AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 195 ಬರ ಪೀಡಿತ ತಾಲೂಕುಗಳು: ಸರ್ಕಾರದಿಂದ ಅಧಿಕೃತ ಘೋಷಣೆ

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯ ಸಂಪುಟ ಉಪಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ, 195 ಬರ ಪೀಡಿತ ತಾಲ್ಲೂಕುಗಳು ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಅಲ್ಲದೇ ಬರ ತಾಲೂಕುಗಳಲ್ಲಿ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ಕರ್ನಾಟಕದ 195 ಬರ ಪೀಡಿತ ತಾಲೂಕುಗಳು: ಸರ್ಕಾರದಿಂದ ಅಧಿಕೃತ ಘೋಷಣೆ
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: |

Updated on:Sep 14, 2023 | 9:00 AM

Share

ಬೆಂಗಳೂರು, (ಸೆಪ್ಟೆಂಬರ್ 14) : ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ರಾಜ್ಯದ 195 ತಾಲೂಕುಗಳು ಬರ (drought) ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಒಟ್ಟು 195 ಬರ ತಾಲೂಕುಗಳು ಎಂದು ಘೋಷಿಸಲಾಗಿದೆ.

ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ ಎಂದು ಹೇಳಿದೆ. ಇನ್ನೂ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಮೊದಲು ಅಲ್ಲಿಯವರೆಗೂ ಘೋಷಿಸಿ ಆದೇಶಿಸಿದೆ.

ಇದನ್ನೂ ಓದಿ: ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ, ಸಿಎಂ ಸಿದ್ದರಾಮಯ್ಯಗೆ ಶಿಫಾರಸು: ಕೃಷ್ಣ ಬೈರೇಗೌಡ

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಸೂಚಿಸಿದ್ದು, ಕಾಲ ಕಾಲಕ್ಕೆ ಎಸ್​ಡಿಆರ್​ಎಫ್, ಎನ್​ಡಿಆರ್​ಎಫ್ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ನಿನ್ನೆ(ಸೆಪ್ಟೆಂಬರ್ 13) ವಿಧಾನಸೌಧದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಮಳೆಯಿಂದ ರಾಜ್ಯದ ವಿವಿಧ ತಾಲ್ಲೂಕುಗಳಲ್ಲಿನ ಬರ ಪರಿಸ್ಥಿತಿಯ ಬಗ್ಗೆ ನಡೆಸಿದ ವಿಸ್ತೃತ ಸಮೀಕ್ಷೆಯ ಮಾಹಿತಿಯ ವರದಿ ಪರಿಶೀಲಿಸಲಾಯಿತು. ಬರ ಪೀಡಿತ ಎಂದು ಘೋಷಿಸುವ ಸಂಬಂಧ ಕೇಂದ್ರದ ಮಾನದಂಡದ ಮಾರ್ಗಸೂಚಿಯ ಅಡಿಯಲ್ಲಿ ಬರುವ 161 ತಾಲೂಕು ಸೇರಿದಂತೆ ಮಳೆಯ ಕೊರತೆ ಇದ್ದರೂ “ಸಾಧಾರಣ” ಬರ ಸ್ಥಿತಿ ಇರುವ 34 ತಾಲ್ಲೂಕುಗಳನ್ನು ಸಹ ಬರ ಪೀಡಿತ ಎಂದು ಘೋಷಿಸುವಂತೆ ರಾಜ್ಯ ಸಚಿವ ಸಂಪುಟಕ್ಕೆ ಶಿಫಾರಸು ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:43 am, Thu, 14 September 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು