AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2022: ಅಂತರಾಷ್ಟ್ರೀಯ ಯೋಗ ದಿನದ ಮಹತ್ವ: ಈ ವರ್ಷದ ಥೀಮ್​ ಏನು ಗೊತ್ತಾ..?

ವಿಶ್ವ ಯೋಗ ದಿನಾಚರಣೆ 2022: 11 ಡಿಸೆಂಬರ್ 2014 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಜೂನ್ 21 ಅನ್ನು ವಿಶ್ವ ಯೋಗ ದಿನವೆಂದು ಘೋಷಿಸಿತು. ಕರ್ನಾಟಕದ ಮೈಸೂರಿನಲ್ಲಿ ಈ ವರ್ಷದ ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತಿದೆ.

International Yoga Day 2022: ಅಂತರಾಷ್ಟ್ರೀಯ ಯೋಗ ದಿನದ ಮಹತ್ವ: ಈ ವರ್ಷದ ಥೀಮ್​ ಏನು ಗೊತ್ತಾ..?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 16, 2022 | 7:49 AM

ಯೋಗ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲದೆ ಮಾನಸಿಕ ಆರೋಗ್ಯಕ್ಕೂ ಅಷ್ಟೇ ಒಳ್ಳೆಯದು. ಯೋಗ (Yoga)  ದ ಮಹತ್ವವನ್ನು ತಿಳಿಸಲು ಮತ್ತು ಅದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ಬಾರಿಯೂ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ (International Yoga Day) ದಿನವನ್ನು ಆಚರಿಸಲಾಗುವುದು ಎಂದು ನಿಮಗೆ ತಿಳಿದಿದೆ. ಯೋಗ ದಿನವನ್ನು ಆಚರಿಸಲು ಪ್ರತಿ ವರ್ಷ ಒಂದು ಥೀಮ್ ಇರುತ್ತದೆ. ಅದೇ ರೀತಿಯಾಗಿ ಈ ವರ್ಷ ಕೂಡ ಒಂದು ಥೀಮ್​ ನೀಡಲಾಗಿದೆ. 2022ರಲ್ಲಿ ಆಚರಿಸಲಾಗುವ ಅಂತರಾಷ್ಟ್ರೀಯ ಯೋಗ ದಿನದ 8ನೇ ಆವೃತ್ತಿಯ ಥೀಮ್ ಏನೆಂದರೆ,  “ಮಾನವೀಯತೆಗಾಗಿ ಯೋಗ”. ಎಂಬ ವಿಷಯದ ಮೇಲೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಭಾರತವನ್ನು ಯೋಗ ಗುರು ಎಂದು ಕರೆಯುವುದು ಉಲ್ಲೇಖನೀಯ. ಅದಕ್ಕಾಗಿಯೇ ಆಯುಷ್ ಸಚಿವಾಲಯವು ಜೂನ್ 21 ರಂದು ವಿಶ್ವದಾದ್ಯಂತ ಯೋಗ ದಿನದ ವಿಶೇಷ ಥೀಮ್​ನ್ನು ಆಯ್ಕೆ ಮಾಡಿದೆ. ಈ ಬಾರಿ ಕರ್ನಾಟಕದ ಮೈಸೂರಿನಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಈ ವಿಶೇಷ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಇದನ್ನು ಓದಿ: Keerthy Suresh: ಟ್ರೆಡಿಷನಲ್​ ಲುಕ್​​ನಲ್ಲಿ ಮಿಂಚಿದ ನಟಿ ಕೀರ್ತಿ ಸುರೇಶ್

ಯೋಗ ದಿನದ ಮಹತ್ವ ಮತ್ತು ಇತಿಹಾಸ

ಡಿಸೆಂಬರ್ 11, 2014 ರಂದು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಜೂನ್ 21ನ್ನು ವಿಶ್ವ ಯೋಗ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿರುವುದು ನಮಗೆಲ್ಲರಿಗೂ ಗೊತ್ತಿರುವ ಸಂಗತಿ. ಅದರ ನಂತರ 2015 ರಲ್ಲಿ ಜೂನ್ 21 ರಂದು ಪ್ರಪಂಚದಾದ್ಯಂತ ಯೋಗ ದಿನವನ್ನು ಆಚರಿಸಲಾಯಿತು ಮತ್ತು ಈ ಪ್ರಕ್ರಿಯೆಯು ನಿರಂತರವಾಗಿ ಮುಂದುವರೆದಿದೆ. ಆದಾಗ್ಯೂ, ಭಾರತದಲ್ಲಿ ಯೋಗದ ಇತಿಹಾಸವು ಬಹಳ ಅನಾದಿಕಾಲದಿಂದ ಬಂದಿರುವಂತಹದು.

ಯೋಗ ದಿನವನ್ನು ಜೂನ್ 21 ರಂದು ಮಾತ್ರ ಏಕೆ ಆಚರಿಸಲಾಗುತ್ತದೆ?

ವಾಸ್ತವವಾಗಿ, ಜೂನ್ 21, 365 ದೀರ್ಘವಾದ ದಿನವಾಗಿದೆ. ಇದಕ್ಕೆ ಕಾರಣವೆಂದರೆ ಈ ದಿನಗಳಲ್ಲಿ ಸೂರತ್ ಉತ್ತರ ಗೋಳಾರ್ಧದಲ್ಲಿ ಹೆಚ್ಚು ಬೆಳಕು ಪ್ರವೇಶಿಸುತ್ತದೆ. ಈ ದಿನ ಸೂರ್ಯ ಬೇಗನೆ ಉದಯಿಸುತ್ತಾನೆ ಮತ್ತು ತಡವಾಗಿ ಅಸ್ತಮಿಸುತ್ತಾನೆ. ಅಲ್ಲದೆ, ಸೂರ್ಯನಿಂದ ಬರುವ ಶಕ್ತಿಯು ಈ ದಿನದಂದು ಹೆಚ್ಚು ಪರಿಣಾಮಕಾರಿಯಾಗಿದೆ, ಇದು ಪ್ರಕೃತಿಯ ಧನಾತ್ಮಕ ಶಕ್ತಿಯನ್ನು ಉತ್ತೇಜಿಸುತ್ತದೆ.

ಈ ಬಾರಿಯ ವಿಶೇಷತೆ ಏನು? 

ಈ ಬಾರಿ ‘ಗಾರ್ಡಿಯನ್ ರಿಂಗ್’ ನ್ನು ಆಕರ್ಷಣೆಯ ಕೇಂದ್ರವನ್ನಾಗಿ ಮಾಡಲಾಗುವುದು ಎಂಬುದು ಕುತೂಹಲಕಾರಿಯಾಗಿದೆ. ಇದು ಯೋಗದ ಸ್ಟ್ರೀಮಿಂಗ್ ಕಾರ್ಯಕ್ರಮವಾಗಲಿದೆ ಎಂದು ಹೇಳಲಾಗುತ್ತಿದೆ. ಈ ಡಿಜಿಟಲ್ ಫೀಡ್ ಮೂಲಕ ವಿದೇಶದಲ್ಲಿರುವ ಭಾರತೀಯ ಮಿಷನ್‌ಗಳು ಆಯೋಜಿಸುವ ಐಡಿವೈ ಕಾರ್ಯಕ್ರಮಗಳನ್ನು ಏಕಕಾಲದಲ್ಲಿ ಸೆರೆಹಿಡಿಯಲಾಗುತ್ತದೆ. ಇದು ಮೊದಲು ಸೂರ್ಯ ಉದಯಿಸುವ ದೇಶದಿಂದ ಪ್ರಾರಂಭವಾಗುತ್ತದೆ. ಅಂದರೆ, ಇದು ಜಪಾನ್‌ನಿಂದ ಪ್ರಾರಂಭವಾಗಲಿದೆ.  ಬೆಳಗ್ಗೆ 6ಕ್ಕೆ ಯೋಗ ದಿನಾಚರಣೆ ಆರಂಭವಾಗಲಿದೆ. ಮಕ್ಕಳು, ವಯಸ್ಕರು, ಮಹಿಳೆಯರು ಮತ್ತು ಪುರುಷರು ಎಲ್ಲರೂ ಯೋಗದಿಂದ ಪ್ರಯೋಜನ ಪಡೆಯುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ. ಯೋಗದ ನಿಯಮಿತ ಅಭ್ಯಾಸವು ದೇಹವನ್ನು ರೋಗ ಮುಕ್ತಗೊಳಿಸುತ್ತದೆ. ಒತ್ತಡವನ್ನು ಸಹ ತೆಗೆದುಹಾಕುತ್ತದೆ. ರಕ್ತ ಪರಿಚಲನೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಆದರೆ, ಯೋಗ ಮಾಡುವಾಗ ಯೋಗಾಭ್ಯಾಸಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸುವುದು ಅಗತ್ಯ.

ಯೋಗ ದಿನಾಚರಣೆಯ ಇನ್ನಷ್ಟು ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:47 am, Thu, 16 June 22

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು