AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ

ಸಂಸತ್ ಅಧಿವೇಶನದಲ್ಲಿ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಬಗ್ಗೆ ವಿವರಿಸಿದ್ದಾರೆ. ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ ಎಂದಿದ್ದಾರೆ.

ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Follow us
ಆಯೇಷಾ ಬಾನು
|

Updated on:Jul 31, 2024 | 11:12 AM

ದೆಹಲಿ, ಜುಲೈ.31: ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ (Surya Ghar Yojana) ಯೋಜನೆಯು ದೀರ್ಘಾವಧಿಯಲ್ಲಿ ಒಂದು ಉಚಿತ ವಿದ್ಯುತ್ ಯೋಜನೆಯಾಗಿದ್ದು, ಈಗಾಗಲೇ 1.3 ಕೋಟಿ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ತಿಳಿಸಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ವಿವರಿಸಿದ ಸಚಿವರು, ಫೆ.29ರಂದು ಆರಂಭಿಸಿದ ಸೂರ್ಯ ಘರ್ ಯೋಜನೆ ಅನುಷ್ಠಾನ ಕಳೆದೊಂದು ತಿಂಗಳಿಂದ ಚುರುಕಾಗಿದೆ. ಇದು ಬಡವರಿಗೆ ಮತ್ತು ಮಾಧ್ಯಮ ವರ್ಗಕ್ಕೆ ಅತ್ಯುಪಯುಕ್ತ ಯೋಜನೆಯಾಗಿದೆ. ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ತ್ವರಿತವಾಗಿ ಜಾರಿಗೆ ತರಲು ಡಿಸ್ಕಾಮ್‌ ಗಳಿಗೆ ನಿರ್ದೇಶಸಿದ್ದೇವೆ ಎಂದರು.

ಇದನ್ನೂ ಓದಿ: PM Surya Ghar Yojana: ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಪಿಎಂ ಸೂರ್ಯಘರ್ ಯೋಜನೆಯ ಪೂರ್ಣ ವಿವರ

ಈ ಯೋಜನೆಯಡಿ 3 KW ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ 78,000 ರೂ. ಸಬ್ಸಿಡಿ ನೀಡುತ್ತಿದೆ. ಜತೆಗೆ ಬ್ಯಾಂಕ್ ಸಾಲ ಸೌಲಭ್ಯವೂ ಇರುತ್ತದೆ. ಸಾಮಾನ್ಯವಾಗಿ 3 KW ಘಟಕ 300 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುತ್ತದೆ. ಸೂರ್ಯ ಘರ ಘಟಕಕ್ಕೆ ಮೇಲ್ಛಾವಣಿ ಸ್ಥಾಪನೆಗೆ 1.5 ಲಕ್ಷ ರೂ. ವೆಚ್ಚವಾಗಲಿದೆ. 78,000 ರೂ. ಸಬ್ಸಿಡಿ ಲಭ್ಯವಿದ್ದು, ಉಳಿದ ಬಂಡವಾಳಕ್ಕೆ ಫಲಾನುಭವಿಗಳು ಬ್ಯಾಂಕ್ ಸಾಲ ಪಡೆಯಬಹುದು. 300 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸಿದಲ್ಲಿ, ಹೆಚ್ಚುವರಿ ವಿದ್ಯುತ್ ಅನ್ನು ಡಿಸ್ಕಾಮ್ ಗಳಿಗೆ ಮಾರಾಟ ಮಾಡಿ ಹಣ ಪಡೆದುಕೊಳ್ಳಲು ಅವಕಾಶವಿದೆ ಎಂದು ವಿವರಿಸಿದರು.

ಸಾಮಾನ್ಯ 5 ಜನರಿರುವ ಮಧ್ಯಮ ವರ್ಗದವರ ಮನೆಗಳಿಗೆ 300 ಯೂನಿಟ್ ವಿದ್ಯುತ್ ಸಾಕಷ್ಟಾಗುತ್ತದೆ ಎಂದು ಅಭಿಪ್ರಾಯ ಮಂಡಿಸಿದ ಸಚಿವರು, ಡಿಸ್ಕಾಮ್ ಗಳು ನವೀಕರಿಸಬಹುದಾದ ಇಂಧನವನ್ನು ಖರೀದಿಸುವ ಬಾಧ್ಯತೆ ಹೊಂದಿದ್ದು, ಇದಕ್ಕಾಗಿ ಕುಟುಂಬಗಳಿಗೆ ಮರುಪಾವತಿ ಮಾಡಲಾಗುತ್ತದೆ ಮತ್ತು ದೀರ್ಘಾವಧಿಯಲ್ಲಿ ಅದು ಮಧ್ಯಮವರ್ಗಕ್ಕೆ ಉಚಿತವಾಗುತ್ತದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:10 am, Wed, 31 July 24

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ