ತಡರಾತ್ರಿ ತವರೂರು ಸೇರಿದ 1200 ವಲಸೆ ಕಾರ್ಮಿಕರು: ಸಂಸದ, ಶಾಸಕರಿಂದ ಸ್ವಾಗತ

ಕಲಬುರಗಿ: ಕೆಲಸಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದ ಕಾರ್ಮಿಕರನ್ನು ತಮ್ಮ ತಮ್ಮ ತವರಿಗೆ ಸೇರಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಇದೇ ರೀತಿ ಮುಂಬೈನಲ್ಲಿ ಸಿಲುಕಿದ್ದ ಕಾರ್ಮಿಕರನ್ನು ವಿಶೇಷ ರೈಲಿನಲ್ಲಿ ಕಲಬುರಗಿಗೆ ಕರೆತರಲಾಗಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಮುಂಬೈನಿಂದ ವಿಶೇಷ ರೈಲಿನಲ್ಲಿ 1,200 ವಲಸೆ ಕಾರ್ಮಿಕರು ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಸಂಸದ ಡಾ.ಉಮೇಶ್ ಜಾಧವ್, ಕಲಬುರಗಿ ಗ್ರಾಮಾಂತರ ಶಾಸಕ ಬಸವರಾಜ್ ಮತ್ತಿಮೂಡ್ ಕಾರ್ಮಿಕರನ್ನು ಸ್ವಾಗತಿಸಿದ್ದಾರೆ. ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವಲಸೆ ಕಾರ್ಮಿಕರಿಗೆ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಸ್ಕ್ರೀನಿಂಗ್ […]

ತಡರಾತ್ರಿ ತವರೂರು ಸೇರಿದ 1200 ವಲಸೆ ಕಾರ್ಮಿಕರು: ಸಂಸದ, ಶಾಸಕರಿಂದ ಸ್ವಾಗತ
ಸಾಧು ಶ್ರೀನಾಥ್​

Updated on: May 12, 2020 | 7:05 AM

ಕಲಬುರಗಿ: ಕೆಲಸಕ್ಕಾಗಿ ಬೇರೆ ಬೇರೆ ರಾಜ್ಯಗಳಿಗೆ ವಲಸೆ ಹೋಗಿದ್ದ ಕಾರ್ಮಿಕರನ್ನು ತಮ್ಮ ತಮ್ಮ ತವರಿಗೆ ಸೇರಿಸುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಇದೇ ರೀತಿ ಮುಂಬೈನಲ್ಲಿ ಸಿಲುಕಿದ್ದ ಕಾರ್ಮಿಕರನ್ನು ವಿಶೇಷ ರೈಲಿನಲ್ಲಿ ಕಲಬುರಗಿಗೆ ಕರೆತರಲಾಗಿದೆ.

ತಡರಾತ್ರಿ 2 ಗಂಟೆ ಸುಮಾರಿಗೆ ಮುಂಬೈನಿಂದ ವಿಶೇಷ ರೈಲಿನಲ್ಲಿ 1,200 ವಲಸೆ ಕಾರ್ಮಿಕರು ಕಲಬುರಗಿ ನಗರಕ್ಕೆ ಆಗಮಿಸಿದ್ದಾರೆ. ಸಂಸದ ಡಾ.ಉಮೇಶ್ ಜಾಧವ್, ಕಲಬುರಗಿ ಗ್ರಾಮಾಂತರ ಶಾಸಕ ಬಸವರಾಜ್ ಮತ್ತಿಮೂಡ್ ಕಾರ್ಮಿಕರನ್ನು ಸ್ವಾಗತಿಸಿದ್ದಾರೆ. ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವಲಸೆ ಕಾರ್ಮಿಕರಿಗೆ ಸ್ಕ್ರೀನಿಂಗ್ ನಡೆಸಲಾಗುತ್ತಿದೆ. ಸ್ಕ್ರೀನಿಂಗ್ ಬಳಿಕ ಕಲಬುರಗಿ ಜಿಲ್ಲೆಯ ಹಲವೆಡೆ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿದೆ.

Published On - 6:51 am, Tue, 12 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us