AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಡಾ.ಅಸ್ರಣ್ಣ ಬೇಜವಾಬ್ದಾರಿತನದಿಂದ 15 ಜನ ಅಮಾಯಕರ ಸಾವು: ಪಾಂಡವಪುರ ಎಸಿ ಶಿವಾನಂದ್

ಕೆ. ಆರ್. ಪೇಟೆಯಲ್ಲೂ ಖಾಸಗಿ ಕ್ಲಿನಿಕ್​ಗಳನ್ನ ಮುಚ್ಚಿಸಿ. ಆ ಮೂಲಕ ಕೊವಿಡ್ ಲಕ್ಷಣಗಳಿರುವ ವ್ಯಕ್ತಿಗಳಿಗೆ ಚಿಕಿತ್ಸೆ ನೀಡದಂತೆ ಕ್ರಮ ವಹಿಸಿ ಎಂದು ನೋಡಲ್ ಅಧಿಕಾರಿಗಳಿಗೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ನಡೆದ ಸಭೆಯಲ್ಲಿ ಪಾಂಡವಪುರ ಎಸಿ ಶಿವಾನಂದ್ ತಿಳುವಳಿಕೆ ನೀಡಿದ್ದಾರೆ.

ಮಂಡ್ಯದ ಡಾ.ಅಸ್ರಣ್ಣ ಬೇಜವಾಬ್ದಾರಿತನದಿಂದ 15 ಜನ ಅಮಾಯಕರ ಸಾವು: ಪಾಂಡವಪುರ ಎಸಿ ಶಿವಾನಂದ್
ಪಾಂಡವಪುರ ಎಸಿ ಶಿವಾನಂದ್
preethi shettigar
|

Updated on: May 28, 2021 | 8:50 AM

Share

ಮಂಡ್ಯ: ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದಂತೆ, ಇಂಜೆಕ್ಷನ್, ಇನ್ನಿತರ ಔಷಧಿಗಳ ಬಗೆಗಿನ ಕಳ್ಳ ಪ್ರಕರಣಗಳು ಕೂಡ ಹೆಚ್ಚಾಗುತ್ತಿದೆ. ಹೀಗಿರುವಾಗಲೇ ಮಂಡ್ಯದಲ್ಲಿ ವೈದರ ವಿರುದ್ಧ ಆರೋಪ ಕೇಳಿ ಬಂದಿದ್ದು, ಡಾ. ಅಸ್ರಣ್ಣ ಕ್ಲಿನಿಕ್ ವೈದ್ಯನ ಯಡವಟ್ಟಿಗೆ ಪಾಂಡವಪುರ ತಾಲೂಕಿನಲ್ಲಿ 15 ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಕೆ. ಆರ್. ಪೇಟೆಯಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಪಾಂಡವಪುರ ಎಸಿ ಶಿವಾನಂದ್ ಹೇಳಿಕೆ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಕೆ. ಆರ್.ಪೇಟೆ ಪಟ್ಟಣದಲ್ಲಿ ಕೊವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಎಸಿ ಶಿವಾನಂದ್, ಪಾಂಡವಪುರ ಪಟ್ಟಣದಲ್ಲಿ ಒಬ್ಬ ಡಾ. ಅಸ್ರಣ್ಣ ಎಂಬಾತ ಕ್ಲಿನಿಕ್ ನಡೆಸುತ್ತಿದ್ದ. ಕೊವಿಡ್ ಲಕ್ಷಣಗಳಿರುವ ರೋಗಿಗಳು ಆತನ ಕ್ಲಿನಿಕ್​ಗೆ ಬಂದರೆ 1 ರಿಂದ 2 ಸಾವಿರ ರೂಪಾಯಿ ಮಾತ್ರೆ ಬರೆದು ಕೊಡುತ್ತಿದ್ದ. ಹೀಗೆ ಆತನ ಬಳಿ ಮಾತ್ರೆ ತೆಗೆದುಕೊಳ್ಳುತ್ತಿದ್ದ 15 ಜನ ಸಾವಿಗೀಡಾಗಿದ್ದಾರೆ. ಈ ವಿಚಾರ ತಿಳಿದ ಕೂಡಲೇ ನಾವು ಆತನ ಕ್ಲಿನಿಕ್ ಬಂದ್ ಮಾಡಿಸಿದ್ದೀವಿ ಎಂದು ತಿಳಿಸಿದ್ದಾರೆ.

ಕೆ. ಆರ್. ಪೇಟೆಯಲ್ಲೂ ಖಾಸಗಿ ಕ್ಲಿನಿಕ್​ಗಳನ್ನ ಮುಚ್ಚಿಸಿ. ಆ ಮೂಲಕ ಕೊವಿಡ್ ಲಕ್ಷಣಗಳಿರುವ ವ್ಯಕ್ತಿಗಳಿಗೆ ಚಿಕಿತ್ಸೆ ನೀಡದಂತೆ ಕ್ರಮ ವಹಿಸಿ ಎಂದು ನೋಡಲ್ ಅಧಿಕಾರಿಗಳಿಗೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ನಡೆದ ಸಭೆಯಲ್ಲಿ ಪಾಂಡವಪುರ ಎಸಿ ಶಿವಾನಂದ್ ತಿಳುವಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಕೊರೊನಾದಿಂದ ನಿಜವಾಗಿಯೂ ಸಂಭವಿಸಿದ ಸಾವುಗಳೆಷ್ಟು? ಅಧಿಕೃತ ಅಂಕಿಗೂ ಆರೋಗ್ಯ ಸಂಸ್ಥೆ ನೀಡಿದ ಲೆಕ್ಕಾಚಾರಕ್ಕೂ ವ್ಯತ್ಯಾಸ ನೋಡಿ!

ಭೀಕರ ಮಹಾಮಾರಿ ನಡುವೆ ವೈದ್ಯರ ನಿರ್ಲಕ್ಷ್ಯ.. ಕೊರೊನಾ ದೃಢವಾಗುತ್ತಿದ್ದಂತೆ ಡಿಸ್ಚಾರ್ಜ್, ಆಸ್ಪತ್ರೆಗಳ ಮುಂದೆ ನರಳಾಟ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?