗ್ರಾಹಕರೂ ಈ ಸೇವೆಗಳಿಂದ ವಂಚಿತನಾಗಬಾರದು ಎಂಬುದೇ ಈ ಬೇಡಿಕೆಯ ಉದ್ದೇಶವಾಗಿದೆ.

ಇದನ್ನೂ ಓದಿ: Gold Price | ಚಿನ್ನದ ದರ ಸತತ ಇಳಿಕೆ; ಖರೀದಿಗೆ ಮುಂದಾದ ಗ್ರಾಹಕರು

Explainer | ಸ್ವಾಭಿಮಾನದ ಬಾಳ್ವೆಯ ತಳಹದಿ ಮಾನವ ಹಕ್ಕುಗಳು

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್