AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ ವಂಚನೆ: ಸ್ಪಷ್ಟನೆ ನೀಡಿದ ಮಂಗಳೂರು ಸಮಾಜ ಸೇವಾ ಬ್ಯಾಂಕ್

ಮಂಗಳೂರಿನಲ್ಲಿ ನಡೆದ 2 ಕೋಟಿ ರೂ. ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣದ ಬಗ್ಗೆ ಸಮಾಜ ಸೇವಾ ಸಹಕಾರಿ ಸಂಘ ಸ್ಪಷ್ಟನೆ ನೀಡಿದೆ. ಸಂಘದ ವಿರುದ್ಧ ಹರಿದಾಡುತ್ತಿರುವ ಆರೋಪಗಳನ್ನು ತಳ್ಳಿಹಾಕಿರುವ ಸಂಘ, ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ. ಈ ಘಟನೆಯಲ್ಲಿ 28 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ ವಂಚನೆ: ಸ್ಪಷ್ಟನೆ ನೀಡಿದ ಮಂಗಳೂರು ಸಮಾಜ ಸೇವಾ ಬ್ಯಾಂಕ್
ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ ವಂಚನೆ: ಸ್ಪಷ್ಟನೆ ನೀಡಿದ ಮಂಗಳೂರು ಸಮಾಜ ಸೇವಾ ಬ್ಯಾಂಕ್
ಅಶೋಕ್​ ಪೂಜಾರಿ
| Edited By: |

Updated on: Dec 25, 2024 | 3:59 PM

Share

ಮಂಗಳೂರು, ಡಿಸೆಂಬರ್​ 25: ನಕಲಿ ಚಿನ್ನ (fake gold) ಅಡವಿಟ್ಟು ವ್ಯಕ್ತಿ ಓರ್ವ ರೂ. 2 ಕೋಟಿಗೂ ಅಧಿಕ ಸಾಲವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿತ್ತು. ಆದರೆ, ಬ್ಯಾಂಕ್​​ನ ಪ್ರಧಾನ ಕಚೇರಿಯಿಂದ ಪ್ರಕರಣದ ಕುರಿತಾಗಿ ಸಮಜಾಯಿಷಿ ಸಂದೇಶ ನೀಡಿದ್ದು, ಸಮಾಜ ಸೇವಾ ಸಹಕಾರಿ ಸಂಘವು ಉತ್ತಮ ಲಾಭದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇದನ್ನು ಸಹಿಸಲಾಗದ ಕೆಲವರು ಸಂಘ, ಸಂಘದ ಆಡಳಿತ ಮಂಡಳಿಯ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಟಿವಿ 9ಗೆ ಪತ್ರದ ಮೂಲಕ ಸಮಜಾಯಿಷಿಯ ಸಂದೇಶ ಕಳುಹಿಸಿರುವ ಬ್ಯಾಂಕ್, ನಮ್ಮ ಸಂಘದಲ್ಲಿ ಇಂತಹ ಒಂದು ಘಟನೆ ಆಗಿದೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಘಟನೆ ಬಗ್ಗೆ ನಾವು ಕಾನೂನು ರೀತಿಯಲ್ಲಿ ಎಲ್ಲಾ ಕ್ರಮಕೈಗೊಂಡಿದ್ದೇವೆ. ಯಾರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು ಅದನ್ನು ಕೂಡ ನಮ್ಮ ಸಂಘದ ಆಡಳಿತ ಮಂಡಳಿಯ ಸಭೆ ಕರೆದು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ

ಮುಂದೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಇಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮಗೆ ಪೊಲೀಸರ ಮೇಲೆ ಮತ್ತು ನ್ಯಾಯಾಲಯದ ಮೇಲೆ ಗೌರವ, ನಂಬಿಕೆ ಇದೆ ಎಂದಿದ್ದಾರೆ.

ಪುತ್ತೂರು ತಾಲೂಕಿನ ಈಶ್ವರಮಂಗಲದ ಅಬೂಬಕ್ಕರ್ ಸಿದ್ದಿಕ್​ ಎಂಬಾತ ನಕಲಿ ಚಿನ್ನ ಅಡವಿಟ್ಟು 2 ಕೋಟಿ 11 ಲಕ್ಷದ 89 ಸಾವಿರದ 800 ರೂ ಸಾಲ ನೀಡಿದ್ದ ವ್ಯಕ್ತಿ. ಚಿನ್ನ ಪರೀಕ್ಷೆ ನಡೆಸುವ ಸರಫ, ಬ್ಯಾಂಕ್​ನ ಅಧ್ಯಕ್ಷ, ಜನರಲ್ ಮ್ಯಾನೇಜರ್, ನಿರ್ದೇಶಕರು, ಬ್ಯಾಂಕ್ ಸಿಬ್ಬಂದಿಗಳ ಸಹಕಾರದಿಂದಲೇ ಈ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: 4 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಆರ್‌ಐ

ಸದ್ಯ ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕರಿಂದ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 28 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಇಳಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ