Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚೇನು ಇಲ್ಲ, ನಾಲ್ಕು ಕೇಸ್ ಅಷ್ಟೇ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 14 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ, ವಿಜಯಪುರ, ಹಾವೇರಿ, ಬೆಂಗಳೂರು, ಹಾಸನ, ಮಂಡ್ಯ ಹಾಗೂ ಆಂಧ್ರದ ಅನಂತಪುರ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಬೆಳಗಿನ ವರದಿಯಲ್ಲಿ 10 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಸಂಜೆಯ ವರದಿಯಲ್ಲಿ ನಾಲ್ಕು ಮಂದಿಗೆ ಮಾತ್ರ ಕೊರೊನಾ ಅಟ್ಯಾಕ್ ಆಗಿದೆ. ಗ್ರೀನ್ ಜೋನ್​ನಲ್ಲಿದ್ದ ಹಾಸನ […]

ಹೆಚ್ಚೇನು ಇಲ್ಲ, ನಾಲ್ಕು ಕೇಸ್ ಅಷ್ಟೇ ಪತ್ತೆ!
ಸಾಂಕೇತಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on:May 11, 2020 | 6:06 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 14 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ, ವಿಜಯಪುರ, ಹಾವೇರಿ, ಬೆಂಗಳೂರು, ಹಾಸನ, ಮಂಡ್ಯ ಹಾಗೂ ಆಂಧ್ರದ ಅನಂತಪುರ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.

ಬೆಳಗಿನ ವರದಿಯಲ್ಲಿ 10 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಸಂಜೆಯ ವರದಿಯಲ್ಲಿ ನಾಲ್ಕು ಮಂದಿಗೆ ಮಾತ್ರ ಕೊರೊನಾ ಅಟ್ಯಾಕ್ ಆಗಿದೆ. ಗ್ರೀನ್ ಜೋನ್​ನಲ್ಲಿದ್ದ ಹಾಸನ ಮೂಲದ ಮಹಿಳೆಗೂ ಕೊರೊನಾ ಬಂದಿದೆ. ಆದ್ರೆ ಅವರು ಮಂಡ್ಯದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಹಾಸನ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ.

862 ಸೋಂಕಿತರ ಪೈಕಿ ಈವರೆಗೆ 426 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೊನಾದಿಂದ ರಾಜ್ಯದಲ್ಲಿ 31 ಮಂದಿ ಮೃತಪಟ್ಟಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:36 pm, Mon, 11 May 20