AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಕೋಮುಗಲಭೆ: ಬರೊಬ್ಬರಿ 2.66 ಕೋಟಿ ಮೌಲ್ಯದ ಆಸ್ತಿ ನಾಶ

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಈ ಕೋಮುಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.

ನಾಗಮಂಗಲ ಕೋಮುಗಲಭೆ: ಬರೊಬ್ಬರಿ 2.66 ಕೋಟಿ ಮೌಲ್ಯದ ಆಸ್ತಿ ನಾಶ
ಸುಟ್ಟು ಕರಕಲಾದ ಅಂಗಡಿ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on:Sep 18, 2024 | 9:40 AM

Share

ಮಂಡ್ಯ ಸೆಪ್ಟೆಂಬರ್​ 18: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಕೋಮುಗಲಭೆ (Nagamangala Violence) ಸಂಭವಿಸಿತ್ತು. ಈ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್​ ಬಾಂಬ್​ನಿಂದ ಹಲವು ಅಂಗಡಿಗಳು, ಸರಕುಗಳು ಸುಟ್ಟು ಭಸ್ಮವಾಗಿವೆ. ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ. ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.

ನಾಗಮಂಗಲ‌ ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿದೆ. ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿದೆ.

ಹೀಗಾಗಿ ವರದಿ ತಯಾರು ಮಾಡಲು ಎಸಿ ನೇತೃತ್ವದಲ್ಲಿ ಏಳು ಅಧಿಕಾರ ತಂಡ ರಚನೆ ಮಾಡಲಾಗಿತ್ತು. ಇದೀಗ ನಷ್ಟದ ಮೌಲ್ಯಮಾಪನ ಮಾಡಿ ವರದಿ ಸಿದ್ದಪಡಿಸಿ, ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮಾಹಿತಿ ನೀಡಿದರು. ಇನ್ನು ಎಫ್​ಐಆರ್​ನಲ್ಲಿ 4.5 ಕೋಟಿಯಷ್ಟು ನಷ್ಟವಾಗಿದೆ ಎಂದು ಉಲ್ಲೇಖಿಸಲಾಗಿದೆ. ದುಷ್ಕರ್ಮಿಗಳ ಕ್ರೌರ್ಯದಿಂದ, ವ್ಯಾಪಾರಸ್ಥರ ಬದುಕು ಬೀದಿ ಪಾಲಾಗಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?

ರಿಸರ್ವ್ ಪೊಲೀಸ್ ಸಿಬ್ಬಂದಿ ಊಟಕ್ಕೆ ಹೋದಾಗ ನಡೆಯಿತು ಗಲಭೆ!

ಗಲಾಟೆ ಹಿಂದೆ ಪೊಲೀಸರ ಲೋಪ ದೋಷ ಎದ್ದು ಕಾಣುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆಗೆ ಕಾವಲಿಗೆ 24 ಜನ ಡಿಎಆರ್​ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಈ ಸಿಬ್ಬಂದಿಗೆ ಊಟ ಕೊಡಿಸಲು ನಾಗಮಂಗಲ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಹಿಂದೇಟು ಹಾಕಿದ್ದರು. ಬದಲಿಗೆ 24 ಮಂದಿ ಡಿಎಆರ್​ ಸಿಬ್ಬಂದಿಯನ್ನು ಊಟಕ್ಕೆ ಬೇರೆ ಕಡೆ ಕಳುಹಿಸಿದ್ದರು. ರಿಸರ್ವ್ ಪೊಲೀಸ್ ಸಿಬ್ಬಂದಿ ‌ವಾಹನ ಹೊರಟ ಅರ್ಧ ಗಂಟೆ ನಂತರ ಕೋಮುಗಲಭೆ ಆರಂಭವಾಗಿತ್ತು.

ಗಲಾಟೆ ಆರಂಭವಾದಾಗ‌ ಸ್ಥಳದಲ್ಲಿ ಕೇವಲ ಏಳು ಸಿಬ್ಬಂದಿ‌ ಮಾತ್ರ ಇದ್ದರು. ಈ ಸಿಬ್ಬಂದಿ ಪ್ರಾಣ ಉಳಿಸಿಕೊಳ್ಳಲು‌ ಪರದಾಡಿದರು. ಪಿಎಸ್​ಐ ರವಿ ಸೇರಿದಂತೆ ಹಲವು ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ದಾಳಿ ಮಾಡಿದ್ದರು. ರಿಸರ್ವ್ ಸಿಬ್ಬಂದಿ ವಾಪಸ್‌ ಬರುವಷ್ಟರಲ್ಲಿ ಪರಿಸ್ಥಿತಿ ಕೈಮೀರಿತ್ತು. ಕಲ್ಲು, ದೊಣ್ಣೆ, ಮಾರಕಾಸ್ತ್ರ, ಪೆಟ್ರೋಲ್ ಬಾಂಬ್ ಎಸೆಯುವ ಜೊತೆಗೆ ‌ಅಂಗಡಿ ಮುಂಗಟ್ಟಿಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆಯಲಾಗಿತ್ತು. ಹೀಗಾಗಿ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗೃಹ ಇಲಾಖೆ ಅಮಾನತು ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:02 am, Wed, 18 September 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು