AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ

ಸಂಸತ್ ಅಧಿವೇಶನದಲ್ಲಿ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಬಗ್ಗೆ ವಿವರಿಸಿದ್ದಾರೆ. ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ ಎಂದಿದ್ದಾರೆ.

ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jul 31, 2024 | 11:12 AM

Share

ದೆಹಲಿ, ಜುಲೈ.31: ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ (Surya Ghar Yojana) ಯೋಜನೆಯು ದೀರ್ಘಾವಧಿಯಲ್ಲಿ ಒಂದು ಉಚಿತ ವಿದ್ಯುತ್ ಯೋಜನೆಯಾಗಿದ್ದು, ಈಗಾಗಲೇ 1.3 ಕೋಟಿ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ತಿಳಿಸಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ವಿವರಿಸಿದ ಸಚಿವರು, ಫೆ.29ರಂದು ಆರಂಭಿಸಿದ ಸೂರ್ಯ ಘರ್ ಯೋಜನೆ ಅನುಷ್ಠಾನ ಕಳೆದೊಂದು ತಿಂಗಳಿಂದ ಚುರುಕಾಗಿದೆ. ಇದು ಬಡವರಿಗೆ ಮತ್ತು ಮಾಧ್ಯಮ ವರ್ಗಕ್ಕೆ ಅತ್ಯುಪಯುಕ್ತ ಯೋಜನೆಯಾಗಿದೆ. ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ತ್ವರಿತವಾಗಿ ಜಾರಿಗೆ ತರಲು ಡಿಸ್ಕಾಮ್‌ ಗಳಿಗೆ ನಿರ್ದೇಶಸಿದ್ದೇವೆ ಎಂದರು.

ಇದನ್ನೂ ಓದಿ: PM Surya Ghar Yojana: ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಪಿಎಂ ಸೂರ್ಯಘರ್ ಯೋಜನೆಯ ಪೂರ್ಣ ವಿವರ

ಈ ಯೋಜನೆಯಡಿ 3 KW ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ 78,000 ರೂ. ಸಬ್ಸಿಡಿ ನೀಡುತ್ತಿದೆ. ಜತೆಗೆ ಬ್ಯಾಂಕ್ ಸಾಲ ಸೌಲಭ್ಯವೂ ಇರುತ್ತದೆ. ಸಾಮಾನ್ಯವಾಗಿ 3 KW ಘಟಕ 300 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುತ್ತದೆ. ಸೂರ್ಯ ಘರ ಘಟಕಕ್ಕೆ ಮೇಲ್ಛಾವಣಿ ಸ್ಥಾಪನೆಗೆ 1.5 ಲಕ್ಷ ರೂ. ವೆಚ್ಚವಾಗಲಿದೆ. 78,000 ರೂ. ಸಬ್ಸಿಡಿ ಲಭ್ಯವಿದ್ದು, ಉಳಿದ ಬಂಡವಾಳಕ್ಕೆ ಫಲಾನುಭವಿಗಳು ಬ್ಯಾಂಕ್ ಸಾಲ ಪಡೆಯಬಹುದು. 300 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸಿದಲ್ಲಿ, ಹೆಚ್ಚುವರಿ ವಿದ್ಯುತ್ ಅನ್ನು ಡಿಸ್ಕಾಮ್ ಗಳಿಗೆ ಮಾರಾಟ ಮಾಡಿ ಹಣ ಪಡೆದುಕೊಳ್ಳಲು ಅವಕಾಶವಿದೆ ಎಂದು ವಿವರಿಸಿದರು.

ಸಾಮಾನ್ಯ 5 ಜನರಿರುವ ಮಧ್ಯಮ ವರ್ಗದವರ ಮನೆಗಳಿಗೆ 300 ಯೂನಿಟ್ ವಿದ್ಯುತ್ ಸಾಕಷ್ಟಾಗುತ್ತದೆ ಎಂದು ಅಭಿಪ್ರಾಯ ಮಂಡಿಸಿದ ಸಚಿವರು, ಡಿಸ್ಕಾಮ್ ಗಳು ನವೀಕರಿಸಬಹುದಾದ ಇಂಧನವನ್ನು ಖರೀದಿಸುವ ಬಾಧ್ಯತೆ ಹೊಂದಿದ್ದು, ಇದಕ್ಕಾಗಿ ಕುಟುಂಬಗಳಿಗೆ ಮರುಪಾವತಿ ಮಾಡಲಾಗುತ್ತದೆ ಮತ್ತು ದೀರ್ಘಾವಧಿಯಲ್ಲಿ ಅದು ಮಧ್ಯಮವರ್ಗಕ್ಕೆ ಉಚಿತವಾಗುತ್ತದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:10 am, Wed, 31 July 24

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?