ದೇಶದಲ್ಲಿ 20 ಕೊರೊನಾ ಜೆಎನ್​1 ಪ್ರಕರಣ, ಕರ್ನಾಟಕದಲ್ಲಿ ಒಂದು ಸಾವು: ದಿನೇಶ್ ಗುಂಡೂರಾವ್ ಮಾಹಿತಿ

ರಾಜ್ಯದಲ್ಲಿ ನಿನ್ನೆ ಕೊರೊನಾ ವೈರಸ್ ಸೋಂಕಿ​ಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್​ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. ದೇಶದಲ್ಲಿ 20 JN.1 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವರ ಸಭೆಯ ಬಳಿಕ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ದೇಶದಲ್ಲಿ 20 ಕೊರೊನಾ ಜೆಎನ್​1 ಪ್ರಕರಣ, ಕರ್ನಾಟಕದಲ್ಲಿ ಒಂದು ಸಾವು: ದಿನೇಶ್ ಗುಂಡೂರಾವ್ ಮಾಹಿತಿ
ದಿನೇಶ್ ಗುಂಡೂರಾವ್
Follow us
| Updated By: ಗಣಪತಿ ಶರ್ಮ

Updated on:Dec 20, 2023 | 11:56 AM

ಬೆಂಗಳೂರು, ಡಿಸೆಂಬರ್ 20: ಕೊರೊನಾ ವೈರಸ್​ನ ಜೆಎನ್​ 1 (Coronavirus JN.1) ಉಪ ತಳಿಯ ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಕರ್ನಾಟಕದಲ್ಲಿ ಕೋವಿಡ್​ ಸೋಂಕಿನಿಂದಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಂಗಳವಾರ ಮಾಹಿತಿ ನೀಡಿದರು. ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅದರಲ್ಲಿ ಗುಂಡೂರಾವ್ ಭಾಗವಹಿಸಿದ್ದಾರೆ. ಸಭೆಯ ನಂತರ ವಿಕಾಸ ಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ನಿನ್ನೆ ಕೊರೊನಾ ವೈರಸ್ ಸೋಂಕಿ​ಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್​ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. JN.1 ವೈರಸ್​​ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ 20 JN.1 ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್​ ಪತ್ತೆಯಾಗಿದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು.

ಕೋವಿಡ್ ಕುರಿತು ಗುರುವಾರ ತಾಂತ್ರಿಕ ಸಲಹಾ ಸಮಿತಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಗುಂಡೂರಾವ್ ತಿಳಿಸಿದರು.

ಹೈರಿಸ್ಕ್ ದೇಶಗಳಿಂದ ಬಂದವರಿಗೂ ಸದ್ಯಕ್ಕಿಲ್ಲ ಸ್ಕ್ರೀನಿಂಗ್

ಹೈರಿಸ್ಕ್​​ ದೇಶಗಳಿಂದ ಬರುವವರಿಗೆ ಸದ್ಯಕ್ಕೆ ಸ್ಕ್ರೀನಿಂಗ್ ಇಲ್ಲ. ಕೇರಳದಿಂದ ಬರುವ ಅಯ್ಯಪ್ಪ ಭಕ್ತರಿಗೂ ಸ್ಕ್ರೀನಿಂಗ್​​ ಮಾಡಲು ಹೇಳಿಲ್ಲ. ಕೋವಿಡ್ ಲಕ್ಷಣವಿದ್ದರೆ ಮಾತ್ರ ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ. ಕೇರಳ ಗಡಿಯ 4 ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಟೆಸ್ಟ್​ ಮಾಡಲಾಗುತ್ತದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು.

ಇದನ್ನೂ ಓದಿ: ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ: 9 ದಿನಗಳಲ್ಲಿ ಕೋವಿಡ್ ಪ್ರಕರಣ ದ್ವಿಗುಣ

ಕಳೆದ ಬಾರಿ ಶೇ 90ರಷ್ಟು ಜನರು ಹೋಂ ಕ್ವಾರಂಟೈನ್​ನಲ್ಲಿ ಇದ್ದರು. ಟೆಸ್ಟಿಂಗ್ ಕಿಟ್, ಮಾಸ್ಕ್, ಔಷಧ ವಿತರಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಸಂಬಂಧ ನಾಳೆ ಚರ್ಚೆ ಆಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಆರ್​ಟಿ-ಪಿಸಿಆರ್ ಟೆಸ್ಟ್ ದರದ ಬಗ್ಗೆ ಚರ್ಚೆ ಮಾಡುತ್ತೇವೆ. ಸದ್ಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆರ್​ಟಿ-ಇಸಿಆರ್ ಟೆಸ್ಟ್ ಉಚಿತ ಇದೆ. ರಾಜ್ಯದಲ್ಲಿ ನಿತ್ಯ ಐದು ಸಾವಿರ ಟೆಸ್ಟಿಂಗ್ ಮಾಡುತ್ತೇವೆ ಎಂದು ಗುಂಡೂರಾವ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Wed, 20 December 23

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!