ವೇತನಕ್ಕಾಗಿ ಮುಂದುವರಿದ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಹೋರಾಟ; ಬೀದಿಗಿಳಿದು ಪ್ರತಿಭಟಿಸುವ ಎಚ್ಚರಿಕೆ

ವೇತನ ದೊರೆಯದೆ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಪಡಿಪಾಟಲು ಜೋರಾಗಿದೆ. ಈಗಾಗಲೇ ವೇತನಕ್ಕಾಗಿ ಹೋರಾಟ ನಡೆಸುತ್ತಿರುವ ಅವರು, ಇದೀಗ ಮತ್ತೆ ಸಂಬಳ ಬಿಡುಗಡೆಗೆ ಆಗ್ರಹಿಸಿ ಗಡುವು ನೀಡಿದ್ದಾರೆ. ಅಷ್ಟರೊಳಗೆ ವೇತನ ಬಿಡುಗಡೆ ಮಾಡದಿದ್ದರೆ ಕುಟುಂಬ ಸಮೇತ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ‘108 ಆಂಬ್ಯುಲೆನ್ಸ್’ ಸಿಬ್ಬಂದಿ, ಸರ್ಕಾರದ ನಡುವಣ ಸಂಘರ್ಷದ ಕುರಿತ ವರದಿ ಇಲ್ಲಿದೆ.

ವೇತನಕ್ಕಾಗಿ ಮುಂದುವರಿದ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಹೋರಾಟ; ಬೀದಿಗಿಳಿದು ಪ್ರತಿಭಟಿಸುವ ಎಚ್ಚರಿಕೆ
ವೇತನಕ್ಕಾಗಿ ಮುಂದುವರಿದ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಹೋರಾಟ
Follow us
| Updated By: ಗಣಪತಿ ಶರ್ಮ

Updated on:Jun 26, 2024 | 12:52 PM

ಬೆಂಗಳೂರು, ಜೂನ್ 26: ಬಾಕಿ ಇರುವ ವೇತನ ಪಾವತಿಸುವಂತೆ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಹೋರಾಟ (108 ambulance staff) ಮುಂದುವರಿಸಿದ್ದಾರೆ. ಸಮಸ್ಯೆ ಪರಿಹರಿಸದಿದ್ದರೆ ಕುಟುಂಬ ಸಮೇತ ಬೀದಿಗಿಳಿದು ಹೋರಾಟ ಮಾಡುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ ಕಳೆದ ಆರು ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಹಾಗೂ ಜಿವಿಕೆ (GVK) ಸಂಸ್ಥೆ ನಡುವಿನ ಕಿತ್ತಾಟದಿಂದ ಆಂಬ್ಯುಲೆನ್ಸ್ ಸಿಬ್ಬಂದಿ ಬೀದಿಗೆ ಬೀಳುವಂತಾಗಿದೆ.

ಕಳೆದ ಆರು ತಿಂಗಳಿನಿಂದ 3 ಸಾವಿರಕ್ಕೂ ಅಧಿಕ ನೌಕರರಿಗೆ ಸಂಬಳ ನೀಡಲಾಗಿಲ್ಲ. ಇದೀಗ ಆಂಬ್ಯುಲೆನ್ಸ್ ಸಿಬ್ಬಂದಿ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರತಿ ಸಿಬ್ಬಂದಿಗೆ ಜಿವಿಕೆ ಸಂಸ್ಥೆ ಈವರೆಗೆ 2.16 ಲಕ್ಷ ರೂ. ಸಂಬಳ ಬಾಕಿ ಉಳಿಸಿಕೊಂಡಿದೆ. ಇದೀಗ ಜಿವಿಕೆಗೆ ಆಂಬ್ಯುಲೆನ್ಸ್ ನೌಕರರ ಸಂಘ ಹೊಸ ಡೆಡ್ ಲೈನ್ ಕೊಟ್ಟಿದೆ. ಗುರುವಾರ ಸಂಜೆಯೊಳಗೆ ಸಂಬಳ ನೀಡದಿದ್ದರೆ ಮತ್ತೆ ಮುಷ್ಕರ ಹೂಡುವುದಾಗಿ ಎಚ್ಚರಿಕೆ ನೀಡಿದೆ.

ಮಕ್ಕಳ ಶಾಲೆ ಫೀಜ್, ರೇಷನ್, ಇತರೆ ಖರ್ಚಿಗೆ ಸಾಲ ಮಾಡುತ್ತಿದ್ದೇವೆ. ಹೀಗೆಯೇ ಮುಂದುವರಿದರೆ ಕುಟುಂಬ ಸಮೇತ ಬೀದಿಗಿಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೇ ಮೊದಲ ವಾರದಿಂದಲೇ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ವೇತನಕ್ಕಾಗಿ ಹೋರಾಟ, ಮುಷ್ಕರ ಆರಂಭಿಸಿದ್ದರು. ಆದರೆ, ಮಸ್ಯೆ ಬಗೆಹರಿಸುವುದಾಗಿ ಆರೋಗ್ಯ ಇಲಾಖೆ ಆಯುಕ್ತರು ಭರವಸೆ ನೀಡಿದ ನಂತರ ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆದಿದ್ದರು.

ಏನು ಹೇಳಿದ್ದರು ಆರೋಗ್ಯ ಸಚಿವ?

ಸರ್ಕಾರದ ಕಡೆಯಿಂದ 108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ವೇತನ ಬಾಕಿ ಉಳಿಸಿಕೊಂಡಿಲ್ಲ. ನ್ಯಾಯಯುತವಾಗಿ ಕೊಡಬೇಕಾದ ಸಂಬಳ ಕೊಡಲಾಗುತ್ತಿದೆ. ಈ ವಿಚಾರದಲ್ಲಿ ಸರ್ಕಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಕಳೆದ ತಿಂಗಳು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಇಂದಿನಿಂದ ಆಂಬ್ಯುಲೆನ್ಸ್​ ಸೇವೆ ಬಂದ್​​? ರಾಜ್ಯ ಸರ್ಕಾರಕ್ಕೆ ಕಿವಿ ಹಿಂಡಿದ ಕುಮಾರಸ್ವಾಮಿ

2023-24ನೇ ಆರ್ಥಿಕ ವರ್ಷದಲ್ಲಿ 108 ಆಂಬ್ಯುಲೆನ್ಸ್‌ ಸೇವೆಗಾಗಿ 210.33 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಲಾಗಿತ್ತು. ಈ ಪೈಕಿ 162.40 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದ ಆರೋಗ್ಯ ಸಚಿವರು, 108 ಆಂಬ್ಯುಲೆನ್ಸ್‌ ಸಿಬ್ಬಂದಿ ಕಾನೂನುಬಾಹಿರವಾಗಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೂ ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Wed, 26 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!