AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಕೋಮುಗಲಭೆ: ಬರೊಬ್ಬರಿ 2.66 ಕೋಟಿ ಮೌಲ್ಯದ ಆಸ್ತಿ ನಾಶ

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಈ ಕೋಮುಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.

ನಾಗಮಂಗಲ ಕೋಮುಗಲಭೆ: ಬರೊಬ್ಬರಿ 2.66 ಕೋಟಿ ಮೌಲ್ಯದ ಆಸ್ತಿ ನಾಶ
ಸುಟ್ಟು ಕರಕಲಾದ ಅಂಗಡಿ
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ|

Updated on:Sep 18, 2024 | 9:40 AM

Share

ಮಂಡ್ಯ ಸೆಪ್ಟೆಂಬರ್​ 18: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಕೋಮುಗಲಭೆ (Nagamangala Violence) ಸಂಭವಿಸಿತ್ತು. ಈ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್​ ಬಾಂಬ್​ನಿಂದ ಹಲವು ಅಂಗಡಿಗಳು, ಸರಕುಗಳು ಸುಟ್ಟು ಭಸ್ಮವಾಗಿವೆ. ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ. ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.

ನಾಗಮಂಗಲ‌ ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿದೆ. ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿದೆ.

ಹೀಗಾಗಿ ವರದಿ ತಯಾರು ಮಾಡಲು ಎಸಿ ನೇತೃತ್ವದಲ್ಲಿ ಏಳು ಅಧಿಕಾರ ತಂಡ ರಚನೆ ಮಾಡಲಾಗಿತ್ತು. ಇದೀಗ ನಷ್ಟದ ಮೌಲ್ಯಮಾಪನ ಮಾಡಿ ವರದಿ ಸಿದ್ದಪಡಿಸಿ, ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮಾಹಿತಿ ನೀಡಿದರು. ಇನ್ನು ಎಫ್​ಐಆರ್​ನಲ್ಲಿ 4.5 ಕೋಟಿಯಷ್ಟು ನಷ್ಟವಾಗಿದೆ ಎಂದು ಉಲ್ಲೇಖಿಸಲಾಗಿದೆ. ದುಷ್ಕರ್ಮಿಗಳ ಕ್ರೌರ್ಯದಿಂದ, ವ್ಯಾಪಾರಸ್ಥರ ಬದುಕು ಬೀದಿ ಪಾಲಾಗಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?

ರಿಸರ್ವ್ ಪೊಲೀಸ್ ಸಿಬ್ಬಂದಿ ಊಟಕ್ಕೆ ಹೋದಾಗ ನಡೆಯಿತು ಗಲಭೆ!

ಗಲಾಟೆ ಹಿಂದೆ ಪೊಲೀಸರ ಲೋಪ ದೋಷ ಎದ್ದು ಕಾಣುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆಗೆ ಕಾವಲಿಗೆ 24 ಜನ ಡಿಎಆರ್​ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಈ ಸಿಬ್ಬಂದಿಗೆ ಊಟ ಕೊಡಿಸಲು ನಾಗಮಂಗಲ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಹಿಂದೇಟು ಹಾಕಿದ್ದರು. ಬದಲಿಗೆ 24 ಮಂದಿ ಡಿಎಆರ್​ ಸಿಬ್ಬಂದಿಯನ್ನು ಊಟಕ್ಕೆ ಬೇರೆ ಕಡೆ ಕಳುಹಿಸಿದ್ದರು. ರಿಸರ್ವ್ ಪೊಲೀಸ್ ಸಿಬ್ಬಂದಿ ‌ವಾಹನ ಹೊರಟ ಅರ್ಧ ಗಂಟೆ ನಂತರ ಕೋಮುಗಲಭೆ ಆರಂಭವಾಗಿತ್ತು.

ಗಲಾಟೆ ಆರಂಭವಾದಾಗ‌ ಸ್ಥಳದಲ್ಲಿ ಕೇವಲ ಏಳು ಸಿಬ್ಬಂದಿ‌ ಮಾತ್ರ ಇದ್ದರು. ಈ ಸಿಬ್ಬಂದಿ ಪ್ರಾಣ ಉಳಿಸಿಕೊಳ್ಳಲು‌ ಪರದಾಡಿದರು. ಪಿಎಸ್​ಐ ರವಿ ಸೇರಿದಂತೆ ಹಲವು ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ದಾಳಿ ಮಾಡಿದ್ದರು. ರಿಸರ್ವ್ ಸಿಬ್ಬಂದಿ ವಾಪಸ್‌ ಬರುವಷ್ಟರಲ್ಲಿ ಪರಿಸ್ಥಿತಿ ಕೈಮೀರಿತ್ತು. ಕಲ್ಲು, ದೊಣ್ಣೆ, ಮಾರಕಾಸ್ತ್ರ, ಪೆಟ್ರೋಲ್ ಬಾಂಬ್ ಎಸೆಯುವ ಜೊತೆಗೆ ‌ಅಂಗಡಿ ಮುಂಗಟ್ಟಿಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆಯಲಾಗಿತ್ತು. ಹೀಗಾಗಿ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗೃಹ ಇಲಾಖೆ ಅಮಾನತು ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:02 am, Wed, 18 September 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!