AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2022: ನಿಮ್ಮ ಹೃದಯ ಜೋಪಾನಿಸಿಕೊಳ್ಳಲು ಈಗಿನಿಂದಲೇ ಯೋಗ ಮಾಡಿ

Yoga : ಮೆಟಬಾಲಿಕ್ ಸಿಂಡ್ರೋಮ್ ಹೊಂದಿರುವವರು ಮೂರು ತಿಂಗಳುಗಳ ಕಾಲ ಯೋಗದಲ್ಲಿ ತೊಡಗಿಕೊಂಡಾಗ ಸುಧಾರಣೆ ಕಂಡಿದೆ ಎನ್ನುವುದನ್ನು ಅಧ್ಯಯನಗಳು ಸಾಬೀತುಪಡಿಸಿವೆ.

International Yoga Day 2022: ನಿಮ್ಮ ಹೃದಯ ಜೋಪಾನಿಸಿಕೊಳ್ಳಲು ಈಗಿನಿಂದಲೇ ಯೋಗ ಮಾಡಿ
ಸೌಜನ್ಯ : ಅಂತರ್ಜಾಲ
TV9 Web
| Edited By: |

Updated on:Jun 21, 2022 | 1:51 PM

Share

International Yoga Day 2022: ಹೃದಯದ ಆರೋಗ್ಯವೃದ್ಧಿಗೆ ಯೋಗ ಪ್ರಯೋಜನಕಾರಿ ಎನ್ನುವುದನ್ನು ಅನೇಕ ಅಧ್ಯಯನಗಳು ಸಾಬೀತುಪಡಿಸಿವೆ. ಯೋಗವು ದೈಹಿಕ-ಮಾನಸಿಕ ಸಮತೋಲನಕ್ಕೆ ಅತ್ಯಂತ ಸಹಕಾರಿ ಎಂದು ಹೃದ್ರೋಗ ತಜ್ಞರು ಹೇಳುತ್ತಲೇ ಇದ್ದಾರೆ. ದೈನಂದಿನ ಜೀವನಶೈಲಿಯಿಂದ ಉಂಟಾಗುವ ಒತ್ತಡವು ದೇಹದಲ್ಲಿನ ಕಾರ್ಟಿಸೋಲ್ ಮತ್ತು ಆ್ಯಡ್ರಿನಾಲಿನ್‌ನಂತಹ ಹಾರ್ಮೋನ್‌ಗಳನ್ನು ಹೆಚ್ಚಿಸುತ್ತದೆ. ಆಗ ಹೃದಯ ಬಡಿತ ಮತ್ತು ರಕ್ತದೊತ್ತಡ ನಿಯಂತ್ರಣ ಕಳೆದುಕೊಳ್ಳುತ್ತದೆ. ಹೀಗಾದಾಗ ವ್ಯಕ್ತಿಯ ಆರೋಗ್ಯ ಅಪಾಯದ ಮಟ್ಟ ತಲುಪಲಾರಂಭಿಸುತ್ತದೆ. ಅಧಿಕ ರಕ್ತದೊತ್ತಡದಿಂದ ರಕ್ತಕೊರತೆ, ಕೊರೊನರಿ ಆರ್ಟರಿಯಂತಹ ರೋಗಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ನಿಯಮಿತವಾಗಿ ಧ್ಯಾನ, ಪ್ರಾಣಾಯಾಮದಂಥ ಚಟುವಟಿಕೆಗಳಿಗೆ ತೆರೆದುಕೊಳ್ಳುವುದು ಸೂಕ್ತ. ದೀರ್ಘ ಉಸಿರಾಟದ ವ್ಯಾಯಾಮಗಳನ್ನು ರೂಢಿಸಿಕೊಂಡಲ್ಲಿ ಹೃದಯ ಬಡಿತ ಮತ್ತು ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಭವಿಷ್ಯದಲ್ಲಿ ಹೃದಯರಕ್ತನಾಳದ ಸಮಸ್ಯೆಗಳಿಂದ ಬಳಲುವ ಸಾಧ್ಯತೆ ಕಡಿಮೆ.

ನಿಯಮಿತ ಯೋಗವು ಕೊಲೆಸ್ಟ್ರಾಲ್, ರಕ್ತದಲ್ಲಿನ ಸಕ್ಕರೆ ಅಂಶ, ತೂಕ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಕಾರಿಯಾಗಿದೆ. ಮೆಟಬಾಲಿಕ್ ಸಿಂಡ್ರೋಮ್ ಹೊಂದಿರುವವರು ಮೂರು ತಿಂಗಳುಗಳ ಕಾಲ ಯೋಗದಲ್ಲಿ ತೊಡಗಿಕೊಂಡಾಗ ಸುಧಾರಣೆ ಕಂಡಿದೆ ಎನ್ನುವುದನ್ನು ಅಧ್ಯಯನಗಳು ಸಾಬೀತುಪಡಿಸಿವೆ. ಏಕೆಂದರೆ ಯೋಗವು ಕ್ಯಾಲೊರಿಗಳನ್ನು ಕಡಿಮೆಗೊಳಿಸುತ್ತದೆ. ಮೂಳೆಗಳನ್ನು ಸದೃಢಗೊಳಿಸುತ್ತದೆ. ಒಟ್ಟಾರೆಯಾಗಿ ಸ್ನಾಯುವಿನ ಶಕ್ತಿಯನ್ನು ಇದು ಸುಧಾರಿಸುತ್ತದೆ. ಓಟ ಮತ್ತು ಈಜುವಿಕೆ, ಏರೊಬಿಕ್ಸ್ ಗಿಂತ ಯೋಗ ದೈಹಿಕ ಮತ್ತು ಮಾನಸಿಕ ತ್ರಾಣವನ್ನು ಹೆಚ್ಚಿಸುತ್ತದೆ.

ಯೋಗ ಮತ್ತು ಧೂಮಪಾನ

ಇದನ್ನೂ ಓದಿ
Image
ಆಗಾಗ ಅರುಂಧತಿ : ನನ್ನ ಶ್ರೀಮಂತ ತಂದೆತಾಯಿಯ ನೆರಳು ಸೋಕದಷ್ಟು ಸ್ವತಂತ್ರಳಾಬೇಕು
Image
ಆಗಾಗ ಅರುಂಧತಿ: ಕಟಕರೊಟ್ಟಿ ಬೆಳ್ಳುಳ್ಳಿ ಖಾರ ಮತ್ತು ಬ್ಲ್ಯಾಕ್​ ಟೀ ಹಂಬಲ
Image
ಆಗಾಗ ಅರುಂಧತಿ: ಮಗುವನ್ನು ಚಿವುಟುವವನು ಅವನೇ, ತೊಟ್ಟಿಲನ್ನು ತೂಗುವವನೂ ಅವನೇ
Image
ಆಗಾಗ ಅರುಂಧತಿ: ಫೋನ್​ ಸಂಭಾಷಣೆಗೆ ತನ್ನ ಹೆಂಡತಿ ಸಾಕ್ಷಿಯಾಗಿದ್ದಾಳೆ ಎಂದು ಆ ಲಂಪಟನಿಗೆ ತಿಳಿದಿಲ್ಲ!

ಧೂಮಪಾನಿಗಳು ಕೊರೊನರಿ ಆರ್ಟರಿ ಕಾಯಿಲೆ ಮತ್ತು ಹೃದಯಾಘಾತದಿಂದ ಬಳಲುವ ಅಪಾಯ ಹೆಚ್ಚು. ಆದರೆ, ನಿಯಮಿತವಾದ ಯೋಗಾಭ್ಯಾಸದಿಂದ ಧೂಮಪಾನವನ್ನು ತ್ಯಜಿಸಬಹುದಾಗಿದೆ. ಏಕೆಂದರೆ ಆಂತರಿಕವಾಗಿ ಒತ್ತಡ ಉಂಟಾದಾಗ ಇಂತ ಚಟಗಳಿಗೆ ಮೊರೆ ಹೋಗುವುದು ಸಹಜ. ದೇಹ ಮನಸ್ಸು ಒತ್ತಡರಹಿತವಾಗಿದ್ದಾಗ ಇಂಥದರ ಕಡೆ ಗಮನ ಹೋಗದು. ಯೋಗಾಭ್ಯಾಸ ಮಾಡಿದಾಗ ಒತ್ತಡ ಕಡಿಮೆಯಾಗುತ್ತದೆ. ಆಗ ಕ್ರಮೇಣ ವ್ಯಸನಿಗಳು ಚಟದಿಂದ ದೂರವಾಗುತ್ತಾರೆ.

ಇದನ್ನೂ ಓದಿ : International Yoga Day 2022: ಯೋಗವಿದ್ದರೆ ಮಾತ್ರ ಯೋಗ ಮಾಡಲು ಸಾಧ್ಯ

ಇನ್ನು ಹೃದಯ ಸಂಬಂಧಿ ಸಮಸ್ಯೆಗಳನ್ನು ಹೊಂದಿರುವವರು ಯೋಗದ ಮೂಲಕ ಮನಸ್ಸನ್ನು ಹತೋಟಿಯಲ್ಲಿಡಬಹುದು. ಮನಸ್ಸು ಹತೋಟಿಯಲ್ಲಿದ್ದಾಗ ದೇಹವೂ ಸುಸ್ಥಿರವಾಗಿರುತ್ತದೆ. ಆದ್ದರಿಂದ ದಿನಕ್ಕೆ 30ರಿಂದ 45 ನಿಮಿಷಗಳ ಕಾಲ ಯೋಗಾಭ್ಯಾಸ ಮಾಡುವುದನ್ನು ಎಲ್ಲರೂ ರೂಢಿಸಿಕೊಳ್ಳುವುದು ಒಳ್ಳೆಯದು. ಚಿಕ್ಕಮಕ್ಕಳಿದ್ದಾಗಿನಿಂದಲೇ ಇದಕ್ಕೆ ತೊಡಗಿಕೊಂಡಲ್ಲಿ ಬದಲಾಗುವ ಜೀವನಶೈಲಿ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳಿಂದ ಆರೋಗ್ಯ ಮನಸ್ಸು ಹಾಳಾಗದಂತೆ ಖಂಡಿತ ಕಾಪಾಡಿಕೊಳ್ಳಬಹುದು.

Published On - 1:50 pm, Tue, 21 June 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು