AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಕಿಕ್​ ನೀಡಿದ ಮದ್ಯ ಮಾರಾಟ: ಶೇ15 ರಷ್ಟು ಅಧಿಕ ಲಾಭ!

ರಾಜ್ಯದ ಪ್ರಮುಖ ಆದಾಯದ ಮೂಲ ಅಂದರೆ ಅದು ಅಬಕಾರಿ ಇಲಾಖೆ. ಅಬಕಾರಿ ಇಲಾಖೆಯಿಂದ ಈ ಬಾರಿ ಭರ್ಜರಿ ಲಾಭವನ್ನ ಸರ್ಕಾರ ಮಾಡಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಬರದಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಹೆಚ್ಚು ಆದಾಯ ಸರ್ಕಾರದ ಖಜಾನೆ ಸೇರಿದೆ. ಹಾಗಿದ್ದರೆ ಎಷ್ಟು ಮಾರಾಟವಾಗಿದೆ, ಇಲ್ಲಿದೆ ಓದಿ

ಸರ್ಕಾರಕ್ಕೆ ಕಿಕ್​ ನೀಡಿದ ಮದ್ಯ ಮಾರಾಟ: ಶೇ15 ರಷ್ಟು ಅಧಿಕ ಲಾಭ!
ಮದ್ಯ ಮಾರಾಟದಿಂದ ಅಧಿಕ ಲಾಭ
Kiran Surya
| Updated By: ವಿವೇಕ ಬಿರಾದಾರ|

Updated on: May 26, 2024 | 7:43 AM

Share

ಬೆಂಗಳೂರು, ಮೇ 26: ನಮ್ಮ ರಾಜ್ಯದ ಆರ್ಥಿಕ ವ್ಯವಸ್ಥೆಗೆ ಅಬಕಾರಿ ಸುಂಕ ದೊಡ್ಡ ಮಟ್ಟದ ಕೊಡುಗೆ ಇದೆ. ಈ ವರ್ಷ ರಾಜ್ಯದ ಬೊಕ್ಕಸಕ್ಕೆ ಮದ್ಯಪ್ರಿಯರು ಭರ್ಜರಿ ಆದಾಯವನ್ನು ನೀಡಿದ್ದಾರೆ. ಪ್ರತಿ ವರ್ಷಕ್ಕಿಂತ ಈ ವರ್ಷ ರಾಜ್ಯದ ಮದ್ಯ (Alcohol) ಮಾರಾಟ ದಾಖಲೆ ಬರೆದಿದೆ. ಸರ್ಕಾರ (Karnataka Government) ಅಂದುಕೊಂಡಿದ್ದ ಟಾರ್ಗೆಟ್​​​ಗಿಂತ ಹೆಚ್ಚಿನ ಮದ್ಯ ಮಾರಾಟವಾಗಿದ್ದು ಅಬಕಾರಿ ಇಲಾಖೆಗೆ (Karnataka Excise Department) ಕೋಟಿ ಕೋಟಿ ಆದಾಯ ಬಂದಿದೆ.

ರಾಜ್ಯದ ಪ್ರಮುಖ ಆದಾಯದ ಮೂಲ ಅಂದರೆ ಅದು ಅಬಕಾರಿ ಇಲಾಖೆ. ಅಬಕಾರಿ ಇಲಾಖೆಯಿಂದ ಈ ಬಾರಿ ಭರ್ಜರಿ ಲಾಭವನ್ನ ಸರ್ಕಾರ ಮಾಡಿದೆ. ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಶೇ15 ರಷ್ಟು ಮದ್ಯ ವರಮಾನ ಹೆಚ್ಚಾಗಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ದಾಖಲೆ ಬರದಿದೆ.

ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಕಿಕ್ ಕೊಟ್ಟ ಮದ್ಯಪ್ರಿಯರು. ರಾಜ್ಯದಲ್ಲಿ ಮೂರು ಬಾರಿ ದರ ಏರಿಕೆ ನಡುವೆಯೂ ಮದ್ಯ ಮಾರಾಟ ಬಾರಿ ಹೆಚ್ಚಳವಾಗಿದ್ದು 2023-24 ನೇ ಸಾಲಿನಲ್ಲಿ ಸಾವಿರಾರು ಕೋಟಿ ರೂಪಾಯಿ ಸರ್ಕಾರದ ಖಜಾನೆಗೆ ಬಂದಿದೆ. ಅಬಕಾರಿ ಇಲಾಖೆಗೆ ಸರ್ಕಾರ 34.500 ಕೋಟಿ ಟಾರ್ಗೆಟ್ ನೀಡಿತ್ತು. ಈ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 34.628 ಕೋಟಿ ಆದಾಯ ಸಂಗ್ರಹ ಮಾಡುವ ಮೂಲಕ ಅಬಕಾರಿ ಇಲಾಖೆ ಟಾರ್ಗೆಟ್​​ಗಿಂತ 128 ಕೋಟಿ ಅಧಿಕ ಸಂಗ್ರಹ ಮಾಡಿದೆ.

ಕಳೆದ ವರ್ಷ ಅಬಕಾರಿ ಇಲಾಖೆಗೆ 32,000 ಕೋಟಿ ಟಾರ್ಗೆಟ್ ನೀಡಲಾಗಿತ್ತು, ಆ ಸಮಯದಲ್ಲಿ 29,920 ಕೋಟಿ ರೂಪಾಯಿಯನ್ನ ಅಬಕಾರಿ ಇಲಾಖೆ ಸಂಗ್ರಹ ಮಾಡಿತ್ತು. ಈ ವರ್ಷದಲ್ಲಿ ದರ ಏರಿಕೆಯ ನಡುವೆಯೂ ಮದ್ಯಮಾರಾಟ ಭರ್ಜರಿಯಾಗಿ ನಡೆದಿದ್ದು ಅತ್ಯಧಿಕ ಆದಾಯ ಸಂಗ್ರಹವಾಗಿದೆ. ಈ ವರ್ಷ ಚುನಾವಣಾ ವರ್ಷವಾಗಿರುವುದರಿಂದ ಈ ಸಲ‌ ಮದ್ಯ ಮಾರಾಟ ಕೂಡ ಹೆಚ್ಚಾಗಿದ್ದು ರಾಜಕೀಯ ಸಮಾವೇಶಗಳು, ಕಾರ್ಯಕರ್ತರ ಸಭೆಗಳ ನಡೆದಿರುವುದು ಸಹ ಟಾರ್ಗೆಟ್ ಮುಟ್ಟಲು ಆಗಲು ಕಾರಣವಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಜೂನ್​ ಮೊದಲ ವಾರ ಮದ್ಯ ಸಿಗಲ್ಲ

ಜೂನ್ 1 ರಿಂದ 6 ರವರೆಗೆ ಬಾರ್, ಎಂಆರ್​ಪಿ ಔಟ್​ಲೇಟ್​ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯಯರು ಈ ತಿಂಗಳು ಅಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬೇಕಾಗಿದೆ. ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವುದರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ನೀಡಿದೆ. ಜೂನ್ 3 ರಂದು ಪದವೀಧರ ಕ್ಷೇತ್ರದ ಮತದಾನ ಇರುವುದರಿಂದ ಜೂ‌ನ್ 1 ರ ಸಂಜೆ 4 ರಿಂದಲೇ ಬಾರ್ ಕ್ಲೋಸ್ ಆಗಲಿದ್ದು, ಜೂನ್ 3ರವರೆಗೆ ಬಂದ್ ಮಾಡಬೇಕಾಗುತ್ತೆ.

ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಮತದಾನದ ಮತ ಎಣಿಕೆ ನಡೆಯಲಿದ್ದು ಅಂದು ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್​ಸಿ ಮತ ಎಣಿಕೆ ಇರುವುದರಿಂದ ಅಂದು ಸಹ ಬಾರ್ ಬಂದ್​ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದು, ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದಿಲ್ಲ.

ಒಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲ ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಬರಿದಾಗಿದೆ ಅನ್ನೋ ಮಾತುಗಳ ನಡುವೆ ಅಬಕಾರಿ ಇಲಾಖೆಯ ಈ ಆರ್ಥಿಕ ಸಾಧನೆ ಸರ್ಕಾರಕ್ಕೆ ಕಿಕ್ ನೀಡಿರುವುದಂತು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?