AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊರಿಗೆ ಹೋಗಿ ಬರುವಷ್ಟರಲ್ಲಿ ವ್ಯಾಪಾರಿಗೆ ಕಾದಿತ್ತು ಶಾಕ್​: ಮನೆಯಲ್ಲಿದ್ದ 15 ಕೋಟಿ ಮೌಲ್ಯದ ಚಿನ್ನ ಕಳವು

ವಿಜಯನಗರದ ಚಿನ್ನದ ವ್ಯಾಪಾರಿ ಸುರೇಂದ್ರ ಕುಮಾರ್ ಜೈನ್ ಅವರ ಮನೆಯಿಂದ 18.4 ಕೆಜಿ ಚಿನ್ನ ಮತ್ತು 40 ಲಕ್ಷ ರೂ. ನಗದು ಕಳವು ಆಗಿದೆ. ಅವರ ಮನೆಯ ಸೆಕ್ಯುರಿಟಿ ಗಾರ್ಡ್ ಆಗಿದ್ದ ನೇಪಾಳ ಮೂಲದ ನಮ್ರಾಜ್ ಈ ಕಳ್ಳತನದಲ್ಲಿ ಶಂಕಿತನಾಗಿದ್ದಾನೆ. ಕಳ್ಳತನವಾದ ಚಿನ್ನದ ಮೌಲ್ಯ 15 ಕೋಟಿ ರೂ ಎಂದು ಅಂದಾಜಿಸಲಾಗಿದೆ.

ಊರಿಗೆ ಹೋಗಿ ಬರುವಷ್ಟರಲ್ಲಿ ವ್ಯಾಪಾರಿಗೆ ಕಾದಿತ್ತು ಶಾಕ್​: ಮನೆಯಲ್ಲಿದ್ದ 15 ಕೋಟಿ ಮೌಲ್ಯದ ಚಿನ್ನ ಕಳವು
ಊರಿಗೆ ಹೋಗಿ ಬರುವಷ್ಟರಲ್ಲಿ ವ್ಯಾಪಾರಿಗೆ ಕಾದಿತ್ತು ಶಾಕ್​: ಮನೆಯಲ್ಲಿದ್ದ 15 ಕೋಟಿ ಮೌಲ್ಯದ ಚಿನ್ನ ಕಳವು
Jagadisha B
| Edited By: |

Updated on: Nov 09, 2024 | 4:48 PM

Share

ಬೆಂಗಳೂರು, ನವೆಂಬರ್​ 09: ಚಿನ್ನದ ವ್ಯಾಪಾರಿ ಸುರೇಂದ್ರ ಕುಮಾರ್ ಜೈನ್ ಅವರ ಜ್ಯುವೆಲರಿ ಶಾಪ್​​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ ವ್ಯಕ್ತಿ ವ್ಯಾಪಾರಿಯ ಮನೆಯಲ್ಲಿ ಬರೋಬ್ಬರಿ 15.15 ಕೋಟಿ ರೂ. ಮೌಲ್ಯದ 18.4 ಕೆ.ಜಿಯ ಚಿನ್ನಾಭರಣ ಕದ್ದು (theft) ಪರಾರಿಯಾಗಿರುವಂತಹ ಘಟನೆ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನ.7ರಂದು ಊರಿನಿಂದ ವಾಪಸಾದಾಗ ಕಳ್ಳತನ ಬೆಳಕಿಗೆ ಬಂದಿದೆ. ಪೊಲೀಸ್​ ಠಾಣೆಗೆ ಸುರೇಂದ್ರ ಕುಮಾರ್‌ ದೂರು ನೀಡಿದ್ದು, ನೇಪಾಳ ಮೂಲದ ನಮ್ರಾಜ್ ಕಳ್ಳತನ ಮಾಡಿದ್ದಾನೆಂದು ಆರೋಪಿಸಿದ್ದಾರೆ. ಸದ್ಯ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿನ್ನದ ವ್ಯಾಪಾರಿ ಮನೆಯಲ್ಲಿ ಕಳುವಾಗಿದ್ದು ಬರೋಬ್ಬರಿ 18.4ಕೆಜಿ ಚಿನ್ನ. ಆ ಪೈಕಿ ಸುರೇಂದ್ರ ಕುಮಾರ್ ಜೈನ್ ಕುಟುಂಬಕ್ಕೆ 2.8 ಕೆಜಿ ಚಿನ್ನ ಸೇದಿದ್ದು, ಅವರ 5 ಸಹೋದರಿಯರ ಒಟ್ಟು 2.7 ಕೆಜಿ ಚಿನ್ನ ಹಾಗೂ ವ್ಯಾಪಾರದ 12.8 ಕೆಜಿ ಚಿನ್ನ ಕಳುವು ಮಾಡಲಾಗಿದೆ. ಜೊತೆಗೆ ಮನೆಯಲ್ಲಿದ್ದ ವ್ಯಾಪಾರದ 37.8 ಲಕ್ಷ, ವೈಯಕ್ತಿಕ 3 ಲಕ್ಷ ರೂ. ಹಣ ಸಹ ಕಳುವಾಗಿದ್ದು, ಒಟ್ಟಾರೆ 18 ಕೆಜಿ 437 ಗ್ರಾಂ ಚಿನ್ನ, 40.80 ಲಕ್ಷ ನಗದು ಸೇರಿ ಅಂದಾಜು ಮೌಲ್ಯ 15.15 ಕೋಟಿ ರೂ.

ಯಾರು ಈ ನಮ್ರಾಜ್?

ಪೊಲೀಸರಿಗೆ ಉದ್ಯಮಿಯಿಂದ ಆರೋಪಿ ನಮ್ರಾಜ್ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ಜ್ಯುವೆಲರಿ ಶಾಪ್ ನಲ್ಲಿ ಏಳು ಜನ ಕೆಲಸ ಮಾಡುತಿದ್ದಾರೆ. 6 ಜನ ಕೆಲಸಗಾರರು ಸ್ವಂತವಾಗಿ ಮನೆಗಳಲ್ಲಿ ವಾಸವಿದ್ದಾರೆ. ನಮ್ರಾಜ್​​ ನೇಪಾಳ ಮೂಲದವನಾಗಿದ್ದಾನೆ. ಜ್ಯುವೆಲರಿ ಶಾಪ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ.

ಈತನಿಗೆ ಮನೆಯಿಲ್ಲದ ಕಾರಣ ಮಾಲೀಕ ತಮ್ಮ ನಿವಾಸದ ಬಳಿ ಪಾರ್ಕಿಂಗ್​ನ ಸೆಕ್ಯೂರಿಟಿ ಮನೆ ನೀಡಿದ್ದರು. ಕಳೆದ ಆರು ತಿಂಗಳಿಂದ ಪತ್ನಿ ಜೊತೆ ಮಾಲೀಕರ ನಿವಾಸದ ಸೆಕ್ಯೂರಿಟಿ ರೂಂನಲ್ಲಿ ನಮ್ರಾಜ್ ವಾಸವಿದ್ದ. ಈ ನಡುವೆ ಜ್ಯುವೆಲರಿ ಶಾಪ್​ನ ಸೆಕ್ಯೂರಿಟಿ ಕೆಲಸದ ಜೊತೆ ಮಾಲೀಕನ ಮನೆಯಲ್ಲೂ ಕೆಲಸ ಮಾಡುತ್ತಿದ್ದ. ಗಿಡಿಗಳಿಗೆ ನೀರು ಹಾಕುವುದು ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ.

ಮನೆ ಹಾಗೂ ಜ್ಯುವೆಲರಿ ಶಾಪ್​ನ ಸಂಪೂರ್ಣ ಆಗುಹೊಗುಗಳನ್ನು ನಮ್ರಾಜ್ ತಿಳಿದಿದ್ದ. ಗುಜರಾತ್​ನ ದೇವರ ಜಾತ್ರೆ ನಿಮಿತ ಊರಿಗೆ ತೆರಳಲು ಸುರೇಂದ್ರ ಕುಮಾರ್ ಜೈನ್ ತಯಾರಿ ನಡೆಸಿದ್ದರು. ಅದರಂತೆ ನವೆಂಬರ್ 1ರಂದು ಸಂಜೆ 5 ಗಂಟೆಗೆ ಗುಜರಾತ್​ಗೆ ಕುಟುಂಬ ಸಮೇತ ಪ್ರಯಾಣ ಬೆಳಿಸಿದ್ದಾರೆ. ಈ ನಡುವೆ ಭದ್ರತೆಯ ಆತಂಕದಲ್ಲಿ ಹಲವು ಕಡೆಗಳಿಂದ ಚಿನ್ನ ತಂದು ಮನೆಯಲ್ಲಿಟ್ಟಿದ್ದರು.

ವ್ಯಾಪಾರದ ವಜ್ರ ಕಚಿತ ಚಿನ್ನಾಭರಣ, ನಗದು, ಐದು ಸಹೋದರಿಯರಿಗೆ ಸೇರಿದ ಚಿನ್ನಾಭರಣ ಎಲ್ಲವೂ ಸೇರಿ 18 ಕೆಜಿ ಚಿನ್ನ ಹಾಗೂ 40 ಲಕ್ಷ ರೂ. ಮನೆಯಲ್ಲಿಟ್ಟು ತೆರಳಿದ್ದಾರೆ. ಒಂದು ವಾರದ ಬಳಿಕ ಸುರೇಂದ್ರ ಮನೆಗೆ ವಾಪಾಸ್ ಆಗಿದ್ದು, ಈ ವೇಳೆ ಮನೆ ಕಳ್ಳತವಾಗಿರುವುದು ಕಂಡುಬಂದಿದೆ. ನಮ್ರಾಜ್​ಗೆ ಕರೆ ಮಾಡಿದಾಗ ನಂಬರ್ ಸ್ವಿಚ್ ಆಫ್ ಬಂದಿದೆ. ಹೀಗಾಗಿ ಆತನೇ ಕಳ್ಳತನ ಮಾಡಿರುವ ಬಗ್ಗೆ ಉದ್ಯಮಿ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ವಿಜಯನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಡಿಸಿಪಿ ಗಿರೀಶ್ ಹೇಳಿದ್ದಿಷ್ಟು 

ಘಟನೆ ಸಂಬಂಧ ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಪ್ರತಿಕ್ರಿಯಿಸಿದ್ದು, ವಿಜಯನಗರ ಠಾಣೆಗೆ ಸುರೇಂದ್ರ ಕುಮಾರ್‌ ದೂರು ಕೊಟ್ಟಿದ್ದರು. ಅವರು ಊರಿಗೆ ಹೋಗಿದ್ದರು. ಗಿಡಗಳಿಗೆ ನೀರು ಹಾಕಲು ಕೆಲಸಕ್ಕಿದ್ದ ನೇಪಾಳಿಗೆ ಕೀ ಕೊಟ್ಟಿದ್ದರು. ನೇಪಾಳಿ ಮತ್ತು ಹೆಂಡತಿ, ಇಬ್ಬರು ಸ್ನೇಹಿತರು ಸೇರಿ ನ.3ರಂದು ರಾತ್ರಿ ಕಳ್ಳತನ ಮಾಡಿದ್ದಾರೆ.

ನಾಲ್ವರೂ ನೇಪಾಳ ಮೂಲದವರು, 2 ವರ್ಷದಿಂದ ಕೆಲಸ ಮಾಡ್ತಿದ್ದರು. ನಾಲ್ವರೂ ನೇಪಾಳ ಸೇರಿದ್ದಾರೆ, ಪೊಲೀಸರ ತಂಡ ನೇಪಾಳಕ್ಕೆ ಹೋಗಿದೆ. 15 ಕೋಟಿ ರೂ. ಮೌಲ್ಯದ ಚಿನ್ನ, ನಗದು ಕಳವಾಗಿದೆ ಎಂದು ದೂರು ನೀಡಿದ್ದಾರೆ ಎಂದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!