AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನಕ್ಕಾಗಿ ಮುಂದುವರಿದ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಹೋರಾಟ; ಬೀದಿಗಿಳಿದು ಪ್ರತಿಭಟಿಸುವ ಎಚ್ಚರಿಕೆ

ವೇತನ ದೊರೆಯದೆ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಪಡಿಪಾಟಲು ಜೋರಾಗಿದೆ. ಈಗಾಗಲೇ ವೇತನಕ್ಕಾಗಿ ಹೋರಾಟ ನಡೆಸುತ್ತಿರುವ ಅವರು, ಇದೀಗ ಮತ್ತೆ ಸಂಬಳ ಬಿಡುಗಡೆಗೆ ಆಗ್ರಹಿಸಿ ಗಡುವು ನೀಡಿದ್ದಾರೆ. ಅಷ್ಟರೊಳಗೆ ವೇತನ ಬಿಡುಗಡೆ ಮಾಡದಿದ್ದರೆ ಕುಟುಂಬ ಸಮೇತ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ‘108 ಆಂಬ್ಯುಲೆನ್ಸ್’ ಸಿಬ್ಬಂದಿ, ಸರ್ಕಾರದ ನಡುವಣ ಸಂಘರ್ಷದ ಕುರಿತ ವರದಿ ಇಲ್ಲಿದೆ.

ವೇತನಕ್ಕಾಗಿ ಮುಂದುವರಿದ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಹೋರಾಟ; ಬೀದಿಗಿಳಿದು ಪ್ರತಿಭಟಿಸುವ ಎಚ್ಚರಿಕೆ
ವೇತನಕ್ಕಾಗಿ ಮುಂದುವರಿದ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಹೋರಾಟ
ಶಾಂತಮೂರ್ತಿ
| Edited By: |

Updated on:Jun 26, 2024 | 12:52 PM

Share

ಬೆಂಗಳೂರು, ಜೂನ್ 26: ಬಾಕಿ ಇರುವ ವೇತನ ಪಾವತಿಸುವಂತೆ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ಹೋರಾಟ (108 ambulance staff) ಮುಂದುವರಿಸಿದ್ದಾರೆ. ಸಮಸ್ಯೆ ಪರಿಹರಿಸದಿದ್ದರೆ ಕುಟುಂಬ ಸಮೇತ ಬೀದಿಗಿಳಿದು ಹೋರಾಟ ಮಾಡುವುದಾಗಿಯೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ ಕಳೆದ ಆರು ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಹಾಗೂ ಜಿವಿಕೆ (GVK) ಸಂಸ್ಥೆ ನಡುವಿನ ಕಿತ್ತಾಟದಿಂದ ಆಂಬ್ಯುಲೆನ್ಸ್ ಸಿಬ್ಬಂದಿ ಬೀದಿಗೆ ಬೀಳುವಂತಾಗಿದೆ.

ಕಳೆದ ಆರು ತಿಂಗಳಿನಿಂದ 3 ಸಾವಿರಕ್ಕೂ ಅಧಿಕ ನೌಕರರಿಗೆ ಸಂಬಳ ನೀಡಲಾಗಿಲ್ಲ. ಇದೀಗ ಆಂಬ್ಯುಲೆನ್ಸ್ ಸಿಬ್ಬಂದಿ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರತಿ ಸಿಬ್ಬಂದಿಗೆ ಜಿವಿಕೆ ಸಂಸ್ಥೆ ಈವರೆಗೆ 2.16 ಲಕ್ಷ ರೂ. ಸಂಬಳ ಬಾಕಿ ಉಳಿಸಿಕೊಂಡಿದೆ. ಇದೀಗ ಜಿವಿಕೆಗೆ ಆಂಬ್ಯುಲೆನ್ಸ್ ನೌಕರರ ಸಂಘ ಹೊಸ ಡೆಡ್ ಲೈನ್ ಕೊಟ್ಟಿದೆ. ಗುರುವಾರ ಸಂಜೆಯೊಳಗೆ ಸಂಬಳ ನೀಡದಿದ್ದರೆ ಮತ್ತೆ ಮುಷ್ಕರ ಹೂಡುವುದಾಗಿ ಎಚ್ಚರಿಕೆ ನೀಡಿದೆ.

ಮಕ್ಕಳ ಶಾಲೆ ಫೀಜ್, ರೇಷನ್, ಇತರೆ ಖರ್ಚಿಗೆ ಸಾಲ ಮಾಡುತ್ತಿದ್ದೇವೆ. ಹೀಗೆಯೇ ಮುಂದುವರಿದರೆ ಕುಟುಂಬ ಸಮೇತ ಬೀದಿಗಿಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೇ ಮೊದಲ ವಾರದಿಂದಲೇ ‘108 ಆಂಬ್ಯುಲೆನ್ಸ್’ ಸಿಬ್ಬಂದಿ ವೇತನಕ್ಕಾಗಿ ಹೋರಾಟ, ಮುಷ್ಕರ ಆರಂಭಿಸಿದ್ದರು. ಆದರೆ, ಮಸ್ಯೆ ಬಗೆಹರಿಸುವುದಾಗಿ ಆರೋಗ್ಯ ಇಲಾಖೆ ಆಯುಕ್ತರು ಭರವಸೆ ನೀಡಿದ ನಂತರ ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆದಿದ್ದರು.

ಏನು ಹೇಳಿದ್ದರು ಆರೋಗ್ಯ ಸಚಿವ?

ಸರ್ಕಾರದ ಕಡೆಯಿಂದ 108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ವೇತನ ಬಾಕಿ ಉಳಿಸಿಕೊಂಡಿಲ್ಲ. ನ್ಯಾಯಯುತವಾಗಿ ಕೊಡಬೇಕಾದ ಸಂಬಳ ಕೊಡಲಾಗುತ್ತಿದೆ. ಈ ವಿಚಾರದಲ್ಲಿ ಸರ್ಕಾರಕ್ಕೆ ಹಣಕಾಸಿನ ಕೊರತೆ ಇಲ್ಲ ಎಂದು ಕಳೆದ ತಿಂಗಳು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಇಂದಿನಿಂದ ಆಂಬ್ಯುಲೆನ್ಸ್​ ಸೇವೆ ಬಂದ್​​? ರಾಜ್ಯ ಸರ್ಕಾರಕ್ಕೆ ಕಿವಿ ಹಿಂಡಿದ ಕುಮಾರಸ್ವಾಮಿ

2023-24ನೇ ಆರ್ಥಿಕ ವರ್ಷದಲ್ಲಿ 108 ಆಂಬ್ಯುಲೆನ್ಸ್‌ ಸೇವೆಗಾಗಿ 210.33 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಲಾಗಿತ್ತು. ಈ ಪೈಕಿ 162.40 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದ ಆರೋಗ್ಯ ಸಚಿವರು, 108 ಆಂಬ್ಯುಲೆನ್ಸ್‌ ಸಿಬ್ಬಂದಿ ಕಾನೂನುಬಾಹಿರವಾಗಿ ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೂ ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Wed, 26 June 24

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ