AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ತವರು ಜಿಲ್ಲೆಯಲ್ಲಿ ಭ್ರಷ್ಟಾಚಾರ: ಮೂಡಾ ವಿರುದ್ಧ 2.5 ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ ಆರೋಪ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪ ಮಾಡಿದ್ದಾರೆ. 2.5 ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದ್ದು, 50-50 ಅನುಮಾಪತ ನಿಯಮದ ಅಡಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

ಸಿಎಂ ತವರು ಜಿಲ್ಲೆಯಲ್ಲಿ ಭ್ರಷ್ಟಾಚಾರ: ಮೂಡಾ ವಿರುದ್ಧ 2.5 ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ ಆರೋಪ
ಸಿಎಂ ತವರು ಜಿಲ್ಲೆಯಲ್ಲಿ ಭ್ರಷ್ಟಾಚಾರ: ಮೂಡಾ ವಿರುದ್ಧ 2.5 ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ ಆರೋಪ
ದಿಲೀಪ್​, ಚೌಡಹಳ್ಳಿ
| Edited By: |

Updated on:Jun 29, 2024 | 4:00 PM

Share

ಮೈಸೂರು, ಜೂನ್​ 29: ವಾಲ್ಮೀಕಿ ಅಭಿವೃದ್ಧಿ ನಿಗಮದಂತೆಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆ ಆಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ತವರು ಜಿಲ್ಲೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವೊಂದು (Corruption) ಪತ್ತೆ ಆಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಈ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಹಳೇ ಫಲಾನುಭವಿಗಳಿಗೂ ಹೊಸ ನಿಯಮದಡಿ ಸೈಟ್ ನೀಡಿರುವ ಮೂಡಾ, ಮೂಲ ಫಲಾನುಭವಿಗಳ ಹೆಸರಿನಲ್ಲಿ ಪ್ರಭಾವಿಗಳಿಗೆ ಸೈಟ್ ಕೊಟ್ಟು ವಂಚನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಘು ಕೌಟಿಲ್ಯ, ಅವ್ಯವಹಾರದ ತನಿಖೆ ನ್ಯಾಯಯುತವಾಗಿ ನಡೆಯಲು ಪ್ರಭಾವಿಗಳು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ; 9 ಅಧಿಕಾರಿಗಳ ವಿರುದ್ಧ ದೂರು ದಾಖಲು

ಸಿಎಂ ಸಿದ್ದರಾಮಯ್ಯ ಅವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ರಾಜೀನಾಮೆ ಪಡೆಯಲಿ. ಮೂಡಾದಲ್ಲಿ ಆಗಿರುವ ಅವ್ಯವಹಾರ ಬಯಲಿಗೆಳೆಯಲು ಎಸ್​ಐಟಿಗೆ ನೀಡಬೇಕು. ಮೂಡಾ ಆಸ್ತಿ, ನಿವೇಶನ ಉಳಿಯಬೇಕಾದರೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಮೀನು ಕಬಳಿಸಲು ನಕಲಿ ದಾಖಲೆ ಸೃಷ್ಟಿ: ಮರಣ ಪತ್ರ ನೀಡಿದ್ದ ಶಿರಸ್ತೇದಾರ್​ ಅಮಾನತು

ಹಲವು ವರ್ಷಗಳಿಂದ ಮೈಸೂರಿನ ಜನತೆಗೆ ನಿವೇಶನ ಹಂಚಿಕೆ ಮಾಡಿಲ್ಲ. ಒಂದೇ ಒಂದು ನಿವೇಶನ ಹಂಚಿಕೆ ಮಾಡಲಾಗದ ಮೂಡಾ ಯಾಕೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರ ಸ್ವಜಿಲ್ಲೆಯಲ್ಲೇ ಭ್ರಷ್ಟಾಚಾರ ಆರೋಪ

ಕೊಪ್ಪಳ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಸ್ವಜಿಲ್ಲೆಯ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಅಧಿಕಾರಿಗಳ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಕನಕಗಿರಿ ಮತ್ತು ಆನೆಗೊಂದಿಯಲ್ಲಿ, ಎರಡು ಕಡೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯಿಂದ ಉತ್ಸವ ಮಾಡಲಾಗಿತ್ತು. ಆದ್ರೆ ಉತ್ಸವದ ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆಯಲ್ಲಿ ಅಧಿಕಾರಿಗಳು ಕಮಿಷನ್ ವ್ಯವಹಾರ ಮಾಡಿದ್ದಾರೆ ಅಂತ ಕೆಲ ಕಲಾವಿದರು ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:50 pm, Sat, 29 June 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು