AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಕಿಕ್​ ನೀಡಿದ ಮದ್ಯ ಮಾರಾಟ: ಶೇ15 ರಷ್ಟು ಅಧಿಕ ಲಾಭ!

ರಾಜ್ಯದ ಪ್ರಮುಖ ಆದಾಯದ ಮೂಲ ಅಂದರೆ ಅದು ಅಬಕಾರಿ ಇಲಾಖೆ. ಅಬಕಾರಿ ಇಲಾಖೆಯಿಂದ ಈ ಬಾರಿ ಭರ್ಜರಿ ಲಾಭವನ್ನ ಸರ್ಕಾರ ಮಾಡಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಬರದಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಹೆಚ್ಚು ಆದಾಯ ಸರ್ಕಾರದ ಖಜಾನೆ ಸೇರಿದೆ. ಹಾಗಿದ್ದರೆ ಎಷ್ಟು ಮಾರಾಟವಾಗಿದೆ, ಇಲ್ಲಿದೆ ಓದಿ

ಸರ್ಕಾರಕ್ಕೆ ಕಿಕ್​ ನೀಡಿದ ಮದ್ಯ ಮಾರಾಟ: ಶೇ15 ರಷ್ಟು ಅಧಿಕ ಲಾಭ!
ಮದ್ಯ ಮಾರಾಟದಿಂದ ಅಧಿಕ ಲಾಭ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: May 26, 2024 | 7:43 AM

Share

ಬೆಂಗಳೂರು, ಮೇ 26: ನಮ್ಮ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಅಬಕಾರಿ ಸುಂಕ ದೊಡ್ಡ ಮಟ್ಟದ ಕೊಡುಗೆ ಇದೆ. ಈ ವರ್ಷ ರಾಜ್ಯದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಆದಾಯವನ್ನು ನೀಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ರಾಜ್ಯದ ಮದ್ಯ (Alcohol) ಮಾರಾಟ ದಾಖಲೆ ಬರೆದಿದೆ. ಸರ್ಕಾರ (Karnataka Government) ಅಂದುಕೊಂಡಿದ್ದ ಟಾರ್ಗೆಟ್​​​ಗಿಂತ ಹೆಚ್ಚಿನ ಮದ್ಯ ಮಾರಾಟವಾಗಿದ್ದು ಅಬಕಾರಿ ಇಲಾಖೆಗೆ (Karnataka Excise Department) ಕೋಟಿ ಕೋಟಿ ಆದಾಯ ಬಂದಿದೆ.

ರಾಜ್ಯದ ಪ್ರಮುಖ ಆದಾಯದ ಮೂಲ ಅಂದರೆ ಅದು ಅಬಕಾರಿ ಇಲಾಖೆ. ಅಬಕಾರಿ ಇಲಾಖೆಯಿಂದ ಈ ಬಾರಿ ಭರ್ಜರಿ ಲಾಭವನ್ನ ಸರ್ಕಾರ ಮಾಡಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಶೇ15 ರಷ್ಟು ಮದ್ಯ ವರಮಾನ ಹೆಚ್ಚಾಗಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಬರದಿದೆ.

ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು. ರಾಜ್ಯದಲ್ಲಿ ಮೂರು ಬಾರಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳವಾಗಿದ್ದು 2023-24 ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ಸರ್ಕಾರದ ಖಜಾನೆಗೆ ಬಂದಿದೆ. ಅಬಕಾರಿ ಇಲಾಖೆಗೆ ಸರ್ಕಾರ 34.500 ಕೋಟಿ ಟಾರ್ಗೆಟ್ ನೀಡಿತ್ತು. ಈ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 34.628 ಕೋಟಿ ಆದಾಯ ಸಂಗ್ರಹ ಮಾಡುವ ಮೂಲಕ ಅಬಕಾರಿ ಇಲಾಖೆ ಟಾರ್ಗೆಟ್​​ಗಿಂತ 128 ಕೋಟಿ ಅಧಿಕ ಸಂಗ್ರಹ ಮಾಡಿದೆ.

ಕಳೆದ ವರ್ಷ ಅಬಕಾರಿ ಇಲಾಖೆಗೆ 32,000 ಕೋಟಿ ಟಾರ್ಗೆಟ್ ನೀಡಲಾಗಿತ್ತು, ಆ ಸಮಯದಲ್ಲಿ 29,920 ಕೋಟಿ ರೂಪಾಯಿಯನ್ನ ಅಬಕಾರಿ ಇಲಾಖೆ ಸಂಗ್ರಹ ಮಾಡಿತ್ತು. ಈ ವರ್ಷದಲ್ಲಿ ದರ ಏರಿಕೆಯ ನಡುವೆಯೂ ಮದ್ಯಮಾರಾಟ ಭರ್ಜರಿಯಾಗಿ ನಡೆದಿದ್ದು ಅತ್ಯಧಿಕ ಆದಾಯ ಸಂಗ್ರಹವಾಗಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಈ ಸಲ‌ ಮದ್ಯ ಮಾರಾಟ ಕೂಡ ಹೆಚ್ಚಾಗಿದ್ದು ರಾಜಕೀಯ ಸಮಾವೇಶಗಳು, ಕಾರ್ಯಕರ್ತರ ಸಭೆಗಳ ನಡೆದಿರುವುದು ಸಹ ಟಾರ್ಗೆಟ್ ಮುಟ್ಟಲು ಆಗಲು ಕಾರಣವಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಜೂನ್​ ಮೊದಲ ವಾರ ಮದ್ಯ ಸಿಗಲ್ಲ

ಜೂನ್ 1 ರಿಂದ 6 ರವರೆಗೆ ಬಾರ್, ಎಂಆರ್​ಪಿ ಔಟ್​ಲೇಟ್​ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯಯರು ಈ ತಿಂಗಳು ಅಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬೇಕಾಗಿದೆ. ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವುದರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ನೀಡಿದೆ. ಜೂನ್ 3 ರಂದು ಪದವೀಧರ ಕ್ಷೇತ್ರದ ಮತದಾನ ಇರುವುದರಿಂದ ಜೂ‌ನ್ 1 ರ ಸಂಜೆ 4 ರಿಂದಲೇ ಬಾರ್ ಕ್ಲೋಸ್ ಆಗಲಿದ್ದು, ಜೂನ್ 3ರವರೆಗೆ ಬಂದ್ ಮಾಡಬೇಕಾಗುತ್ತೆ.

ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಮತದಾನದ ಮತ ಎಣಿಕೆ ನಡೆಯಲಿದ್ದು ಅಂದು ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್​ಸಿ ಮತ ಎಣಿಕೆ ಇರುವುದರಿಂದ ಅಂದು ಸಹ ಬಾರ್ ಬಂದ್​ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದು, ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದಿಲ್ಲ.

ಒಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲ ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಬರಿದಾಗಿದೆ ಅನ್ನೋ ಮಾತುಗಳ ನಡುವೆ ಅಬಕಾರಿ ಇಲಾಖೆಯ ಈ ಆರ್ಥಿಕ ಸಾಧನೆ ಸರ್ಕಾರಕ್ಕೆ ಕಿಕ್ ನೀಡಿರುವುದಂತು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ