AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಒಂದೇ ದಿನ ಶತಕ ದಾಟಿದೆ, 91 ಮಂದಿಗೆ ಮಹಾರಾಷ್ಟ್ರ ಲಿಂಕ್

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 127 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 62 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ 19, ಕಲಬುರಗಿ 11, ಬೆಂಗಳೂರು 5, ಉಡುಪಿ 4, ಚಿಕ್ಕಮಗಳೂರು 2, ಶಿವಮೊಗ್ಗ 12, ಉತ್ತರ ಕನ್ನಡ 4, ಹಾಸನ 3, ಗದಗ, ಯಾದಗಿರಿ, […]

ರಾಜ್ಯದಲ್ಲಿ ಒಂದೇ ದಿನ ಶತಕ ದಾಟಿದೆ, 91 ಮಂದಿಗೆ ಮಹಾರಾಷ್ಟ್ರ ಲಿಂಕ್
ಸಾಧು ಶ್ರೀನಾಥ್​
|

Updated on:May 19, 2020 | 2:11 PM

Share

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 127 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಒಂದೇ ದಿನ 62 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ 19, ಕಲಬುರಗಿ 11, ಬೆಂಗಳೂರು 5, ಉಡುಪಿ 4, ಚಿಕ್ಕಮಗಳೂರು 2, ಶಿವಮೊಗ್ಗ 12, ಉತ್ತರ ಕನ್ನಡ 4, ಹಾಸನ 3, ಗದಗ, ಯಾದಗಿರಿ, ವಿಜಯಪುರ, ಚಿತ್ರದುರ್ಗದಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ. 127 ಕೊರೊನಾ ಸೋಂಕಿತರ ಪೈಕಿ 15 ಮಕ್ಕಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಂದೇ ದಿನ ಮೂವರು ಸಾವು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಒಬ್ಬರು, ವಿಜಯಪುರದಲ್ಲಿ ಒಬ್ಬರು ಹಾಗೂ ಬೆಂಗಳೂರಿನಲ್ಲಿ ಒಬ್ಬರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ಮಂಡ್ಯಗೆ ‘ಮಹಾ’ ಆಘಾತ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಇಂದು ಹೊಸದಾಗಿ 62 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕೆ.ಆರ್.ಪೇಟೆ ತಾಲೂಕಿನ 40 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ನಾಗಮಂಗಲ ತಾಲೂಕಿನ 22 ಜನರಿಗೆ ಕೊರೊನಾ ಅಟ್ಯಾಕ್ ಆಗಿದೆ. ಮಹಾರಾಷ್ಟ್ರದ ಮುಂಬೈ ಸಂಪರ್ಕದಿಂದ ಎಲ್ಲಾ 62 ಜನರಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಇಂದು ರಾಜ್ಯದ 91 ಸೋಂಕಿತರಿಗೆ ಮಹಾರಾಷ್ಟ್ರದ ಲಿಂಕ್ ಇದೆ.

ಚಾಮರಾಜನಗರ ಒಂದೇ ಜಿಲ್ಲೆ ಗ್ರೀನ್ ಜೋನ್: ಮಹಾಮಾರಿ ಕೊರೊನಾ ಕ್ರಿಮಿ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಕರ್ನಾಟಕದ 30 ಜಿಲ್ಲೆಗಳ ಪೈಕಿ 29 ಜಿಲ್ಲೆಗಳಲ್ಲಿ ಸೋಂಕು ವ್ಯಾಪಿಸಿದೆ. ಸದ್ಯ ಚಾಮರಾಜನಗರ ಜಿಲ್ಲೆ ಗ್ರೀನ್ ಜೋನ್​ನಲ್ಲಿದೆ.

Published On - 12:59 pm, Tue, 19 May 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ