Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಕಿಕ್​ ನೀಡಿದ ಮದ್ಯ ಮಾರಾಟ: ಶೇ15 ರಷ್ಟು ಅಧಿಕ ಲಾಭ!

ರಾಜ್ಯದ ಪ್ರಮುಖ ಆದಾಯದ ಮೂಲ ಅಂದರೆ ಅದು ಅಬಕಾರಿ ಇಲಾಖೆ. ಅಬಕಾರಿ ಇಲಾಖೆಯಿಂದ ಈ ಬಾರಿ ಭರ್ಜರಿ ಲಾಭವನ್ನ ಸರ್ಕಾರ ಮಾಡಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಬರದಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಹೆಚ್ಚು ಆದಾಯ ಸರ್ಕಾರದ ಖಜಾನೆ ಸೇರಿದೆ. ಹಾಗಿದ್ದರೆ ಎಷ್ಟು ಮಾರಾಟವಾಗಿದೆ, ಇಲ್ಲಿದೆ ಓದಿ

ಸರ್ಕಾರಕ್ಕೆ ಕಿಕ್​ ನೀಡಿದ ಮದ್ಯ ಮಾರಾಟ: ಶೇ15 ರಷ್ಟು ಅಧಿಕ ಲಾಭ!
ಮದ್ಯ ಮಾರಾಟದಿಂದ ಅಧಿಕ ಲಾಭ
Follow us
Kiran Surya
| Updated By: ವಿವೇಕ ಬಿರಾದಾರ

Updated on: May 26, 2024 | 7:43 AM

ಬೆಂಗಳೂರು, ಮೇ 26: ನಮ್ಮ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಅಬಕಾರಿ ಸುಂಕ ದೊಡ್ಡ ಮಟ್ಟದ ಕೊಡುಗೆ ಇದೆ. ಈ ವರ್ಷ ರಾಜ್ಯದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಆದಾಯವನ್ನು ನೀಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ರಾಜ್ಯದ ಮದ್ಯ (Alcohol) ಮಾರಾಟ ದಾಖಲೆ ಬರೆದಿದೆ. ಸರ್ಕಾರ (Karnataka Government) ಅಂದುಕೊಂಡಿದ್ದ ಟಾರ್ಗೆಟ್​​​ಗಿಂತ ಹೆಚ್ಚಿನ ಮದ್ಯ ಮಾರಾಟವಾಗಿದ್ದು ಅಬಕಾರಿ ಇಲಾಖೆಗೆ (Karnataka Excise Department) ಕೋಟಿ ಕೋಟಿ ಆದಾಯ ಬಂದಿದೆ.

ರಾಜ್ಯದ ಪ್ರಮುಖ ಆದಾಯದ ಮೂಲ ಅಂದರೆ ಅದು ಅಬಕಾರಿ ಇಲಾಖೆ. ಅಬಕಾರಿ ಇಲಾಖೆಯಿಂದ ಈ ಬಾರಿ ಭರ್ಜರಿ ಲಾಭವನ್ನ ಸರ್ಕಾರ ಮಾಡಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಶೇ15 ರಷ್ಟು ಮದ್ಯ ವರಮಾನ ಹೆಚ್ಚಾಗಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಬರದಿದೆ.

ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು. ರಾಜ್ಯದಲ್ಲಿ ಮೂರು ಬಾರಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳವಾಗಿದ್ದು 2023-24 ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ಸರ್ಕಾರದ ಖಜಾನೆಗೆ ಬಂದಿದೆ. ಅಬಕಾರಿ ಇಲಾಖೆಗೆ ಸರ್ಕಾರ 34.500 ಕೋಟಿ ಟಾರ್ಗೆಟ್ ನೀಡಿತ್ತು. ಈ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 34.628 ಕೋಟಿ ಆದಾಯ ಸಂಗ್ರಹ ಮಾಡುವ ಮೂಲಕ ಅಬಕಾರಿ ಇಲಾಖೆ ಟಾರ್ಗೆಟ್​​ಗಿಂತ 128 ಕೋಟಿ ಅಧಿಕ ಸಂಗ್ರಹ ಮಾಡಿದೆ.

ಕಳೆದ ವರ್ಷ ಅಬಕಾರಿ ಇಲಾಖೆಗೆ 32,000 ಕೋಟಿ ಟಾರ್ಗೆಟ್ ನೀಡಲಾಗಿತ್ತು, ಆ ಸಮಯದಲ್ಲಿ 29,920 ಕೋಟಿ ರೂಪಾಯಿಯನ್ನ ಅಬಕಾರಿ ಇಲಾಖೆ ಸಂಗ್ರಹ ಮಾಡಿತ್ತು. ಈ ವರ್ಷದಲ್ಲಿ ದರ ಏರಿಕೆಯ ನಡುವೆಯೂ ಮದ್ಯಮಾರಾಟ ಭರ್ಜರಿಯಾಗಿ ನಡೆದಿದ್ದು ಅತ್ಯಧಿಕ ಆದಾಯ ಸಂಗ್ರಹವಾಗಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಈ ಸಲ‌ ಮದ್ಯ ಮಾರಾಟ ಕೂಡ ಹೆಚ್ಚಾಗಿದ್ದು ರಾಜಕೀಯ ಸಮಾವೇಶಗಳು, ಕಾರ್ಯಕರ್ತರ ಸಭೆಗಳ ನಡೆದಿರುವುದು ಸಹ ಟಾರ್ಗೆಟ್ ಮುಟ್ಟಲು ಆಗಲು ಕಾರಣವಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಜೂನ್​ ಮೊದಲ ವಾರ ಮದ್ಯ ಸಿಗಲ್ಲ

ಜೂನ್ 1 ರಿಂದ 6 ರವರೆಗೆ ಬಾರ್, ಎಂಆರ್​ಪಿ ಔಟ್​ಲೇಟ್​ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯಯರು ಈ ತಿಂಗಳು ಅಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬೇಕಾಗಿದೆ. ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವುದರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ನೀಡಿದೆ. ಜೂನ್ 3 ರಂದು ಪದವೀಧರ ಕ್ಷೇತ್ರದ ಮತದಾನ ಇರುವುದರಿಂದ ಜೂ‌ನ್ 1 ರ ಸಂಜೆ 4 ರಿಂದಲೇ ಬಾರ್ ಕ್ಲೋಸ್ ಆಗಲಿದ್ದು, ಜೂನ್ 3ರವರೆಗೆ ಬಂದ್ ಮಾಡಬೇಕಾಗುತ್ತೆ.

ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಮತದಾನದ ಮತ ಎಣಿಕೆ ನಡೆಯಲಿದ್ದು ಅಂದು ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್​ಸಿ ಮತ ಎಣಿಕೆ ಇರುವುದರಿಂದ ಅಂದು ಸಹ ಬಾರ್ ಬಂದ್​ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದು, ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದಿಲ್ಲ.

ಒಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲ ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಬರಿದಾಗಿದೆ ಅನ್ನೋ ಮಾತುಗಳ ನಡುವೆ ಅಬಕಾರಿ ಇಲಾಖೆಯ ಈ ಆರ್ಥಿಕ ಸಾಧನೆ ಸರ್ಕಾರಕ್ಕೆ ಕಿಕ್ ನೀಡಿರುವುದಂತು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ