Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ಹಾಕಿಸುವಲ್ಲಿ ನಿರ್ಲಕ್ಷ್ಯ ಆರೋಪ; ರಾಯಚೂರಿನ 16 ಖಾಸಗಿ ಪದವಿ ಕಾಲೇಜುಗಳಿಗೆ ನೋಟಿಸ್

ಜಿಲ್ಲೆಯ ಸುಮಾರು 16 ಖಾಸಗಿ ಪದವಿ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ. ಬೇಜವಾಬ್ದಾರಿ ತೋರಿದ ಆರೋಪದಲ್ಲಿ ರಾಯಚೂರು ಜಿಲ್ಲಾಡಳಿತ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡಿದ್ದು, 7 ದಿನದಲ್ಲಿ ನೋಟಿಸ್​ ಉತ್ತರಿಸುವಂತೆ ಸೂಚನೆ ನೀಡಿದೆ.

ಕೊವಿಡ್ ಲಸಿಕೆ ಹಾಕಿಸುವಲ್ಲಿ ನಿರ್ಲಕ್ಷ್ಯ ಆರೋಪ; ರಾಯಚೂರಿನ 16 ಖಾಸಗಿ ಪದವಿ ಕಾಲೇಜುಗಳಿಗೆ ನೋಟಿಸ್
ಲಸಿಕೆ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: sandhya thejappa

Updated on: Jun 30, 2021 | 10:24 AM

ರಾಯಚೂರು: ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ಹಾಕಿಸುವಲ್ಲಿ ಖಾಸಗಿ ಪದವಿ ಕಾಲೇಜುಗಳು ನಿರ್ಲಕ್ಷ್ಯ ತೋರಿವೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಜಿಲ್ಲೆಯ ಸುಮಾರು 16 ಖಾಸಗಿ ಪದವಿ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ. ಬೇಜವಾಬ್ದಾರಿ ತೋರಿದ ಆರೋಪದಲ್ಲಿ ರಾಯಚೂರು ಜಿಲ್ಲಾಡಳಿತ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡಿದ್ದು, 7 ದಿನದಲ್ಲಿ ನೋಟಿಸ್​ ಉತ್ತರಿಸುವಂತೆ ಸೂಚನೆ ನೀಡಿದೆ. ಸಹಾಯಕ ಆಯುಕ್ತ ಸಂತೋಷ್ ಕುಮಾರ್ ಅವರಿಂದ ನೋಟಿಸ್ ಜಾರಿಯಾಗಿದ್ದು, ಸೂಕ್ತ ಉತ್ತರ ನೀಡದೆ ಇದ್ದಲ್ಲಿ ವಿಪತ್ತು ನಿರ್ವಹಣ ಕಾಯ್ದೆಯಡಿ ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮೆಟ್ರೋದಲ್ಲಿ ಕೊರೊನಾ ನಿಯಮ ಉಲ್ಲಂಘನೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ಇದರ ಜೊತೆಗೆ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ಆದರೆ ಜನ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಬೇಜವಾಬ್ದಾರಿ ತೋರಿದ್ದಾರೆ. ಮೆಟ್ರೋ ರೈಲಿನಲ್ಲಿ ದೈಹಿಕ ಅಂತರ ಇಲ್ಲದೆ ಜನ ನಿಂತಿದ್ದಾರೆ. 3 ಬೋಗಿ ಮೆಟ್ರೋದಲ್ಲಿ 400 ಜನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ 400ಕ್ಕೂ ಹೆಚ್ಚು ಜನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದಾರೆ.

ಎರಡನೇ ಹಂತದ ಆನ್​ಲಾಕ್​ ಮೆಟ್ರೋ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿತ್ತು. ಆದರಲ್ಲೂ ಮೆಟ್ರೋ ರೈಲಿನಲ್ಲಿ 400 ಜನರಿಗೆ ಮಾತ್ರ ಪ್ರಯಾಣ ಮಾಡಲು ಅನುಮತಿ ನೀಡಿತ್ತು. ಆದರೆ 400 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದಾರೆ. ನಿಂತು ಪ್ರಯಾಣಿಸಲು ಅವಕಾಶ ಇಲ್ಲದಿದ್ದರೂ ಪ್ರಯಾಣಿಸಿದ್ದಾರೆ. ಗುಂಪು ಗುಂಪಾಗಿ ನಿಂತು ಪ್ರಯಾಣಿಸಿದ ಜನ ಸಾಮಾಜಿಕ ದೈಹಿಕ ಅಂತರ ಮರೆತಿದ್ದಾರೆ.

ಇದನ್ನೂ ಓದಿ

Social Media Day 2021: ಸಾಮಾಜಿಕ ಮಾಧ್ಯಮ ದಿನದ ಇತಿಹಾಸದ ಜತೆಗೆ ಪ್ರಾಮುಖ್ಯತೆಯನ್ನು ತಿಳಿಯಿರಿ

ಕಿಮ್ಸ್​ ಆಸ್ಪತ್ರೆಗೆ ಲಕ್ಷ್ಯ ರಾಷ್ಟ್ರೀಯ ಪುರಸ್ಕಾರ; ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗಕ್ಕೆ ರಾಜ್ಯ ಮತ್ತು ರಾಷ್ಟ್ರೀಯ ಮಾನ್ಯತೆ

(16 private degree colleges have been given notice by Raichur district administration)

ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು