ಇಂದೂ ನೂರರ ಎಲ್ಲೆಮೀರಿದ ಸೋಂಕಿತರ ಸಂಖ್ಯೆ, ಕೋಟೆನಾಡು ಲೀಡಿಂಗ್!

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 100 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ 20, ಯಾದಗಿರಿ 14, ಹಾಸನ 13, ದಾವಣಗೆರೆ 10, ಬೀದರ್ 10, ಬೆಳಗಾವಿ 13, ವಿಜಯಪುರ 5, ಉಡುಪಿ 3, ಕೋಲಾರ 2, ಬೆಂಗಳೂರು ನಗರ 2, ಬಾಗಲಕೋಟೆ 1, ಚಿಕ್ಕಬಳ್ಳಾಪುರ, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣ ಪತ್ತೆಯಾಗಿದೆ. 2,282 ಕೊರೊನಾ ಸೋಂಕಿತರ ಪೈಕಿ ಈವರೆಗೆ 722 ಕೊರೊನಾ ಸೋಂಕಿತರು ಗುಣಮುಖರಾಗಿ […]

ಇಂದೂ ನೂರರ ಎಲ್ಲೆಮೀರಿದ ಸೋಂಕಿತರ ಸಂಖ್ಯೆ, ಕೋಟೆನಾಡು ಲೀಡಿಂಗ್!
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: May 26, 2020 | 2:31 PM

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 100 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,282ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ 20, ಯಾದಗಿರಿ 14, ಹಾಸನ 13, ದಾವಣಗೆರೆ 10, ಬೀದರ್ 10, ಬೆಳಗಾವಿ 13, ವಿಜಯಪುರ 5, ಉಡುಪಿ 3, ಕೋಲಾರ 2, ಬೆಂಗಳೂರು ನಗರ 2, ಬಾಗಲಕೋಟೆ 1, ಚಿಕ್ಕಬಳ್ಳಾಪುರ, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣ ಪತ್ತೆಯಾಗಿದೆ.

2,282 ಕೊರೊನಾ ಸೋಂಕಿತರ ಪೈಕಿ ಈವರೆಗೆ 722 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,515 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ರಾಜ್ಯದಲ್ಲಿ 44 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 1:07 pm, Tue, 26 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us