AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ

ಸಂಸತ್ ಅಧಿವೇಶನದಲ್ಲಿ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಬಗ್ಗೆ ವಿವರಿಸಿದ್ದಾರೆ. ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ ಎಂದಿದ್ದಾರೆ.

ಸೂರ್ಯ ಘರ್ ಯೋಜನೆಯಡಿ 1.3 ಕೋಟಿ ನೋಂದಣಿ; ಸಾಲ, ಸಬ್ಸಿಡಿ ಎಲ್ಲವೂ ಇದೆ ಎಂದ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
ಆಯೇಷಾ ಬಾನು
|

Updated on:Jul 31, 2024 | 11:12 AM

Share

ದೆಹಲಿ, ಜುಲೈ.31: ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ (Surya Ghar Yojana) ಯೋಜನೆಯು ದೀರ್ಘಾವಧಿಯಲ್ಲಿ ಒಂದು ಉಚಿತ ವಿದ್ಯುತ್ ಯೋಜನೆಯಾಗಿದ್ದು, ಈಗಾಗಲೇ 1.3 ಕೋಟಿ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ತಿಳಿಸಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ವಿವರಿಸಿದ ಸಚಿವರು, ಫೆ.29ರಂದು ಆರಂಭಿಸಿದ ಸೂರ್ಯ ಘರ್ ಯೋಜನೆ ಅನುಷ್ಠಾನ ಕಳೆದೊಂದು ತಿಂಗಳಿಂದ ಚುರುಕಾಗಿದೆ. ಇದು ಬಡವರಿಗೆ ಮತ್ತು ಮಾಧ್ಯಮ ವರ್ಗಕ್ಕೆ ಅತ್ಯುಪಯುಕ್ತ ಯೋಜನೆಯಾಗಿದೆ. ಸೂರ್ಯ ಘರ್ ಯೋಜನೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಬೇರೆ ವಿಭಾಗಗಳಿಲ್ಲ. ಸೌರಶಕ್ತಿ ಘಟಕ ಸ್ಥಾಪಿಸಲು ಬಯಸುವ ಎಲ್ಲರಿಗೂ ಬೆಂಬಲ ನೀಡುತ್ತಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ತ್ವರಿತವಾಗಿ ಜಾರಿಗೆ ತರಲು ಡಿಸ್ಕಾಮ್‌ ಗಳಿಗೆ ನಿರ್ದೇಶಸಿದ್ದೇವೆ ಎಂದರು.

ಇದನ್ನೂ ಓದಿ: PM Surya Ghar Yojana: ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಪಿಎಂ ಸೂರ್ಯಘರ್ ಯೋಜನೆಯ ಪೂರ್ಣ ವಿವರ

ಈ ಯೋಜನೆಯಡಿ 3 KW ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ 78,000 ರೂ. ಸಬ್ಸಿಡಿ ನೀಡುತ್ತಿದೆ. ಜತೆಗೆ ಬ್ಯಾಂಕ್ ಸಾಲ ಸೌಲಭ್ಯವೂ ಇರುತ್ತದೆ. ಸಾಮಾನ್ಯವಾಗಿ 3 KW ಘಟಕ 300 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡುತ್ತದೆ. ಸೂರ್ಯ ಘರ ಘಟಕಕ್ಕೆ ಮೇಲ್ಛಾವಣಿ ಸ್ಥಾಪನೆಗೆ 1.5 ಲಕ್ಷ ರೂ. ವೆಚ್ಚವಾಗಲಿದೆ. 78,000 ರೂ. ಸಬ್ಸಿಡಿ ಲಭ್ಯವಿದ್ದು, ಉಳಿದ ಬಂಡವಾಳಕ್ಕೆ ಫಲಾನುಭವಿಗಳು ಬ್ಯಾಂಕ್ ಸಾಲ ಪಡೆಯಬಹುದು. 300 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸಿದಲ್ಲಿ, ಹೆಚ್ಚುವರಿ ವಿದ್ಯುತ್ ಅನ್ನು ಡಿಸ್ಕಾಮ್ ಗಳಿಗೆ ಮಾರಾಟ ಮಾಡಿ ಹಣ ಪಡೆದುಕೊಳ್ಳಲು ಅವಕಾಶವಿದೆ ಎಂದು ವಿವರಿಸಿದರು.

ಸಾಮಾನ್ಯ 5 ಜನರಿರುವ ಮಧ್ಯಮ ವರ್ಗದವರ ಮನೆಗಳಿಗೆ 300 ಯೂನಿಟ್ ವಿದ್ಯುತ್ ಸಾಕಷ್ಟಾಗುತ್ತದೆ ಎಂದು ಅಭಿಪ್ರಾಯ ಮಂಡಿಸಿದ ಸಚಿವರು, ಡಿಸ್ಕಾಮ್ ಗಳು ನವೀಕರಿಸಬಹುದಾದ ಇಂಧನವನ್ನು ಖರೀದಿಸುವ ಬಾಧ್ಯತೆ ಹೊಂದಿದ್ದು, ಇದಕ್ಕಾಗಿ ಕುಟುಂಬಗಳಿಗೆ ಮರುಪಾವತಿ ಮಾಡಲಾಗುತ್ತದೆ ಮತ್ತು ದೀರ್ಘಾವಧಿಯಲ್ಲಿ ಅದು ಮಧ್ಯಮವರ್ಗಕ್ಕೆ ಉಚಿತವಾಗುತ್ತದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:10 am, Wed, 31 July 24

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?