AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ

ವಿಧಾನ ಪರಿಷತ್ತಿನಲ್ಲಿ ಮಂಡಿಸಲಾದ ಅಂಕಿಅಂಶಗಳ ಪ್ರಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 16,478 ಎಕರೆಯಷ್ಟು ಕಂದಾಯ ಇಲಾಖೆಯ ಭೂಮಿ ಅತಿಕ್ರಮಣವಾಗಿದೆ.

ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Jul 10, 2023 | 3:14 PM

Share

ಬೆಂಗಳೂರು: ಕಂದಾಯ ಇಲಾಖೆಯ (Revenue Department) ಭೂಮಿ ಅತಿಕ್ರಮಣ (Land Encroachment) ತಡೆಗಟ್ಟಲು ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತಂದರೂ ಅತಿಕ್ರಮಣ ತಡೆಯಲು ಸಾಧ್ಯವಾಗುತ್ತಿಲ್ಲ. ವಿಧಾನ ಪರಿಷತ್ತಿನಲ್ಲಿ (Legislative Council) ಮಂಡಿಸಲಾದ ಅಂಕಿಅಂಶಗಳ ಪ್ರಕಾರ ಬೆಂಗಳೂರು (Bengaluru) ನಗರ ಜಿಲ್ಲೆಯಲ್ಲಿ ಒಟ್ಟು 16,478 ಎಕರೆಗಳಷ್ಟು ಕಂದಾಯ ಇಲಾಖೆಯ ಭೂಮಿ ಅತಿಕ್ರಮಣವಾಗಿದೆ. ಇನ್ನು ರಾಜ್ಯದಲ್ಲಿ ಒಟ್ಟು 2.82 ಲಕ್ಷ (2,82,130) ಎಕರೆ ಕಂದಾಯ ಭೂಮಿ ಅತಿಕ್ರಮಣವಾಗಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಇಂಡಿಯನ್​​ ಎಕ್ಸಪ್ರೆಸ್​ ವರದಿ ಮಾಡಿದೆ.

ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿಕ್ರಮಣವಾಗಿರುವ ಕಂದಾಯ ಭೂಮಿ ಸಾವಿರಾರು ಕೋಟಿ ಮೌಲ್ಯದ್ದಾಗಿದೆ. ಬೆಂಗಳೂರು ಹೊರವಲಯಕ್ಕೆ ಹೋಲಿಸಿದರೇ ನಗರದ ಒಳಗಿನ ಪ್ರಮುಖ ಪ್ರದೇಶಗಳಲ್ಲಿ ಅತಿಕ್ರಮಿಸಲಾದ ಭೂಮಿ ಹೆಚ್ಚಿನ ಮೌಲ್ಯದ್ದಾಗಿದೆ. ಮೆಟ್ರೊ ಮಾರ್ಗದ ಜಮೀನು ಕೂಡ ಹೆಚ್ಚು ವೆಚ್ಚದ್ದಾಗಿದೆ. ಪ್ರತಿ ಎಕರೆ ಭೂಮಿ ಸರಾಸರಿ 3 ರಿಂದ 4 ಕೋಟಿ ರೂ. ಬೆಲೆ ಬಾಳುತ್ತದೆ. ಈ ಜಮೀನುಗಳ ಒಟ್ಟು ಮೌಲ್ಯವು 48,000-64,000 ಕೋಟಿ ರೂಪಾಯಿಗಳನ್ನು ಮೀರಬಹುದು ಎಂದು ಮೂಲಗಳು ತಿಳಿಸಿವೆ. ಇನ್ನು ಅತಿಕ್ರಮಣ ರಾಜಕಾರಣಿಗಳ ಮತ್ತು ಬಿಲ್ಡರ್​​ಗಳ ಹೊಂದಾಣಿಕೆಯಿಂದ ಆಗಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ 31 ಜಿಲ್ಲೆಗಳ ಪೈಕಿ, ಬೆಂಗಳೂರಿನ ನೆರೆ ಜಿಲ್ಲೆ ಕೋಲಾರವು ಅತಿ ಹೆಚ್ಚು ಅತಿಕ್ರಮಣವಾಗಿದೆ. ಇದು ಒಟ್ಟು ಮೂರನೇ ಒಂದು ಭಾಗದಷ್ಟು 88,310 ಎಕರೆ ಭೂಮಿ ಅತಿಕ್ರಮಣವಾಗಿದೆ. ಮಾಹಿತಿ ಪ್ರಕಾರ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಯಾವುದೇ ಜಮೀನು ಅತಿಕ್ರಮಣವಾಗಿಲ್ಲ.

ಇದನ್ನೂ ಓದಿ: Shivamogga News: 1980 ರಿಂದ ಇಲ್ಲಿಯವರೆಗೆ ಅರಣ್ಯ ಭೂಮಿ ಒತ್ತುವರಿ, ಒಟ್ಟು 2815 ಎಫ್​ಐಆರ್

ವಿಧಾನ ಪರಿಷತ್​ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಒತ್ತುವರಿಯಾಗಿರುವ ಜಮೀನಿನ ಒಟ್ಟು ವಿಸ್ತೀರ್ಣ ದೊಡ್ಡದಾಗಿದ್ದರೂ, ಇದರಲ್ಲಿ ಕೆಲವು ಜಮೀನುಗಳು ಸಾಗುವಳಿ ಹಂತದಲ್ಲಿರುವುದರಿಂದ ಕಡಿಮೆಯಾಗುವ ನಿರೀಕ್ಷೆಯಿದೆ ಮತ್ತು ಅಂತಹ ನಿವೇಶನಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಏಕೆಂದರೆ ಇಂತಹ ಜಮೀನುಗಳನ್ನು ಅತಿಕ್ರಮಣ ಎಂದು ಪರಿಗಣಿಸುವುದಿಲ್ಲ ಎಂದು ಹಿಂದಿನ ಸರ್ಕಾರದ ಅವಧಿಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂದರು.

ಅಧಿಕಾರಿಗಳ ಸಹಾಯವಿಲ್ಲದೆ ಅತಿಕ್ರಮಣವಾಗಲು ಸಾಧ್ಯವಿಲ್ಲ. ಇಂತಹ ಅತಿಕ್ರಮಣಗಳನ್ನು ತಡೆಯಲು ಹಲವು ಮಾರ್ಗಗಳಿವೆ. ಒತ್ತುವರಿ ತಡೆಯಲು ಈಗಿರುವ ಕಾನೂನುಗಳ ಸಮರ್ಪಕ ಅನುಷ್ಠಾನ ಅಗತ್ಯವಿದೆ. ಹೀಗಾಗಿ, ಈಗಿರುವ ವ್ಯವಸ್ಥೆಯನ್ನೇ ಮತ್ತಷ್ಟು ಬಿಗಿ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಭಾರೀ ಮಳೆಯ ಸಂದರ್ಭದಲ್ಲಿ ಪ್ರವಾಹದ ಸಂದರ್ಭಗಳನ್ನು ತಡೆಗಟ್ಟಲು ಒತ್ತುವರಿ ಮಾಡಿಕೊಳ್ಳಲಾದ ರಾಜಕಾಲುವೆ ತೆರವುಗೊಳಿಸುವ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ರಾಜ್ಯದಲ್ಲಿ ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಲ್ಲದೆ, 2 ಲಕ್ಷ ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!