ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ ಎರಡು ಬಲಿ! ಎಲ್ಲೆಲ್ಲಿ?

ಕಲಬುರಗಿ: ಮಹಾಮಾರಿ ಕೊರೊನಾ ವೈರಸ್​ ದೇಶದಲ್ಲೇ ಮೊದಲು ಕಾಲಿಟ್ಟಿದ್ದು ರಾಜ್ಯದ ಕಲಬುರಗಿ ಜಿಲ್ಲೆಗೆ. ಕೊರೊನಾ ವೈರಸ್​ಗೆ ಕಲಬುರಗಿ ಜಿಲ್ಲೆಯ 76 ವರ್ಷದ ವೃದ್ಧ ಮೊದಲ ಬಲಿಯಾಗಿದ್ದರು. ಇದೀಗ ಜಿಲ್ಲೆಯಲ್ಲಿ ಕೊವಿಡ್ ಸೋಂಕಿಗೆ ಮತ್ತೆ ಒಬ್ಬ ವೃದ್ಧ ಬಲಿಯಾಗಿದ್ದಾರೆ. ಮೇ 11ರಂದು ಉಸಿರಾಟ ಸಮಸ್ಯೆಯಿಂದ 60 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಜಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯುವಾಗ ವೃದ್ಧ ಸಾವಿಗೀಡಾಗಿದ್ದಾರೆ. ಕೊರೊನಾ ಕಂಟೇನ್‌ಮೆಂಟ್‌ ಜೋನ್‌ನಲ್ಲಿ ಅವರ ಮನೆಯಿತ್ತು. ಆದ್ರೆ ವೃದ್ಧನಿಗೆ ಹೇಗೆ ಸೋಂಕು ಬಂದಿದೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಸಂಬಂಧಪಟ್ಟ […]

ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ ಎರಡು ಬಲಿ! ಎಲ್ಲೆಲ್ಲಿ?
ಸಾಧು ಶ್ರೀನಾಥ್​

Updated on: May 13, 2020 | 2:49 PM

ಕಲಬುರಗಿ: ಮಹಾಮಾರಿ ಕೊರೊನಾ ವೈರಸ್​ ದೇಶದಲ್ಲೇ ಮೊದಲು ಕಾಲಿಟ್ಟಿದ್ದು ರಾಜ್ಯದ ಕಲಬುರಗಿ ಜಿಲ್ಲೆಗೆ. ಕೊರೊನಾ ವೈರಸ್​ಗೆ ಕಲಬುರಗಿ ಜಿಲ್ಲೆಯ 76 ವರ್ಷದ ವೃದ್ಧ ಮೊದಲ ಬಲಿಯಾಗಿದ್ದರು. ಇದೀಗ ಜಿಲ್ಲೆಯಲ್ಲಿ ಕೊವಿಡ್ ಸೋಂಕಿಗೆ ಮತ್ತೆ ಒಬ್ಬ ವೃದ್ಧ ಬಲಿಯಾಗಿದ್ದಾರೆ.

ಮೇ 11ರಂದು ಉಸಿರಾಟ ಸಮಸ್ಯೆಯಿಂದ 60 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಜಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯುವಾಗ ವೃದ್ಧ ಸಾವಿಗೀಡಾಗಿದ್ದಾರೆ. ಕೊರೊನಾ ಕಂಟೇನ್‌ಮೆಂಟ್‌ ಜೋನ್‌ನಲ್ಲಿ ಅವರ ಮನೆಯಿತ್ತು. ಆದ್ರೆ ವೃದ್ಧನಿಗೆ ಹೇಗೆ ಸೋಂಕು ಬಂದಿದೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈವರೆಗೆ ಕಲಬುರಗಿ ಜಿಲ್ಲೆಯಲ್ಲಿ ವೈರಸ್ ಸೋಂಕಿಗೆ ಒಟ್ಟು 7 ಜನರು ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬೋಳೂರಿನ 58 ವರ್ಷದ ಮಹಿಳೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಮಿದುಳು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಮಂಗಳೂರಿನ ಕೊವಿಡ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಮಹಿಳೆಗೆ ಆಸ್ಪತ್ರೆಯ ಸ್ವೀಪರ್‌ ಸಂಪರ್ಕದಿಂದ ಸೋಂಕು ತಗುಲಿತ್ತು. ಏಪ್ರಿಲ್ 30ರಂದು ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಈ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 4ಮಂದಿ ಬಲಿಯಾಗಿದ್ದಾರೆ.

Published On - 2:39 pm, Wed, 13 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us