AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಶತಶೃಂಗ ಪರ್ವತದ ಮೇಲೆ 15,000 ಯೋಗ ಪಟುಗಳಿಂದ ಯೋಗಾಭ್ಯಾಸ

ಪಾಂಡವರು ವನವಾಸಕ್ಕೆ ಬಂದ ಸಂದರ್ಭದಲ್ಲಿ ಈ ಬೆಟ್ಟದ ಮೇಲೆ ವಾಸವಿದ್ದರು ಎನ್ನುವುದಕ್ಕೆ ಕೆಲವೊಂದು ಕುರುಹುಗಳು ಸಿಗುತ್ತದೆ. ಬೆಟ್ಟದ ಮೇಲೆ ಗುಹೆಯೊಂದರಲ್ಲಿ ಪಾಂಡವರು ವಾಸವಿದ್ದ ಸ್ಥಳ ಪಾಂಡವರ ಪಡಸಾಲೆಯನ್ನು ಕಾಣಬಹುದು.

ಕೋಲಾರ ಶತಶೃಂಗ ಪರ್ವತದ ಮೇಲೆ 15,000 ಯೋಗ ಪಟುಗಳಿಂದ ಯೋಗಾಭ್ಯಾಸ
ಶತಶೃಂಗ ಪರ್ವತದ ಮೇಲೆ ಯೋಗಾಭ್ಯಾಸ ಮಾಡಿದರು
TV9 Web
| Edited By: |

Updated on:Jun 21, 2022 | 10:46 AM

Share

ಕೋಲಾರ: ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಹಿನ್ನೆಲೆ ಕೋಲಾರದ ಶತಶೃಂಗ (Shathashrunga) ಪರ್ವತದ ಮೇಲೆ ಸುಮಾರು 15,000 ಯೋಗಪಟುಗಳು ಯೋಗಾಭ್ಯಾಸ ಮಾಡಿದ್ದು, ಸಂಸದ ಮುನಿಸ್ವಾಮಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದರು. ಅಲ್ಲದೆ ಜಿಲ್ಲೆಯ ಹಲವು ಕಡೆಗಳಿಂದ ಸಾವಿರಾರು ವಿದ್ಯಾರ್ಥಿಗಳು ಬಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಯೋಗ ದಿನಾಚರಣೆ ಹಿನ್ನೆಲೆ ಸುಮಾರು 40 ಎಕರೆ ಜಾಗವನ್ನು ಕಳೆದ ಹದಿನೈದು ದಿನಗಳಿಂದ ಸ್ವಚ್ಛಗೊಳಿಸಿ ಅಗತ್ಯ ರಸ್ತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು.

ಶತಶೃಂಗ ಪರ್ವತದ ಇತಿಹಾಸ ಏನು? ಶತಶೃಂಗ ಪರ್ವತಕ್ಕೆ ತನ್ನದೇ ಆದ ಇತಿಹಾಸ ಇದೆ. ಈ ಬೆಟ್ಟದಲ್ಲಿ ಮುಕುಚುಂದ ಮುನಿಗಳು ತಪ್ಪಸ್ಸು ಮಾಡಿದ್ದಾರೆ ಎಂಬ ನಂಬಿಕೆ ಇದೆ. ಇದೇ ಬೆಟ್ಟದ ಮೇಲಿಲೆ ಅಂತರಗಂಗೆ ಬಸವನ ಬಾಯಿಂದ ಕಾಶಿಯಿಂದಲೇ ಗಂಗೆ ಹರಿದು ಬರುತ್ತಾಳೆ ಎನ್ನುವ ಪ್ರತೀತಿಯೂ ಇದೆ.

ಇನ್ನು ಪಾಂಡವರು ವನವಾಸಕ್ಕೆ ಬಂದ ಸಂದರ್ಭದಲ್ಲಿ ಈ ಬೆಟ್ಟದ ಮೇಲೆ ವಾಸವಿದ್ದರು ಎನ್ನುವುದಕ್ಕೆ ಕೆಲವೊಂದು ಕುರುಹುಗಳು ಸಿಗುತ್ತದೆ. ಬೆಟ್ಟದ ಮೇಲೆ ಗುಹೆಯೊಂದರಲ್ಲಿ ಪಾಂಡವರು ವಾಸವಿದ್ದ ಸ್ಥಳ ಪಾಂಡವರ ಪಡಸಾಲೆಯನ್ನು ಕಾಣಬಹುದು. ಪಾಂಡವರು ಪ್ರತಿಷ್ಠಾಪನೆ ಮಾಡಿರುವ ಶಿವಲಿಂಗ ಕೂಡಾ ಇದೇ ಬೆಟ್ಟದ ಮೇಲಿದೆ. ಇನ್ನು ಬೆಟ್ಟದ ಮೇಲೆ ಗಂಗರು, ಚೋಳರು, ಹಾಗೂ ಬಾದಾಮಿ ಚಾಲುಕ್ಯರ ಕಾಲದಲ್ಲಿ ಸುಂದರ ಕೆತ್ತನೆಗಳ ಮೂಲಕ ಕೆತ್ತಲಾಗಿರುವ ದೇವಾಲಯಗಳು ಇವೆ.

ಇದನ್ನೂ ಓದಿ
Image
Shocking News: ಹೆರಿಗೆ ವೇಳೆ ಶಿಶುವಿನ ತಲೆ ಕತ್ತರಿಸಿ ಮಹಿಳೆಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ!
Image
International Yoga Day 2022: ದೇಶದ ವಿವಿಧ ಪ್ರದೇಶಗಳಲ್ಲಿ ಯೋಗ ದಿನಾಚರಣೆಯ ಸಂಗ್ರಹ ಚಿತ್ರಗಳು ಇಲ್ಲಿದೆ
Image
International Yoga Day 2022: ಯೋಗವನ್ನು ಯುವಕರು ಯಾಕೆ ಮಾಡಬೇಕು? ಯೋಗ ಥೆರಪಿಸ್ಟ್ ಹೇಳಿದ್ದೇನು ಗೊತ್ತಾ?
Image
ಮನೆಯಲ್ಲೇ ಸಿಕ್ತು ಖ್ಯಾತ ಕಿರುತೆರೆ ನಟಿಯ ಶವ; ಬಾಯ್​ಫ್ರೆಂಡ್ ಮೇಲೆ ಮೂಡಿತು ಅನುಮಾನ

ಇದನ್ನೂ ಓದಿ: Shocking News: ಹೆರಿಗೆ ವೇಳೆ ಶಿಶುವಿನ ತಲೆ ಕತ್ತರಿಸಿ ಮಹಿಳೆಯ ಗರ್ಭದಲ್ಲೇ ಬಿಟ್ಟ ಆಸ್ಪತ್ರೆ ಸಿಬ್ಬಂದಿ!

40 ಎಕರೆ ಪ್ರದೇಶದಲ್ಲಿ 15 ದಿನಗಳಿಂದ ಸಿದ್ಧತೆ: ಯೋಗಾಭ್ಯಾಸಕ್ಕೆ ಕೋಲಾರ ಸಂಸದ ಮುನಿಸ್ವಾಮಿ ವಿಶೇಷ ಕಾಳಜಿ ವಹಿಸಿ ಈ ಸ್ಥಳದಲ್ಲಿ ಯೋಗ ಮಾಡಬೇಕೆಂದು ಪಟ್ಟು ಹಿಡಿದು ಕೆಲಸ ಮಾಡಿಸಿದ್ದರು. ಈ ಕಾರ್ಯಕ್ಕೆ ಕೈ ಜೋಡಿಸಿದ್ದ ಜಿಲ್ಲಾಡಳಿತ ಮಳೆ ಬಂದರೂ ಸಮಸ್ಯೆ ಬಾರದ ರೀತಿಯಲ್ಲಿ ಪ್ಲಾಸ್ಟಿಕ್​ ಕವರ್​ ಸಹಿತ ಮ್ಯಾಟ್​ಗಳನ್ನು ಹಾಕಿ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿತ್ತು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Tue, 21 June 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ