AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಟ್ಟೆಪಾಡಿಗಾಗಿ ಯಾದಗಿರಿಯಿಂದ ಬೆಂಗಳೂರಿಗೆ ಬಂದಿದ್ದ 18 ವರ್ಷದ ಯುವತಿ ಆತ್ಮಹತ್ಯೆ

ಹೊಟ್ಟೆಪಾಡಿಗಾಗಿ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಯಾದಗಿರಿಯಿಂದ ಬೆಂಗಳೂರಿಗೆ ಬಂದಿದ್ದ 18 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿಯೊಂದಿಗೆ ಗಾರೆ ಕೆಲಸ ಮಾಡಿಕೊಂಡಿದ್ದ ಯುವತಿ ಏಕಾಏಕಿ ಇಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೊಟ್ಟೆಪಾಡಿಗಾಗಿ ಯಾದಗಿರಿಯಿಂದ ಬೆಂಗಳೂರಿಗೆ ಬಂದಿದ್ದ 18 ವರ್ಷದ ಯುವತಿ ಆತ್ಮಹತ್ಯೆ
ಭೀಮವ್ವ
ಜಗದೀಶ ಬಿ.
| Edited By: |

Updated on: Nov 17, 2024 | 6:03 PM

Share

ಬೆಂಗಳೂರು, (ನವೆಂಬರ್ 17): ಹೊಟೆಪಾಡಿಗಾಗಿ ಯಾದಗಿರಿಯಿಂದ ಬೆಂಗಳೂರಿಗೆ ಬಂದು ಗಾರೆ ಕೆಲಸ ಮಾಡುತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಕುರುಬರಹಳ್ಳಿಯ 19ನೇ ಮೇನ್ ನಲ್ಲಿರುವ ಮನೆಯಲ್ಲಿ 18 ವರ್ಷದ ಭೀಮವ್ವ ನೇಣಿಗೆ ಶರಣಾಗಿದ್ದಾಳೆ. ಮೃತ ಭೀಮವ್ವ ಮೂಲತಃ ಯಾದಗಿರಿಯ ಕ್ಯಾತನಾಳದ ನಿವಾಸಿ. ಭಾಗ್ಯಮ್ಮ- ಮಲ್ಲಣ್ಣ ದಂಪತಿಯ ಪುತ್ರಿ. ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಹೊಟ್ಟೆಪಾಡಿಗಾಗಿ ಯಾದಗಿರಿಯಿಂದ ಬೆಂಗಳೂರಿಗೆ ಬಂದು ಗಾರೆ ಕೆಲಸ ಮಾಡುತ್ತಿದ್ದಳು. ಎಂದಿನಂತೆ ತನ್ನ ತಾಯಿ ಜೊತೆ ಕೆಲಸ ಹೋಗಿ ಬಂದು ಏಕಾಏಕಿ ನೇಣಿಗೆ ಕೊರಳೊಡ್ಡಿದ್ದಾಳೆ.

ಭಾಗ್ಯಮ್ಮ- ಮಲ್ಲಣ್ಣ ದಂಪತಿಗೆ ಒಟ್ಟು ನಾಲ್ವರು ಹೆಣ್ಣು ಮಕ್ಕಳು. ಈ ಪೈಕಿ ಭೀಮವ್ವ ಹಿರಿಯ ಮಗಳಾಗಿದ್ದಳು. ಭೀಮವ್ವಳ ಕುಟುಂಬ ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದು, ಭೀಮವ್ವ ಸಹ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಗಾರೆ ಕೆಲಸಕ್ಕೆ ಹೋಗುತ್ತಿದ್ದಳು. ಎಂದಿನಂತೆ ಇಂದು (ನವೆಂಬರ್ 17) ಬೆಳಗ್ಗೆ ತಂದೆ-ತಾಯಿ ಜೊತೆ ಕೆಲಸಕ್ಕೆ ಹೋಗಿದ್ದ ಭೀಮವ್ವ, ಮಧ್ಯಾಹ್ನ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.

ಇದನ್ನೂ ಓದಿ: ಈಜುಕೊಳದಲ್ಲಿ ಮುಳುಗಿ ಪ್ರಾಣಬಿಟ್ಟ ಮೂವರು ಯುವತಿಯರ ಕೊನೆ ಕ್ಷಣ ಹೇಗಿತ್ತು? ವಿಡಿಯೋ ನೋಡಿ

ಗಾರೇ ಕೆಲಸ ಮುಗಿಸಿಕೊಂಡು ತಾಯಿ ಜೊತೆಗೆ ಭೀಮವ್ವ ಮನೆಗೆ ಬಂದಿದ್ದಾಳೆ. ಬಳಿಕ ತಾಯಿ ಭಾಗ್ಯಮ್ಮ ಬೇರೆಯವರ ಮನೆ ಕೆಲಸಕ್ಕೆಂದು ಹೋಗಿದ್ದರೆ, ಮೂವರು ತಂಗಿಯರು ಮನೆ ಹೊರಗಡೆ ಆಟವಾಡಲು ಹೋಗಿದ್ದರು. ಆಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಭೀಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀಲೇಔಟ್ ಪೊಲೀಸರ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಭೀಮವ್ವ ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವುದು ಪೊಲೀಸ್​ ತನಿಖೆಯಿಂದ ತಿಳಿದುಬರಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ