AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಕಿಕ್​ ನೀಡಿದ ಮದ್ಯ ಮಾರಾಟ: ಶೇ15 ರಷ್ಟು ಅಧಿಕ ಲಾಭ!

ರಾಜ್ಯದ ಪ್ರಮುಖ ಆದಾಯದ ಮೂಲ ಅಂದರೆ ಅದು ಅಬಕಾರಿ ಇಲಾಖೆ. ಅಬಕಾರಿ ಇಲಾಖೆಯಿಂದ ಈ ಬಾರಿ ಭರ್ಜರಿ ಲಾಭವನ್ನ ಸರ್ಕಾರ ಮಾಡಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಬರದಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಹೆಚ್ಚು ಆದಾಯ ಸರ್ಕಾರದ ಖಜಾನೆ ಸೇರಿದೆ. ಹಾಗಿದ್ದರೆ ಎಷ್ಟು ಮಾರಾಟವಾಗಿದೆ, ಇಲ್ಲಿದೆ ಓದಿ

ಸರ್ಕಾರಕ್ಕೆ ಕಿಕ್​ ನೀಡಿದ ಮದ್ಯ ಮಾರಾಟ: ಶೇ15 ರಷ್ಟು ಅಧಿಕ ಲಾಭ!
ಮದ್ಯ ಮಾರಾಟದಿಂದ ಅಧಿಕ ಲಾಭ
Kiran Surya
| Edited By: |

Updated on: May 26, 2024 | 7:43 AM

Share

ಬೆಂಗಳೂರು, ಮೇ 26: ನಮ್ಮ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಅಬಕಾರಿ ಸುಂಕ ದೊಡ್ಡ ಮಟ್ಟದ ಕೊಡುಗೆ ಇದೆ. ಈ ವರ್ಷ ರಾಜ್ಯದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಆದಾಯವನ್ನು ನೀಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ರಾಜ್ಯದ ಮದ್ಯ (Alcohol) ಮಾರಾಟ ದಾಖಲೆ ಬರೆದಿದೆ. ಸರ್ಕಾರ (Karnataka Government) ಅಂದುಕೊಂಡಿದ್ದ ಟಾರ್ಗೆಟ್​​​ಗಿಂತ ಹೆಚ್ಚಿನ ಮದ್ಯ ಮಾರಾಟವಾಗಿದ್ದು ಅಬಕಾರಿ ಇಲಾಖೆಗೆ (Karnataka Excise Department) ಕೋಟಿ ಕೋಟಿ ಆದಾಯ ಬಂದಿದೆ.

ರಾಜ್ಯದ ಪ್ರಮುಖ ಆದಾಯದ ಮೂಲ ಅಂದರೆ ಅದು ಅಬಕಾರಿ ಇಲಾಖೆ. ಅಬಕಾರಿ ಇಲಾಖೆಯಿಂದ ಈ ಬಾರಿ ಭರ್ಜರಿ ಲಾಭವನ್ನ ಸರ್ಕಾರ ಮಾಡಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಶೇ15 ರಷ್ಟು ಮದ್ಯ ವರಮಾನ ಹೆಚ್ಚಾಗಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಬರದಿದೆ.

ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು. ರಾಜ್ಯದಲ್ಲಿ ಮೂರು ಬಾರಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳವಾಗಿದ್ದು 2023-24 ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ಸರ್ಕಾರದ ಖಜಾನೆಗೆ ಬಂದಿದೆ. ಅಬಕಾರಿ ಇಲಾಖೆಗೆ ಸರ್ಕಾರ 34.500 ಕೋಟಿ ಟಾರ್ಗೆಟ್ ನೀಡಿತ್ತು. ಈ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 34.628 ಕೋಟಿ ಆದಾಯ ಸಂಗ್ರಹ ಮಾಡುವ ಮೂಲಕ ಅಬಕಾರಿ ಇಲಾಖೆ ಟಾರ್ಗೆಟ್​​ಗಿಂತ 128 ಕೋಟಿ ಅಧಿಕ ಸಂಗ್ರಹ ಮಾಡಿದೆ.

ಕಳೆದ ವರ್ಷ ಅಬಕಾರಿ ಇಲಾಖೆಗೆ 32,000 ಕೋಟಿ ಟಾರ್ಗೆಟ್ ನೀಡಲಾಗಿತ್ತು, ಆ ಸಮಯದಲ್ಲಿ 29,920 ಕೋಟಿ ರೂಪಾಯಿಯನ್ನ ಅಬಕಾರಿ ಇಲಾಖೆ ಸಂಗ್ರಹ ಮಾಡಿತ್ತು. ಈ ವರ್ಷದಲ್ಲಿ ದರ ಏರಿಕೆಯ ನಡುವೆಯೂ ಮದ್ಯಮಾರಾಟ ಭರ್ಜರಿಯಾಗಿ ನಡೆದಿದ್ದು ಅತ್ಯಧಿಕ ಆದಾಯ ಸಂಗ್ರಹವಾಗಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಈ ಸಲ‌ ಮದ್ಯ ಮಾರಾಟ ಕೂಡ ಹೆಚ್ಚಾಗಿದ್ದು ರಾಜಕೀಯ ಸಮಾವೇಶಗಳು, ಕಾರ್ಯಕರ್ತರ ಸಭೆಗಳ ನಡೆದಿರುವುದು ಸಹ ಟಾರ್ಗೆಟ್ ಮುಟ್ಟಲು ಆಗಲು ಕಾರಣವಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಜೂನ್​ ಮೊದಲ ವಾರ ಮದ್ಯ ಸಿಗಲ್ಲ

ಜೂನ್ 1 ರಿಂದ 6 ರವರೆಗೆ ಬಾರ್, ಎಂಆರ್​ಪಿ ಔಟ್​ಲೇಟ್​ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯಯರು ಈ ತಿಂಗಳು ಅಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬೇಕಾಗಿದೆ. ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವುದರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ನೀಡಿದೆ. ಜೂನ್ 3 ರಂದು ಪದವೀಧರ ಕ್ಷೇತ್ರದ ಮತದಾನ ಇರುವುದರಿಂದ ಜೂ‌ನ್ 1 ರ ಸಂಜೆ 4 ರಿಂದಲೇ ಬಾರ್ ಕ್ಲೋಸ್ ಆಗಲಿದ್ದು, ಜೂನ್ 3ರವರೆಗೆ ಬಂದ್ ಮಾಡಬೇಕಾಗುತ್ತೆ.

ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಮತದಾನದ ಮತ ಎಣಿಕೆ ನಡೆಯಲಿದ್ದು ಅಂದು ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್​ಸಿ ಮತ ಎಣಿಕೆ ಇರುವುದರಿಂದ ಅಂದು ಸಹ ಬಾರ್ ಬಂದ್​ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದು, ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದಿಲ್ಲ.

ಒಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲ ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಬರಿದಾಗಿದೆ ಅನ್ನೋ ಮಾತುಗಳ ನಡುವೆ ಅಬಕಾರಿ ಇಲಾಖೆಯ ಈ ಆರ್ಥಿಕ ಸಾಧನೆ ಸರ್ಕಾರಕ್ಕೆ ಕಿಕ್ ನೀಡಿರುವುದಂತು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್