6 ವಿಮಾನಗಳಲ್ಲಿ 12 ಬಾಂಬರ್‌ಗಳು: ಕೆಂಪೇಗೌಡ ಏರ್​ಪೋರ್ಟ್​​ಗೆ ಬೆದರಿಕೆ ಸಂದೇಶ

ಅನಾಮಧೇಯ ಟ್ವಿಟರ್‌ ಖಾತೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನ ಕಮಾಂಡ್‌ ಸೆಂಟರ್‌ಗೆ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿದೆ. ಆರು ವಿಮಾನದಲ್ಲಿ ಇಬ್ಬರು ಬಾಂಬರ್‌ಗಳಂತೆ ಒಟ್ಟು 12 ಬಾಂಬರ್‌ಗಳಿರುವುದಾಗಿ ಟ್ವೀಟ್‌ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿದೆ.

6 ವಿಮಾನಗಳಲ್ಲಿ 12 ಬಾಂಬರ್‌ಗಳು: ಕೆಂಪೇಗೌಡ ಏರ್​ಪೋರ್ಟ್​​ಗೆ ಬೆದರಿಕೆ ಸಂದೇಶ
6 ವಿಮಾನಗಳಲ್ಲಿ 12 ಬಾಂಬರ್‌ಗಳು: ಕೆಂಪೇಗೌಡ ಏರ್​ಪೋರ್ಟ್​​ಗೆ ಬೆದರಿಕೆ ಸಂದೇಶ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 20, 2024 | 5:30 PM

ಬೆಂಗಳೂರು ಗ್ರಾಮಾಂತರ, ಅಕ್ಟೋಬರ್​ 20: ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್​ನ (Kempegowda International Airport) ಕಮಾಂಡ್‌ ಸೆಂಟರ್‌ಗೆ ಬಾಂಬ್‌ ಬೆದರಿಕೆ ಸಂದೇಶ ರವಾನೆ ಮಾಡಿರುವಂತಹ ಘಟನೆ ನಡೆದಿದೆ. 6 ವಿಮಾನಗಳಲ್ಲಿ ಇಬ್ಬರು ಒಟ್ಟು 12 ಬಾಂಬರ್‌ಗಳಿರುವುದಾಗಿ ಅನಾಮಧೇಯ ಟ್ವಿಟರ್‌ ಖಾತೆಯಿಂದ ಬಾಂಬ್‌ ಬೆದರಿಕೆ ಸಂದೇಶ ರವಾನಿಸಲಾಗಿದೆ. ಸದ್ಯ ಹುಸಿ ಬಾಂಬ್‌ ಬೆದರಿಕೆ ಮೆಸೇಜ್ ಮಾಡಿದವರ ವಿರುದ್ಧ ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಡಿಗೋ ಏರ್‌ಲೈನ್ಸ್‌ನ IX 233, IX 375, IX 481, IX 383, IX 549, IX 399 ವಿಮಾನಗಳಲ್ಲಿ ಬಾಂಬರ್‌ಗಳಿರುವುದಾಗಿ ಟ್ವೀಟ್‌ ರವಾನಿಸಲಾಗಿದೆ. ಮಂಗಳೂರು-ದುಬೈ, ತಿರುವನಂತಪುರಂ-ಮಸ್ಕಟ್ ಸೇರಿದಂತೆ ದೇಶದ ವಿವಿಧ ಏರ್‌ಪೋರ್ಟ್‌ಗಳಿಂದ ತೆರಳುವ ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಹಾಕಲಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 30 ಕೋಟಿ ರೂ. ಮೌಲ್ಯದ ಕೊಕೇನ್ ಪತ್ತೆ

ಬೆದರಿಕೆ ಮೆಸೇಜ್ ಹಿನ್ನೆಲೆ ಏರ್‌ಪೋರ್ಟ್‌ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಕಳೆದ ಒಂದು ವಾರದಲ್ಲಿ ಎರಡನೇ ಸಲ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್​ಗೆ ಹುಸಿ ಬಾಂಬ್‌ ಬೆದರಿಕೆ ಬಂದಿದೆ.

ಕೆಂಪೇಗೌಡ ಏರ್‌ಪೋರ್ಟ್​ನಲ್ಲಿ ಇಂಡಿಗೋ ಪ್ರಯಾಣಿಕರ ಪರದಾಟ

ಇಂಡಿಗೋ ಸರ್ವರ್ ಡೌನ್ ಆದ ಹಿನ್ನಲೆ ಏರ್ಪೋಟ್ಗಳಲ್ಲಿ ಪ್ರಯಾಣಿಕರು ಪರದಾಡಿದ್ದರು. ಅದರಲ್ಲೂ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಪ್ರಯಾಣಿಕರು ಸರ್ವರ್ ಡೌನ್​ನಿಂದ ತೀವ್ರ ಸಮಸ್ಯೆ ಎದುರಿಸಿದ್ದರು.

ಕೆಂಪೇಗೌಡ ಏರ್ಪೋರ್ಟ್ ಟರ್ಮಿನಲ್ 1ರಲ್ಲಿ ಚೆಕ್ ಇನ್ ಮತ್ತು ಚೆಕ್ ಔಟ್ ಆಗಲು ನೂರಾರು ಜನ ಪ್ರಯಾಣಿಕರು ಪರದಾಡುವಂತಾಗಿತ್ತು. ಜೊತೆಗೆ ಚೆಕ್ ಇನ್ ಮತ್ತು ಚೆಕ್ ಔಟ್ ಆಗಲು ಟರ್ಮಿನಲ್ 1 ರಲ್ಲಿ ನಲ್ಲಿ ಸಾವಿರಾರು ಜನ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವಂತಾಗಿತ್ತು.

ಇದನ್ನೂ ಓದಿ: ಮೈಕ್ರೋಸಾಫ್ಟ್​ನ ಕ್ಲೌಡ್​ ಸರ್ವಿಸ್​ ಸಮಸ್ಯೆ: ಬೆಂಗಳೂರು, ಮಂಗಳೂರು ಏರ್​​ಪೋರ್ಟ್​​ನಲ್ಲಿ ಮ್ಯಾನುವಲ್ ಚೆಕ್​ ಇನ್​ ವ್ಯವಸ್ಥೆ

ಚೆಕ್ಇನ್ ಸಮಸ್ಯೆ ಹಿನ್ನೆಲೆ ವಿಮಾನಗಳ ಟೇಕಾಫ್ನಲ್ಲೂ ವಿಳಂಬವಾಗಿದ್ದು, ಏರ್ಲೈನ್ಸ್ ಸಿಬ್ಬಂದಿಗಳು ಕೆಲ ವಿಮಾನಗಳನ್ನು ರಿ ಶೆಡ್ಯೂಲ್ ಮಾಡಿದ್ದರು. ಬೆಳಗ್ಗೆ 11 ಗಂಟೆಯಿಂದ ಸರ್ವರ್ ಸಮಸ್ಯೆ ಮುಂದುವರೆದಿದ್ದು, ಸಮಯಕ್ಕೆ ಸರಿಯಾಗಿ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಕಂಗಾಲಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:59 pm, Sun, 20 October 24

‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್