AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2022: ನಿಮ್ಮ ಹೃದಯ ಜೋಪಾನಿಸಿಕೊಳ್ಳಲು ಈಗಿನಿಂದಲೇ ಯೋಗ ಮಾಡಿ

Yoga : ಮೆಟಬಾಲಿಕ್ ಸಿಂಡ್ರೋಮ್ ಹೊಂದಿರುವವರು ಮೂರು ತಿಂಗಳುಗಳ ಕಾಲ ಯೋಗದಲ್ಲಿ ತೊಡಗಿಕೊಂಡಾಗ ಸುಧಾರಣೆ ಕಂಡಿದೆ ಎನ್ನುವುದನ್ನು ಅಧ್ಯಯನಗಳು ಸಾಬೀತುಪಡಿಸಿವೆ.

International Yoga Day 2022: ನಿಮ್ಮ ಹೃದಯ ಜೋಪಾನಿಸಿಕೊಳ್ಳಲು ಈಗಿನಿಂದಲೇ ಯೋಗ ಮಾಡಿ
ಸೌಜನ್ಯ : ಅಂತರ್ಜಾಲ
TV9 Web
| Edited By: |

Updated on:Jun 21, 2022 | 1:51 PM

Share

International Yoga Day 2022: ಹೃದಯದ ಆರೋಗ್ಯವೃದ್ಧಿಗೆ ಯೋಗ ಪ್ರಯೋಜನಕಾರಿ ಎನ್ನುವುದನ್ನು ಅನೇಕ ಅಧ್ಯಯನಗಳು ಸಾಬೀತುಪಡಿಸಿವೆ. ಯೋಗವು ದೈಹಿಕ-ಮಾನಸಿಕ ಸಮತೋಲನಕ್ಕೆ ಅತ್ಯಂತ ಸಹಕಾರಿ ಎಂದು ಹೃದ್ರೋಗ ತಜ್ಞರು ಹೇಳುತ್ತಲೇ ಇದ್ದಾರೆ. ದೈನಂದಿನ ಜೀವನಶೈಲಿಯಿಂದ ಉಂಟಾಗುವ ಒತ್ತಡವು ದೇಹದಲ್ಲಿನ ಕಾರ್ಟಿಸೋಲ್ ಮತ್ತು ಆ್ಯಡ್ರಿನಾಲಿನ್‌ನಂತಹ ಹಾರ್ಮೋನ್‌ಗಳನ್ನು ಹೆಚ್ಚಿಸುತ್ತದೆ. ಆಗ ಹೃದಯ ಬಡಿತ ಮತ್ತು ರಕ್ತದೊತ್ತಡ ನಿಯಂತ್ರಣ ಕಳೆದುಕೊಳ್ಳುತ್ತದೆ. ಹೀಗಾದಾಗ ವ್ಯಕ್ತಿಯ ಆರೋಗ್ಯ ಅಪಾಯದ ಮಟ್ಟ ತಲುಪಲಾರಂಭಿಸುತ್ತದೆ. ಅಧಿಕ ರಕ್ತದೊತ್ತಡದಿಂದ ರಕ್ತಕೊರತೆ, ಕೊರೊನರಿ ಆರ್ಟರಿಯಂತಹ ರೋಗಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ನಿಯಮಿತವಾಗಿ ಧ್ಯಾನ, ಪ್ರಾಣಾಯಾಮದಂಥ ಚಟುವಟಿಕೆಗಳಿಗೆ ತೆರೆದುಕೊಳ್ಳುವುದು ಸೂಕ್ತ. ದೀರ್ಘ ಉಸಿರಾಟದ ವ್ಯಾಯಾಮಗಳನ್ನು ರೂಢಿಸಿಕೊಂಡಲ್ಲಿ ಹೃದಯ ಬಡಿತ ಮತ್ತು ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಭವಿಷ್ಯದಲ್ಲಿ ಹೃದಯರಕ್ತನಾಳದ ಸಮಸ್ಯೆಗಳಿಂದ ಬಳಲುವ ಸಾಧ್ಯತೆ ಕಡಿಮೆ.

ನಿಯಮಿತ ಯೋಗವು ಕೊಲೆಸ್ಟ್ರಾಲ್, ರಕ್ತದಲ್ಲಿನ ಸಕ್ಕರೆ ಅಂಶ, ತೂಕ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಕಾರಿಯಾಗಿದೆ. ಮೆಟಬಾಲಿಕ್ ಸಿಂಡ್ರೋಮ್ ಹೊಂದಿರುವವರು ಮೂರು ತಿಂಗಳುಗಳ ಕಾಲ ಯೋಗದಲ್ಲಿ ತೊಡಗಿಕೊಂಡಾಗ ಸುಧಾರಣೆ ಕಂಡಿದೆ ಎನ್ನುವುದನ್ನು ಅಧ್ಯಯನಗಳು ಸಾಬೀತುಪಡಿಸಿವೆ. ಏಕೆಂದರೆ ಯೋಗವು ಕ್ಯಾಲೊರಿಗಳನ್ನು ಕಡಿಮೆಗೊಳಿಸುತ್ತದೆ. ಮೂಳೆಗಳನ್ನು ಸದೃಢಗೊಳಿಸುತ್ತದೆ. ಒಟ್ಟಾರೆಯಾಗಿ ಸ್ನಾಯುವಿನ ಶಕ್ತಿಯನ್ನು ಇದು ಸುಧಾರಿಸುತ್ತದೆ. ಓಟ ಮತ್ತು ಈಜುವಿಕೆ, ಏರೊಬಿಕ್ಸ್ ಗಿಂತ ಯೋಗ ದೈಹಿಕ ಮತ್ತು ಮಾನಸಿಕ ತ್ರಾಣವನ್ನು ಹೆಚ್ಚಿಸುತ್ತದೆ.

ಯೋಗ ಮತ್ತು ಧೂಮಪಾನ

ಇದನ್ನೂ ಓದಿ
Image
ಆಗಾಗ ಅರುಂಧತಿ : ನನ್ನ ಶ್ರೀಮಂತ ತಂದೆತಾಯಿಯ ನೆರಳು ಸೋಕದಷ್ಟು ಸ್ವತಂತ್ರಳಾಬೇಕು
Image
ಆಗಾಗ ಅರುಂಧತಿ: ಕಟಕರೊಟ್ಟಿ ಬೆಳ್ಳುಳ್ಳಿ ಖಾರ ಮತ್ತು ಬ್ಲ್ಯಾಕ್​ ಟೀ ಹಂಬಲ
Image
ಆಗಾಗ ಅರುಂಧತಿ: ಮಗುವನ್ನು ಚಿವುಟುವವನು ಅವನೇ, ತೊಟ್ಟಿಲನ್ನು ತೂಗುವವನೂ ಅವನೇ
Image
ಆಗಾಗ ಅರುಂಧತಿ: ಫೋನ್​ ಸಂಭಾಷಣೆಗೆ ತನ್ನ ಹೆಂಡತಿ ಸಾಕ್ಷಿಯಾಗಿದ್ದಾಳೆ ಎಂದು ಆ ಲಂಪಟನಿಗೆ ತಿಳಿದಿಲ್ಲ!

ಧೂಮಪಾನಿಗಳು ಕೊರೊನರಿ ಆರ್ಟರಿ ಕಾಯಿಲೆ ಮತ್ತು ಹೃದಯಾಘಾತದಿಂದ ಬಳಲುವ ಅಪಾಯ ಹೆಚ್ಚು. ಆದರೆ, ನಿಯಮಿತವಾದ ಯೋಗಾಭ್ಯಾಸದಿಂದ ಧೂಮಪಾನವನ್ನು ತ್ಯಜಿಸಬಹುದಾಗಿದೆ. ಏಕೆಂದರೆ ಆಂತರಿಕವಾಗಿ ಒತ್ತಡ ಉಂಟಾದಾಗ ಇಂತ ಚಟಗಳಿಗೆ ಮೊರೆ ಹೋಗುವುದು ಸಹಜ. ದೇಹ ಮನಸ್ಸು ಒತ್ತಡರಹಿತವಾಗಿದ್ದಾಗ ಇಂಥದರ ಕಡೆ ಗಮನ ಹೋಗದು. ಯೋಗಾಭ್ಯಾಸ ಮಾಡಿದಾಗ ಒತ್ತಡ ಕಡಿಮೆಯಾಗುತ್ತದೆ. ಆಗ ಕ್ರಮೇಣ ವ್ಯಸನಿಗಳು ಚಟದಿಂದ ದೂರವಾಗುತ್ತಾರೆ.

ಇದನ್ನೂ ಓದಿ : International Yoga Day 2022: ಯೋಗವಿದ್ದರೆ ಮಾತ್ರ ಯೋಗ ಮಾಡಲು ಸಾಧ್ಯ

ಇನ್ನು ಹೃದಯ ಸಂಬಂಧಿ ಸಮಸ್ಯೆಗಳನ್ನು ಹೊಂದಿರುವವರು ಯೋಗದ ಮೂಲಕ ಮನಸ್ಸನ್ನು ಹತೋಟಿಯಲ್ಲಿಡಬಹುದು. ಮನಸ್ಸು ಹತೋಟಿಯಲ್ಲಿದ್ದಾಗ ದೇಹವೂ ಸುಸ್ಥಿರವಾಗಿರುತ್ತದೆ. ಆದ್ದರಿಂದ ದಿನಕ್ಕೆ 30ರಿಂದ 45 ನಿಮಿಷಗಳ ಕಾಲ ಯೋಗಾಭ್ಯಾಸ ಮಾಡುವುದನ್ನು ಎಲ್ಲರೂ ರೂಢಿಸಿಕೊಳ್ಳುವುದು ಒಳ್ಳೆಯದು. ಚಿಕ್ಕಮಕ್ಕಳಿದ್ದಾಗಿನಿಂದಲೇ ಇದಕ್ಕೆ ತೊಡಗಿಕೊಂಡಲ್ಲಿ ಬದಲಾಗುವ ಜೀವನಶೈಲಿ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳಿಂದ ಆರೋಗ್ಯ ಮನಸ್ಸು ಹಾಳಾಗದಂತೆ ಖಂಡಿತ ಕಾಪಾಡಿಕೊಳ್ಳಬಹುದು.

Published On - 1:50 pm, Tue, 21 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ